ಕೋವಿಡ್ ತಡೆಗೆ ಶ್ರಮಿಸಲು ಅಮೃತ ದೇಸಾಯಿ ಸಲಹೆ
Team Udayavani, May 21, 2021, 7:56 PM IST
ಧಾರವಾಡ: ತಾಲೂಕಿನಲ್ಲಿ ನಿರೀಕ್ಷೆಗೂ ಮೀರಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಾಗಿ ತಕ್ಷಣವೇ ಪಿಡಿಒ ಹಾಗೂ ನೋಡಲ್ ಅ ಧಿಕಾರಿಗಳು ಕಾರ್ಯ ಪ್ರವೃತ್ತರಾಗುವ ಮೂಲಕ ಗ್ರಾಮೀಣ ಭಾಗದಲ್ಲಿ ಕೋವಿಡ್ ತಡೆಗೆ ಶ್ರಮಿಸಬೇಕೆಂದು ಶಾಸಕ ಅಮೃತ ದೇಸಾಯಿ ಹೇಳಿದರು.
ನಗರದ ಸರ್ಕಿಟ್ಹೌಸ್ ಆವರಣದಲ್ಲಿ ಕೋವಿಡ್ ತಡೆಗೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಕೈಗೊಂಡ ಅವರು, ಕೊರೊನಾ ಪಾಸಿಟಿವ್ ರೋಗಿಗಳಿಗೆ ಈಗಾಗಲೇ ಕ್ಷೇತ್ರದಲ್ಲಿ ಕೋವಿಡ್ ಕೇರ್ ಸಿದ್ಧಪಡಿಸಿದೆ. ಹೋಮ್ ಐಸೋಲೇಷನ್ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಗ್ರಾಮಿಣ ಭಾಗದ ಜನರು ಚಿಕಿತ್ಸೆಗೆ ಒಳಗಾಗಲು ಹಿಂಜರಿಯುತ್ತಿದ್ದು, ಅವರನ್ನು ಮನವೊಲಿಸಿ ಕೋವಿಡ್ ಕೇರ್ ಸೆಂಟರ್ಗೆ ದಾಖಲಿಸಬೇಕು ಎಂದರು.
ಗ್ರಾಮೀಣ ಭಾಗದಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಲು ಹಿಂಜರಿಯುತ್ತಿದ್ದು, ಈ ಕುರಿತು ಅ ಧಿಕಾರಿಗಳು ಸೂಕ್ತ ಯೋಜನೆ ಸಿದ್ಧಪಡಿಸಿ, ಪ್ರತಿಯೊಬ್ಬರನ್ನು ತಪಾಸಣೆಗೆ ಒಳಪಡಿಸಬೇಕು. ಲಸಿಕೆ ಹಾಕಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು ಎಂದರು. ತಹಶೀಲ್ದಾರ್ ಸಂತೋಷ ಬಿರಾದಾರ ಸೇರಿದಂತೆ ಆರೋಗ್ಯಾ ಧಿಕಾರಿಗಳು ಹಾಗೂ ಪಿಡಿಒಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್
Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ
Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ
Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ
Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