ಹುಬ್ಬಳ್ಳಿ ಎಪಿಎಂಸಿ: ಆರ್ಥಿಕ ಸಂಕಷ್ಟ ಆದಾಯ ಮೂಲಕ್ಕೆ ತಡಕಾಟ


Team Udayavani, Aug 7, 2021, 1:08 PM IST

fyt

ವರದಿ: ಅಮರೇಗೌಡ ಗೋನವಾರ

ಹುಬ್ಬಳ್ಳಿ: ಏಷ್ಯಾದ ಎರಡನೇ ಅತಿದೊಡ್ಡ ಮಾರುಕಟ್ಟೆ ಎಂಬ ಹೆಮ್ಮೆ ಹೊಂದಿರುವ ಇಲ್ಲಿನ ಅಮರಗೋಳದ ಜಗಜ್ಯೋತಿ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆಗೆ ಆದಾಯ ಕುಸಿತದಿಂದ ಆರ್ಥಿಕ ಸಂಕಷ್ಟ ಎದುರಾಗಿದ್ದು, ವೆಚ್ಚಗಳನ್ನು ನೀಗಿಸುವ ನಿಟ್ಟಿನಲ್ಲಿ ಶೇ.50 ಸಿಬ್ಬಂದಿ ಕಡಿತ ಮಾಡಲಾಗಿದೆ. ಭವಿಷ್ಯದಲ್ಲಿ ಆದಾಯ ಮೂಲ ವೃದ್ಧಿಸುವ ನಿಟ್ಟಿನಲ್ಲಿ ಎಪಿಎಂಸಿ ಚಿಂತನೆಗೆ ಮುಂದಾಗಿದೆ.

ಕೃಷಿ ಉತ್ಪನ್ನಗಳ ಖರೀದಿ ಮೇಲಿನ ಸೆಸ್‌ಅನ್ನು ಸರಕಾರ ಕಡಿತಗೊಳಿಸಿದ್ದರಿಂದ ಎಪಿಎಂಸಿಯ ಆದಾಯಕ್ಕೆ ದೊಡ್ಡ ಪೆಟ್ಟು ಬಿದ್ದದ್ದು ಒಂದು ಕಡೆಯಾದರೆ, ಇನ್ನೊಂದು ಕಡೆ ಮಾರುಕಟ್ಟೆ ಹೊರಗಡೆ ಖರೀದಿಸಿದರೆ ಸೆಸ್‌ ಇಲ್ಲವಾಗಿದ್ದು, ಎಪಿಎಂಸಿ ಪ್ರಾಂಗಣದ ಒಳಗಡೆ ವಹಿವಾಟು ಸಹ ಕುಂಠಿತವಾಗುತ್ತಿರುವುದು, ಕೋವಿಡ್‌ ಲಾಕ್‌ಡೌನ್‌, ಅತಿವೃಷ್ಟಿ, ಬೆಳೆಹಾನಿ ಇನ್ನಿತರ ಕಾರಣಗಳು ಸಹ ಎಪಿಎಂಸಿಗೆ ಆರ್ಥಿಕ ಸಂಕಷ್ಟ ಹೆಚ್ಚಿಸುವಲ್ಲಿ ತಮ್ಮದೇ ಪಾತ್ರ ತೋರತೊಡಗಿವೆ. ಒಟ್ಟಾರೆಯಾಗಿ ಹುಬ್ಬಳ್ಳಿ ಎಪಿಎಂಸಿಗೆ ಬರುವ ವಾರ್ಷಿಕ ಆದಾಯದಲ್ಲಿ ಶೇ. 80-90 ಖೋತಾ ಆದಂತಾಗಿದೆ.

432 ಎಕರೆ ವ್ಯಾಪ್ತಿ ಮಾರುಕಟ್ಟೆ: ಹುಬ್ಬಳ್ಳಿಯ ಅಮರಗೋಳ ವ್ಯಾಪ್ತಿಯಲ್ಲಿರುವ ಜಗಜ್ಯೋತಿ ಬಸವೇಶ್ವರ ಕೃಷಿ ಉತ್ಪನ್ನ ಮಾರುಕಟ್ಟೆ ಸುಮಾರು 432 ಎಕರೆ ವಿಶಾಲ ಪ್ರದೇಶ ಹೊಂದಿದೆ. ಅಕ್ಕಿಹೊಂಡದಲ್ಲಿದ್ದ ಹೋಲ್‌ಸೇಲ್‌ ಮಾರುಕಟ್ಟೆಯನ್ನು ಕೆಲ ವರ್ಷಗಳ ಹಿಂದೆ ಇಲ್ಲಿಗೆ ಸ್ಥಳಾಂತರಿಸಿದ್ದರಿಂದ ಎಪಿಎಂಸಿಯ ಕಳೆ ಹೆಚ್ಚುವಂತಾಗಿತ್ತು. ಒಟ್ಟಾರೆಯಾಗಿ ಎಪಿಎಂಸಿ ಪ್ರಾಂಗಣದಲ್ಲಿ ಸುಮಾರು 753 ಮಳಿಗೆಗಳು ಇದ್ದು, ಅನೇಕ ಗೋದಾಮುಗಳು ಇವೆ. ಎಪಿಎಂಸಿಯ ಸುಮಾರು 90 ಎಕರೆ ಭೂಮಿಯನ್ನು ಸೇವಾ ಸಂಸ್ಥೆ, ಕೃಷಿಗೆ ಸಂಬಂಧಿಸಿದ ಕಾರ್ಯಗಳಿಗೆಂದು ನೀಡಲಾಗಿದೆ. ರೈತರಿಂದ ನೇರವಾಗಿ ಗ್ರಾಹಕರಿಗೆ ಉತ್ಪನ್ನಗಳನ್ನು ತಲುಪಿಸುವ ಚಿಂತನೆ ನಿಟ್ಟಿನಲ್ಲಿ ಸರಕಾರ ಕೈಗೊಂಡ ಭಾನುವಾರ ಸಂತೆಯ ಮಳಿಗೆಗಳಿಗೆ, ಕೈಗಾರಿಕಾ ಪ್ರದರ್ಶನಕ್ಕೆ ಶಾಶ್ವತ ಕಟ್ಟಡ ಸೇರಿದಂತೆ ವಿವಿಧ ಕಾರ್ಯಗಳಿಗೆ ಎಪಿಎಂಸಿ ಜಾಗ ನೀಡಿದೆ.

