ಕೋವಿಡ್‌ ವಿರುದ್ಧ ಕಿಮ್ಸ್‌ ಸಮರ

ಐಸೋಲೇಷನ್‌ನಲ್ಲಿ 600 ಬೆಡ್‌ ವಿಸ್ತರಣೆ ­!1500 ಬೆಡ್‌ಗೆ ತಯಾರಿ

Team Udayavani, Apr 29, 2021, 5:34 PM IST

hiyy

ವರದಿ: ಶಿವಶಂಕರ ಕಂಠಿ

ಹುಬ್ಬಳ್ಳಿ: ಇಲ್ಲಿನ ಕಿಮ್ಸ್‌ ಆಸ್ಪತ್ರೆಯ ಐಸೋಲೇಷನ್‌ ವಾಡ್‌ ìನಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ಹಾಸಿಗೆ, ವೆಂಟಿಲೇಟರ್‌, ಆಕ್ಸಿಜನ್‌, ಐಸಿಯು ಬೆಡ್‌ಗಳನ್ನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಕಿಮ್ಸ್‌ನಲ್ಲಿನ 250 ಬೆಡ್‌ ಸಾಮರ್ಥ್ಯದ ಸುಪರ್‌ ಸ್ಪೆಶಾಲಿಟಿ ಆಸ್ಪತ್ರೆಯನ್ನೇ ಕೋವಿಡ್‌-19ರ ಚಿಕಿತ್ಸಾ ಕೇಂದ್ರವನ್ನಾಗಿ ಪರಿವರ್ತಿಸಲಾಗಿದೆ. ರಾಜ್ಯದಲ್ಲಿ ಕೋವಿಡ್ 2ನೇ ಅಲೆಯಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಅವರು ಕೋವಿಡ್ ಸೋಂಕಿತರಿಗೆ ಬೆಡ್‌ಗಳ ಕೊರತೆಯಾಗದಂತೆ ಮುಂಜಾಗ್ರತೆ ಹಾಗೂ ಸುರಕ್ಷತೆ ದೃಷ್ಟಿಯಿಂದ 1ಸಾವಿರ ಬೆಡ್‌ ಗಳಿಗೆ ವಿಸ್ತರಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದರು. ಅದರಂತೆ ಕಿಮ್ಸ್‌ನ ಐಸೋಲೇಷನ್‌ ಕೇಂದ್ರದಲ್ಲಿ ಈಗಾಗಲೇ 600 ಬೆಡ್‌ ಗಳನ್ನು ವಿಸ್ತರಿಸಲಾಗಿದೆ. ಇದನ್ನು 1500ಕ್ಕೂ ಹೆಚ್ಚಿಸಲು ಕಿಮ್ಸ್‌ನ ಆಡಳಿತ ಮಂಡಳಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಸದ್ಯ 260 ಕೋವಿಡ್‌ ಸೋಂಕಿತರು ದಾಖಲು: ಕಿಮ್ಸ್‌ ಆಸ್ಪತ್ರೆ ಒಟ್ಟು 1430 ಬೆಡ್‌ಗಳನ್ನು ಹೊಂದಿದ್ದು, ಎಲ್ಲದಕ್ಕೂ ಆಕ್ಸಿಜನ್‌ ಸೌಲಭ್ಯವಿದೆ. ಕೋವಿಡ್‌-19 ಕೇಂದ್ರದಲ್ಲಿ ಸದ್ಯ 600 ಬೆಡ್‌ ಗಳಿದ್ದು, ಇಂದಿನವರೆಗೆ ಇಲ್ಲಿ 260 ಕೋವಿಡ್‌ ಸೋಂಕಿತರು, 240 ಸಾರಿ ರೋಗಿಗಳು ದಾಖಲಾಗಿದ್ದಾರೆ. ಕೋವಿಡ್‌-19 ಕೇಂದ್ರದಲ್ಲಿ 600 ಬೆಡ್‌ಗಳು ಆಕ್ಸಿಜನ್‌ ಹೊಂದಿದ್ದು, ಇದರಲ್ಲಿ ಕೋವಿಡ್‌ ಸೋಂಕಿತರಿಗೆ 70 ಐಸಿಯು, 40 ಸಾರಿ ರೋಗಿಗಳಿಗೆ ಮೀಸಲಿಡಲಾಗಿದೆ. ಜತೆಗೆ ಕೋವಿಡ್‌ ಸೋಂಕಿತರಿಗೆ 70 ವೆಂಟಿಲೇಟರ್ ಹಾಗೂ ಕೋವಿಡ್‌ ಅಲ್ಲದವರಿಗೆ 70 ವೆಂಟಿಲೇಟರ್ ಬೆಡ್‌ಗಳ ವ್ಯವಸ್ಥೆಯಿದೆ.

