ಅಣ್ಣನ ಶವ ತಂಗಿ ಕಾರಿನಲ್ಲಿದ್ದರೂ ಗೊತ್ತಿರಲಿಲ್ಲವಂತೆ!

ರುಂಡ-ಮುಂಡ ಪ್ರಕರಣ: ವಿಚಾರಣೆ ವೇಳೆ ಚಿತ್ರನಟಿ ಶನಾಯ ಹೇಳಿಕೆ? ­ಇನ್ನುಳಿದ ಆರೋಪಿಗಳಿಗೆ ಶೋಧ

Team Udayavani, Apr 22, 2021, 10:40 PM IST

fghydtyetyer

ಹುಬ್ಬಳ್ಳಿ: ರುಂಡ-ಮುಂಡ ಪ್ರಕರಣಕ್ಕೆ ಸಂಬಂಧಿಸಿ ಕೊಲೆಯಾದ ರಾಕೇಶ ಕಾಟವೆ ಶವವು ತನ್ನ ಕಾರಿನಲ್ಲಿದ್ದರೂ ಆತನ ಸಹೋದರಿ, ಚಿತ್ರನಟಿ ಶನಾಯಗೆ ಇದ್ಯಾವುದು ಗೊತ್ತಿರಲಿಲ್ಲವಂತೆ. ಹೀಗೆಂದು ಪೊಲೀಸರ ಎದುರು ಹೇಳಿಕೊಂಡಿದ್ದಾಳೆಂದು ತಿಳಿದು ಬಂದಿದೆ.

ಶನಾಯ ಮತ್ತು ನಿಯಾಜ ನಡುವಿನ ಪ್ರೇಮ ವಿರೋಧಿಸುತ್ತಿದ್ದ ರಾಕೇಶನನ್ನು ತೌಸಿಫ್‌ ಮತ್ತು ನಿಯಾಜ ಏ.9ರಂದು ಬೈಕ್‌ನಲ್ಲಿ ಕರೆದುಕೊಂಡು ಹೋಗಿ, ತಾರಿಹಾಳದ ಸೇತುವೆ ಬಳಿ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾರೆ. ನಂತರ ಹಳೇಹುಬ್ಬಳ್ಳಿ ಸಿಮ್ಲಾ ನಗರಕ್ಕೆ ಶವ ತಂದು ಶಯಾನಳ ರಿಟ್ಜ್ ಕಾರಿನಲ್ಲಿಟ್ಟಿದ್ದಾರೆ. ಬೈಕ್‌ ಅಲ್ಲಿಯೇ ಬಿಟ್ಟಿದ್ದಾರೆ. ಇದೇ ವೇಳೆ ನಿಯಾಜ ಮತ್ತು ಶನಾಯ ತಮ್ಮ ಬಾಡಿಗೆ ಮನೆಯನ್ನು ಸಿಮ್ಲಾ ನಗರದಿಂದ ಕೇಶ್ವಾಪುರದ ಮನೋಜ್‌ ಪಾರ್ಕ್‌ಗೆ ಸ್ಥಳಾಂತರ ಮಾಡುತ್ತಿರುತ್ತಾರೆ. ಹೀಗಾಗಿ ರಾತ್ರಿ ಶನಾಯಳನ್ನು ಅವಳ ಕಾರಿನಲ್ಲಿ ಮನೋಜ ಪಾರ್ಕ್‌ಗೆ ಬಿಟ್ಟು ಬಂದಿದ್ದಾರೆ. ಅದರಲ್ಲಿ ಶವ ಇದ್ದದ್ದು ಅವಳಿಗೆ ಗೊತ್ತಾಗಿಲ್ಲವಂತೆ. ನಂತರ ಶಿಮ್ಲಾ ನಗರಕ್ಕೆ ಬಂದು, ಕಾರಿನಲ್ಲಿದ್ದ ಶವವನ್ನು ಬಾತ್‌ರೂಮ್‌ನಲ್ಲಿಟ್ಟಿದ್ದಾರೆ.

