ಹುಬ್ಬಳ್ಳಿ- ವಿಜಯಪುರ ಸಂಪರ್ಕ ಕಡಿತ ಸಾಧ್ಯತೆ
Team Udayavani, Sep 7, 2019, 3:53 PM IST
ನರಗುಂದ : ಮಲಪ್ರಭಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿರುವುದರಿಂದ ಹುಬ್ಬಳ್ಳಿ- ವಿಜಯಪುರ ಸಂಪರ್ಕ ಕಡಿತ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ಲಖಮಾಪುರ ಗ್ರಾಮವನ್ನು ನೀರು ಸುತ್ತುವರಿದ ಪರಿಣಾಮ ಗ್ರಾಮದಿಂದ ಎಲ್ಲ ಜನರನ್ನು ಹೊರಕ್ಕೆ ಕಳುಹಿಸಲಾಗಿದೆ. ಇಂದು 20 ಸಾವಿರ ಕ್ಯುಸೆಕ್ ವರೆಗೆ ನೀರು ಹರಿಬಿಡುವ ಸಾಧ್ಯತೆ ಇರುವುದರಿಂದ ಈ ಗ್ರಾಮದ ಸಂಪರ್ಕ ಕಡಿತಗೊಳ್ಳುವ ಸಂಭವವಿದೆ.
ಗ್ರಾಮದ ಮುಖ್ಯರಸ್ತೆ, ಜಮೀನುಗಳಲ್ಲಿ ಟೆಂಟ್ ಹಾಕಿಕೊಂಡು ಗ್ರಾಮಸ್ಥರ ವಾಸ್ತವ್ಯ ಹೂಡಿರುವುದಾಗಿ ವರದಿ ತಿಳಿಸಿದೆ.
ಕೊಣ್ಣೂರು ಹೊಸ ಸೇತುವೆಯ ದುರಸ್ಥಿ ಮಾಡಲಾದ, ಸಂಪರ್ಕ ರಸ್ತೆಯ ಮಟ್ಟಕ್ಕೆ ನೀರು ಏರುತ್ತಿರುವ ಪರಿಣಾಮ ಸಂಜೆ ವೇಳೆಗೆ ಆ ಹೆದ್ದಾರಿ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