ಬಿಕೋ ಎನ್ನುತ್ತಿದೆ ಹುಬ್ಬಳ್ಳಿ ಎಪಿಎಂಸಿ


Team Udayavani, May 16, 2021, 10:05 AM IST

ಬಿಕೋ ಎನ್ನುತ್ತಿದೆ ಹುಬ್ಬಳ್ಳಿ ಎಪಿಎಂಸಿ

ಹುಬ್ಬಳ್ಳಿ: ರಾಜ್ಯ ಸರಕಾರ ಕೋವಿಡ್‌-19ರ 2ನೇ ಅಲೆ ವ್ಯಾಪಿಸುವುದನ್ನು ತಡೆಗಟ್ಟಲು ಜಾರಿಗೊಳಿಸಿದ ಕರ್ಫ್ಯೂ ಸಂದರ್ಭದಲ್ಲಿನ ಕಟ್ಟುನಿಟ್ಟಾದ ಮಾರ್ಗಸೂಚಿಗಳಿಂದ ಇಲ್ಲಿನ ಎಪಿಎಂಸಿಯ ಪ್ರಾಂಗಣ ವ್ಯಾಪಾರಸ್ಥರು ಹಾಗೂ ಖರೀದಿದಾರರಿಲ್ಲದೆ ಭಣಗುಡುತ್ತಿದೆ. ರೈತರು ತಂದ ಉತ್ಪನ್ನಗಳು ಖರೀದಿಯಾಗದೆ ಹಾಳಾಗುತ್ತಿವೆ.

ಜನತಾ ಕರ್ಫ್ಯೂ ಸಂದರ್ಭದಲ್ಲಿ ಇಲ್ಲಿನ ಎಪಿಎಂಸಿಯಲ್ಲಿ ತರಕಾರಿ, ಹಣ್ಣು, ದಿನಸಿ, ಕಾಳುಕಡಿ ಹಾಗೂ ಕಿರಾಣಿ ವ್ಯಾಪಾರ ಸಗಟು ಜತೆ ಚಿಲ್ಲರೆಯಾಗಿ ಮಾರಾಟಮಾಡಲಾಗುತ್ತಿತ್ತು. ಆದರೆ ಕೊರೊನಾಅಲೆ ನಿಯಂತ್ರಿಸಲು ಸರಕಾರ 2ನೇಹಂತದ ಕರ್ಫ್ಯೂ ವೇಳೆ ಕಠಿಣ ಕ್ರಮಕೈಗೊಂಡಿದ್ದರಿಂದ ಹಾಗೂ ಕಟ್ಟುನಿಟ್ಟಾದಹೊಸ ಮಾರ್ಗಸೂಚಿ ಜಾರಿಗೊಳಿಸಿದ್ದರಿಂದಚಿಲ್ಲರೆ ವ್ಯಾಪಾರ ಸಂಪೂರ್ಣ ಸ್ಥಗಿತ ಗೊಳಿಸಲಾಗಿದೆ.

ಅಲ್ಲದೆ ಎಪಿಎಂಸಿಗೆ ಅನಗತ್ಯವಾಗಿ ಆಗಮಿಸುವವರಿಗೆ ಪ್ರವೇಶಕೊಡುತ್ತಿಲ್ಲ. ಟ್ರೇಡ್‌ ಲೈಸನ್ಸ್‌ ಹೊಂದಿದ ವ್ಯಾಪಾರಸ್ಥರು, ವ್ಯಾಪಾರ-ವಹಿವಾಟುನಡೆಸುತ್ತಿರುವ ದಲ್ಲಾಳಿಗಳು, ಗುರುತಿನ ಚೀಟಿ ಹೊಂದಿದ ಖರೀದಿದಾರರು ಹಾಗೂ ಹಮಾಲರಿಗೆ ಮಾತ್ರ ಎಪಿಎಂಸಿ ಪ್ರಾಂಗಣದಲ್ಲಿ ಪ್ರವೇಶಿಸಲು ಅನುಮತಿ ನೀಡಲಾಗುತ್ತಿದೆ. ಇನ್ನುಳಿದವರ ಪ್ರವೇಶ ಸಂಪೂರ್ಣ ನಿರ್ಬಂಧಿಸಲಾಗಿದೆ. ಹೀಗಾಗಿ ಎಪಿಎಂಸಿ ಪ್ರಾಂಗಣವು ವ್ಯಾಪಾರಸ್ಥರು, ದಲ್ಲಾಳಿಗಳು, ರೈತರು, ಮಾರಾಟಗಾರರು, ಖರೀದಿದಾರರು ಇಲ್ಲದೆ ಭಣಗುಡುತ್ತಿದೆ.