ರಾತ್ರಿ ತೌಸಿಫ್‌ ತನ್ನ ಬೈಕ್‌ ತೆಗೆದುಕೊಂಡು ಹೋಗಿದ್ದಾನೆ. ಅಫ್ತಾಬ ಮತ್ತು ನಿಯಾಜ ಶವದ ರುಂಡ-ಮುಂಡ ಬೇರ್ಪಡಿಸಿದ್ದಾರೆ. ಅದರಲ್ಲಿ ದೇಹವನ್ನು ಒಂದು ಚೀಲದಲ್ಲಿ ಹಾಗೂ ಕೈ-ಕಾಲು ಒಂದು ಚೀಲದಲ್ಲಿ ಹಾಕಿಕೊಂಡು ಸಾಕ್ಷಿ, ಪುರಾವೆ ನಾಶ ಪಡಿಸುವ ಸಲುವಾಗಿ ಮರುದಿನ ಮನಸೂರ ಬಳಿ ಶವ ಸುಟ್ಟು ಹಾಕುತ್ತಾರೆ. ಈ ವೇಳೆ ರುಂಡವು ಚೀಲದಿಂದ ಉರುಳಿ ಕಾರಿನಲ್ಲಿ ಬಿದ್ದಿರುತ್ತದೆ. ಇವರಿಗೆ ಅದು ಗೊತ್ತಾಗಿರುವುದಿಲ್ಲ. ತದನಂತರ ರುಂಡವನ್ನು ದೇವರ ಗುಡಿಹಾಳದಲ್ಲಿ ಸುಡುತ್ತಾರೆ. ಮರುದಿನ ಸುಟ್ಟ ದೇಹ ಮತ್ತು ಕೈ-ಕಾಲುಗಳನ್ನು ಚೀಲದಲ್ಲಿ ಹಾಕಿಕೊಂಡು ಇವನನ್ನು ಹೂಳಿದರಾಯಿತು ಎಂದು ಯೋಚಿಸಿ ಬೆಳಗ್ಗೆ ಕಾರಿನಲ್ಲಿಟ್ಟುಕೊಂಡು ಕೇಶ್ವಾಪುರದ ಕುಸುಗಲ್ಲ ರಸ್ತೆಗೆ ತೆಗೆದುಕೊಂಡು ಬಂದಿದ್ದಾರೆ. ತಗ್ಗು ತೆಗೆದು ಹೂಳುವಷ್ಟರಲ್ಲಿ ಗಸ್ತಿನಲ್ಲಿದ್ದ ಚಾಲುಕ್ಯ ವಾಹನ ನೋಡಿ, ಸಂಜೆ ಹೂತರಾಯ್ತು ಎಂದು ಕೈ-ಕಾಲು ಇದ್ದ ಚೀಲವನ್ನು ಪಕ್ಕದಲ್ಲಿಯೇ ಗಿಡಗಳ ಕಂಟಿಯಲ್ಲಿ ಇಟ್ಟು ಹೋಗಿದ್ದಾರೆ. ಆದರೆ ಸಂಜೆ ಹೊತ್ತಿಗೆ ಸಾರ್ವಜನಿಕರು ರುಂಡವಿಲ್ಲದ ದೇಹವಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ. ಆಗ ಇವರ ಯೋಚನೆಯೆಲ್ಲ ತಿರುವು-ಮುರುವು ಆಗಿದೆ ಎಂದು ಹೇಳಲಾಗುತ್ತಿದೆ.

ನಟಿ ಶನಾಯಗೆ ತನ್ನಣ್ಣನ ಕೊಲೆಯಾಗಿ ಇಷ್ಟೆಲ್ಲ ನಡೆದಿದ್ದರೂ ಅವಳಿಗೆ ಇದರ ಬಗ್ಗೆ ಯಾವುದೂ ಗೊತ್ತಿರಲಿಲ್ಲವಂತೆ. ಆದರೆ ನಿಯಾಜ ಓರ್ವನೊಂದಿಗೆ ಹೊಡೆದಾಡಿಕೊಂಡಿದ್ದ ಈ ವೇಳೆ ಓರ್ವನ ಕೊಲೆಯಾಗಿದೆ ಎಂಬುದಷ್ಟೆ ಗೊತ್ತಿತ್ತಂತೆ. ಏ.13ರಂದು ಓರ್ವರು ನಿಮ್ಮಣ್ಣನ ಕೊಲೆಯಾಗಿದೆ ಎಂದು ಹೇಳಿದ ನಂತರವೇ ರಾಕೇಶ ಕೊಲೆಯಾಗಿದ್ದು ಗೊತ್ತಾಯಿತು ಎಂದು ಪೊಲೀಸರ ವಿಚಾರಣೆ ವೇಳೆ ನಟಿ ಶನಾಯ ಬಾಯಿಬಿಟ್ಟಿದ್ದಾಳೆಂದು ಹೇಳಲಾಗುತ್ತಿದೆ. ಜಿಲ್ಲೆಯ ಇತಿಹಾಸದಲ್ಲಿಯೇ ಇಂತಹ ಕ್ರೂರ ಹತ್ಯೆ ಎಂದೂ ನಡೆದಿರಲಿಲ್ಲ. ಈ ಪ್ರಕರಣ ಭೇದಿಸುವಲ್ಲಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದು, ಈ ಪ್ರಕರಣದಲ್ಲಿ ಭಾಗಿಯಾದ ಇನ್ನುಳಿದವರ ಪತ್ತೆಗಾಗಿ ಶೋಧ ನಡೆಸಿದ್ದಾರೆ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.