14-15 ಕೋಟಿ ಆದಾಯ..ಆದರೀಗ? 

ಹುಬ್ಬಳ್ಳಿ ಎಪಿಎಂಸಿ ಎಂದರೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಪ್ರಮುಖ ಕೇಂದ್ರ ಎಂಬ ಪ್ರತೀತಿ ಇದೆ. ಕೃಷಿ ಉತ್ಪನ್ನಗಳ ವಹಿವಾಟು, ಹೋಲ್‌ಸೇಲ್‌ ಕಿರಾಣಿ, ತರಕಾರಿ, ಹಣ್ಣುಗಳ ವಹಿವಾಟು ಹೀಗೆ ವಿವಿಧ ವಹಿವಾಟಿಗೆ ತನ್ನದೇ ಖ್ಯಾತಿ ಹೊಂದಿದೆ. ಇಲ್ಲಿನ ಎಪಿಎಂಸಿಗೆ ಸೆಸ್‌ ರೂಪದಲ್ಲಿ ವಾರ್ಷಿಕ ಅಂದಾಜು 14-15 ಕೋಟಿ ಆದಾಯ ಬರುತ್ತಿತ್ತು. 2019-20ರಲ್ಲಿ ಎಪಿಎಂಸಿಗೆ ಒಟ್ಟು 14 ಕೋಟಿ ರೂ. ಆದಾಯ ಬಂದಿತ್ತು. ಅದರಲ್ಲಿ ಅಂದಾಜು 10 ಕೋಟಿ ವೆಚ್ಚವಾಗಿ 4 ಕೋಟಿ ರೂ. ಉಳಿದಿತ್ತು. ಸರಕಾರ ಸೆಸ್‌ ಕಡಿತ ಮಾಡಿರುವುದು, ಮಾರುಕಟ್ಟೆ ಹೊರಗಡೆ ಖರೀದಿಗೆ ಉತ್ತೇಜನಕ್ಕೆ ಮುಂದಾಗಿರುವುದು ಸಹಜವಾಗಿಯೇ ಎಪಿಎಂಸಿ ಅಸ್ತಿತ್ವಕ್ಕೆ ಧಕ್ಕೆ ತರುತ್ತಿದೆ.

ಎಪಿಎಂಸಿಯಲ್ಲಿ ಕೃಷಿ ಉತ್ಪನ್ನಗಳ ವಹಿವಾಟಿನ ಮೇಲೆ ಈ ಮೊದಲು 100ರೂ.ಗೆ 1.50 ರೂ. ಸೆಸ್‌ ಆಕರಣೆ ಮಾಡಲಾಗುತ್ತಿತ್ತು. ಸೆಸ್‌ ಎಪಿಎಂಸಿ ಆದಾಯಕ್ಕೆ ಪ್ರಮುಖ ಮೂಲವಾಗಿದೆ. ಆದರೆ, ಸರಕಾರ ಸೆಸ್‌ಅನ್ನು 1.50ರೂ.ನಿಂದ 60 ಪೈಸೆಗೆ ಇಳಿಸಿದ್ದು, 90 ಪೈಸೆ ಖೋತಾ ಆದಂತಾಗಿದೆ. ಎಪಿಎಂಸಿ ವಾರ್ಷಿಕ ಆದಾಯ ಇದೀಗ ಶೇ.25-30ರಷ್ಟಕ್ಕೆ ಕುಸಿಯುವಂತಾಗಿದೆ. ಎಪಿಎಂಸಿಯಲ್ಲಿ ಇ-ಟೆಂಡರ್‌ ನಡೆಯುತ್ತಿರುವುದು, ತರಕಾರಿ-ಹಣ್ಣು ವಹಿವಾಟು ನಡೆಯುತ್ತಿರುವುದು ಕೊಂಚ ಕೈ ಹಿಡಿಯುವಂತೆ ಮಾಡಿದೆ. ಒಟ್ಟಾರೆಯಾಗಿ ಆದಾಯ ಕುಸಿದಿರುವುದು, ಆದಾಯ ವೃದ್ಧಿಯ ಪರ್ಯಾಯ ಮಾರ್ಗಕ್ಕೆ ಎಪಿಎಂಸಿ ತಡಕಾಡುವಂತಾಗಿದೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.