ವಾಹನಗಳ ಓಡಾಟ, ಜನರ ಸಂಚಾರವಿಲ್ಲದೆ ಮಾರುಕಟ್ಟೆ ಮತ್ತು ರಸ್ತೆಗಳು ಬಿಕೋ ಎನ್ನುತ್ತಿವೆ. ಬೆಳಗ್ಗೆ 9:30 ಗಂಟೆಯಾದರೆ ಸಾಕು ಮಾರುಕಟ್ಟೆಯಲ್ಲಿನ ಜನರು-ವ್ಯಾಪಾರಸ್ಥರುತಮ್ಮ ಅಂಗಡಿ ಬಂದ್‌ ಮಾಡಿ ಮನೆಯತ್ತ ತೆರಳುತ್ತಿದ್ದಾರೆ. ಸ್ವಲ್ಪ ಸಮಯವಾದರೆ ಸಾಕು ಪೊಲೀಸರು ಹಿಡಿದು ದಂಡ ಹಾಕುತ್ತಿದ್ದಾರೆ. ಈ ಭಯಕ್ಕಾಗಿ ಜನರು ಬೇಗನೆ ವ್ಯಾಪಾರ-ವಹಿವಾಟು ಬಂದ್‌ ಮಾಡುತ್ತಿದ್ದಾರೆ.

ತಡರಾತ್ರಿಯೇ ವ್ಯಾಪಾರ: ಸರಕಾರ ಜಾರಿಗೊಳಿಸಿರುವ ಕರ್ಫ್ಯೂ ಸಂದರ್ಭದಲ್ಲಿಬೆಳಗ್ಗೆ 6:00ರಿಂದ 10:00 ಗಂಟೆವರೆಗೆ ಅಗತ್ಯ ವಸ್ತುಗಳ ವ್ಯಾಪಾರಮತ್ತು ಖರೀದಿಗೆ ಸರಕಾರ ಅವಕಾಶಕಲ್ಪಿಸಿದೆ. ಹೀಗಾಗಿ ರೈತರು ತಮ್ಮ ಕೃಷಿ ಹುಟ್ಟುವಳಿಗಳನ್ನು ಮತ್ತು ತರಕಾರಿಯನ್ನು ಎಪಿಎಂಸಿಗೆ ತಲುಪಿಸಲು ಸಮಯಾವಕಾಶಸಿಗುತ್ತಿಲ್ಲ. ಕಾರಣ ಅವರು ರಾತ್ರಿಯೇ ತಮ್ಮ ಉತ್ಪನ್ನಗಳನ್ನು ಎಪಿಎಂಸಿಗೆ ತರುತ್ತಿದ್ದಾರೆ. ಜತೆಗೆ ಕಾರವಾರ, ಯಲ್ಲಾಪೂರ ಸೇರಿದಂತೆಇನ್ನಿತರೆ ಭಾಗಗಳಲ್ಲಿನ ದೂರದ ಊರುಗಳವ್ಯಾಪಾರಸ್ಥರು ತಮ್ಮ ತಮ್ಮ ವಾಹನಗಳಲ್ಲಿತಡರಾತ್ರಿಯೇ ಆಗಮಿಸಿ ಅಗತ್ಯ ವಸ್ತುಗಳನ್ನುಖರೀದಿಸಿ ಬೆಳಗ್ಗೆ 7:00 ಗಂಟೆಯೊಳಗೆ ತಮ್ಮ ಊರಿಗೆ ಹೋಗುತ್ತಿದ್ದಾರೆಂದು ಕೆಲ ವ್ಯಾಪಾರಿಗಳು ಹೇಳುತ್ತಾರೆ.

