ಪರಿಹಾರ ನೀಡುವಲ್ಲಿ ವಿಳಂಬ: ಇನ್ಶೂರೆನ್ಸ್ ಕಂಪನಿಯ ಚರಾಸ್ತಿ ಜಪ್ತಿಗೆ ಆದೇಶ
Team Udayavani, Feb 24, 2021, 12:50 PM IST
ಹುಬ್ಬಳ್ಳಿ: ಅಪಘಾತ ಪ್ರಕಣವೊಂದರಲ್ಲಿ ಪರಿಹಾರ ನೀಡುವಲ್ಲಿ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಇಲ್ಲಿನ ದೇಸಾಯಿ ವೃತ್ತದಲ್ಲಿರುವ ರಿಲಯನ್ಸ್ ಜನರಲ್ ಇನ್ಶೂರೆನ್ಸ್ ಕಂಪನಿಯ ಚರಾಸ್ತಿ ಜಪ್ತಿಗೆ ನ್ಯಾಯಾಲಯ ಆದೇಶ ನೀಡಿದ ಕಾರಣ ನ್ಯಾಯಾಲಯದ ಸಿಬ್ಬಂದಿ ವಿಮಾ ಕಂಪನಿ ಕಚೇರಿಗೆ ಆಗಮಿಸಿದ್ದಾರೆ.
ಧಾರವಾಡದಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಲಕ್ಷ್ಮಣ ಹಳ್ಳಿಕೇರಿ ಗಂಭೀರ ಗಾಯಗೊಂಡಿದ್ದರು. ಅಲ್ಲಿನ 2ನೇ ಹೆಚ್ಚುವರಿ ಸಿವಿಲ್ ನ್ಯಾಯಲಯದಲ್ಲಿ ದಾವೆ ಹೂಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಗಾಯಾಳುಗೆ 11,13,600 ರೂ ಹಾಗೂ ಶೇ.9 ರಷ್ಟು ಬಡ್ಡಿ ಸಮೇತ 14,555,000 ರೂ. ಪಾವತಿ ಮಾಡುವಂತೆ ಆದೇಶ ನೀಡಿತ್ತು.
ನ್ಯಾಯಾಲಯದ ಆದೇಶ ಪಾಲನೆ ಮಾಡದ ಹಿನ್ನೆಲೆಯಲ್ಲಿ ಕಚೇರಿಯ ಚರಾಸ್ತಿ ಜಪ್ತು ಮಾಡುವಂತೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಗಾಯಾಳು ಲಕ್ಷ್ಮಣ ಹಳ್ಳಿಕೇರಿ, ಗಾಯಾಳು ಪರ ವಕೀಲ ಸಿ.ಎಸ್.ಅಷ್ಟಗಿಮಠ ಹಾಗೂ ಕೊರ್ಟ್ ಬೆಲೀಫ್ ಜಿ.ಎಚ್.ಮೇದಾರ ವಿಮಾ ಕಚೇರಿಗೆ ಆಗಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