ಐಸಿಯುನಲ್ಲಿ ಸದ್ಯ 65ಕ್ಕೂ ಅಧಿಕ ಹಾಗೂ ಸಾರಿಯಲ್ಲಿ 30ಕ್ಕೂ ಹೆಚ್ಚು ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್‌ ರೋಗಿಗಳಿಗೆ ಅವಶ್ಯವಾದ ಎಲ್ಲ ಚಿಕಿತ್ಸಾ ಸೌಲಭ್ಯಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಇದನ್ನು ಇನ್ನೂ ಹೆಚ್ಚಿಸಲು ಯೋಜಿಸಲಾಗಿದೆ. ಕಳೆದ ಬಾರಿ ಐಸೋಲೇಷನ್‌ ಕೇಂದ್ರದಲ್ಲಿ 500 ಬೆಡ್‌ಗಳ ವ್ಯವಸ್ಥೆ ಮಾಡಲಾಗಿತ್ತು. ಎಲ್ಲವೂ ಭರ್ತಿಯಾಗಿದ್ದವು. ರೋಗಿಗಳಿಗೆ ಉತ್ತಮ ಚಿಕಿತ್ಸೆ ಕೂಡ ನೀಡಲಾಗಿತ್ತು. ಹೀಗಾಗಿ ಜನಪ್ರತಿ ನಿಧಿಗಳು, ಗಣ್ಯಾತಿಗಣ್ಯರು, ಪ್ರತಿಷ್ಠಿತರು ಸಹ ಕಿಮ್ಸ್‌ನ ಕೋವಿಡ್‌ ಕೇಂದ್ರದಲ್ಲೇ ಚಿಕಿತ್ಸೆ ಪಡೆದು ಗುಣಮುಖರಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಆಕ್ಸಿಜನ್‌ ಸ್ಟೋರೇಜ್‌ 40ಕೆಎಲ್‌ಗೆ ಹೆಚ್ಚಳ: ಕಿಮ್ಸ್‌ ಆಸ್ಪತ್ರೆಯಲ್ಲಿ ದಾಖಲಾಗುವ ಕೋವಿಡ್‌ ಸೋಂಕಿತರಿಗೆ ಆಕ್ಸಿಜನ್‌ ಸಮಸ್ಯೆಯಾಗಬಾರದೆಂಬ ನಿಟ್ಟಿನಲ್ಲಿ ಲಿಕ್ವಿಡ್‌ ಮೆಡಿಕಲ್‌ ಆಕ್ಸಿಜನ್‌ ಸ್ಟೋರೇಜ್‌ ಟ್ಯಾಂಕ್‌ (ಎಲ್‌ಎಂಒಎಸ್‌ಟಿ) ಸಾಮರ್ಥಯವನ್ನು 40 ಕೆಎಲ್‌ಗೆ ಹೆಚ್ಚಿಸಲಾಗಿದೆ. ಈ ಮೊದಲು ಇಲ್ಲಿ 20ಕೆಎಲ್‌ ಸಾಮರ್ಥ್ಯದ ಆಕ್ಸಿಜನ್‌ ಸಂಗ್ರಹ ಟ್ಯಾಂಕ್‌ ಇತ್ತು. ಕೋವಿಡ್‌-19 2ನೇ ಅಲೆಯಲ್ಲಿ ಬಹುತೇಕ ಸೋಂಕಿತರು ಆಕ್ಸಿಜನ್‌ ಕೊರತೆ ಅನುಭವಿಸುತ್ತಿದ್ದು, ಇದನ್ನು ಮನಗಂಡು ಆಸ್ಪತ್ರೆಯಲ್ಲಿ ಇನ್ನು 20 ಕೆಎಲ್‌ ಸಾಮರ್ಥ್ಯದ ಆಕ್ಸಿಜನ್‌ ಟ್ಯಾಂಕ್‌ ಅಳವಡಿಸಲಾಗಿದೆ. 2-3 ದಿನಕ್ಕೊಮ್ಮೆ ಇವನ್ನು ಭರ್ತಿ ಮಾಡಲಾಗುತ್ತಿದೆ. 40 ಕೆಎಲ್‌ ಸಾಮರ್ಥಯ ಭರ್ತಿಯಾದರೆ ಒಮ್ಮೆಲೆ 1200 ಜನರಿಗೆ ಆಕ್ಸಿಜನ್‌ ನೀಡಬಹುದಾಗಿದೆ.

ಇತರೆ ರೋಗಿಗಳಿಗೂ ಚಿಕಿತ್ಸೆ: ರಾಜ್ಯದಲ್ಲಿ ಕೋವಿಡ್‌-19ರ 2ನೇ ಅಲೆ ವ್ಯಾಪಿಸುತ್ತಿದ್ದರೂ ಕಿಮ್ಸ್‌ ಆಸ್ಪತ್ರೆಯಲ್ಲಿ ಸದ್ಯ ಕೋವಿಡ್ ಸೋಂಕಿತರು ಸೇರಿದಂತೆ ಇತರೆ ರೋಗಿಗಳಿಗೂ ಚಿಕಿತ್ಸೆ ಒದಗಿಸಲಾಗುತ್ತಿದೆ. ಕಿಮ್ಸ್‌ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ, ಶಸ್ತ್ರಚಿಕಿತ್ಸೆ, ಪಾರ್ಶ್ವವಾಯು, ಹೃದಯ ಕಾಯಿಲೆ, ಡಯಾಲಿಸಿಸ್‌, ಮೂತ್ರಪಿಂಡ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿರುವವರು, ಅಸ್ತಮಾ, ನಾಯಿ ಕಡಿತ, ಹಾವು ಕಡಿತ ಸೇರಿದಂತೆ ಇತರೆ ರೋಗಿಗಳಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಒಂದು ವೇಳೆ ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚಳವಾಗಿ ಕೋವಿಡ್ ವಿಶೇಷ ಕೇಂದ್ರದಲ್ಲಿನ ಬೆಡ್‌ಗಳೆಲ್ಲ ಭರ್ತಿಯಾದರೆ ಇವುಗಳ ಸೇವೆ ತಾತ್ಕಾಲಿಕ ಸ್ಥಗಿತಗೊಳಿಸುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.