ರಾಶಿ ರಾಶಿಯಾಗಿ ಬಿದ್ದ ಕಾಯಿಪಲ್ಲೆ: ಅಗತ್ಯ ವಸ್ತುಗಳ ವ್ಯಾಪಾರ-ವಹಿವಾಟಿಗೆ ಬೆಳಗ್ಗೆ 10:00 ಗಂಟೆವರೆಗೆ ಸರಕಾರ ಅವಕಾಶ ಕಲ್ಪಿಸಿದೆ ಏನೋ? ಆದರೆ ಚಿಲ್ಲರೆ ವ್ಯಾಪಾರಕ್ಕೆ ಎಪಿಎಂಸಿಯಲ್ಲಿ ಅವಕಾಶ ಕೊಟ್ಟಿಲ್ಲದ್ದರಿಂದ ಹೊರಗಿನವರು ಖರೀದಿಸಲು ಅಷ್ಟಾಗಿ ಬರುತ್ತಿಲ್ಲ. ರೈತರು ತಾವು ಬೆಳೆದ ಬೆಳೆ ಹೊಲದಲ್ಲೂ ಬಿಡುವಂತಿಲ್ಲ. ಹೀಗಾಗಿ ಅನಿವಾರ್ಯವಾಗಿ ಎಪಿಎಂಸಿಗೆ ತಮ್ಮ ಉತ್ಪನ್ನ ತರುತ್ತಿದ್ದಾರೆ.ಆದರೂ ಇಲ್ಲೂ ಮಾರಾಟವಾಗದೆ ಹಾಳಾಗುತ್ತಿದೆ. ಕೈಗೆ ಬಂದ ದರಕ್ಕೆ ಕೊಟ್ಟರೂ ಖರೀದಿಸುವವರು ಇಲ್ಲದಂತಾಗಿದ್ದು, ಕೊನೆಗೆ ಮಾರುಕಟ್ಟೆಯಲ್ಲಿಯೇ ಬಿಟ್ಟು ಹೋಗುತ್ತಿದ್ದಾರೆ. ವಾಹನ ಬಾಡಿಗೆ ಮಾಡಿಕೊಂಡು ಬಂದದ್ದಕ್ಕೂ ಖರ್ಚು ಗಿಟ್ಟಿಸದೆ ನಷ್ಟ ಮಾಡಿಕೊಂಡು ಹೋಗುವಂತಾಗಿದೆ ಎನ್ನುತ್ತಿದ್ದಾರೆ ರೈತರು.

ಟೆಂಡರ್‌ ಪ್ರಕ್ರಿಯೆ ಬಂದ್‌:

ಕರ್ಫ್ಯೂ ಅವಧಿಯಲ್ಲಿ ಸರಕಾರದ ಮಾರ್ಗಸೂಚಿಯಂತೆ ಎಪಿಎಂಸಿ ಪ್ರಾಂಗಣದಲ್ಲಿ ಕುರಿ, ಜಾನುವಾರುಸಂತೆ, ಒಣಮೆಣಸಿನಕಾಯಿ ಹುಟ್ಟುವಳಿ ಟೆಂಡರ್‌ ಪ್ರಕ್ರಿಯೆ ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿದೆ. ಉಳ್ಳಾಗಡ್ಡೆ-ಆಲೂಗಡ್ಡೆ ಸೇರಿದಂತೆ ರೈತರ ಇನ್ನಿತರೆ ಉತ್ಪನ್ನಗಳ ಟೆಂಡರ್‌ ಪ್ರಕ್ರಿಯೆ ಬೆಳಗ್ಗೆ 9:00 ಗಂಟೆಯೊಳಗೆ ಮುಗಿಯುತ್ತಿದೆ.ತರಕಾರಿ ಚಿಲ್ಲರೆ ವ್ಯಾಪಾರ ಸಂಪೂರ್ಣಬಂದ್‌ ಮಾಡಲಾಗಿದೆ. ಕಾಳು-ಕಡಿ, ಉಳ್ಳಾಗಡ್ಡೆ-ಆಲೂಗಡ್ಡೆ ವ್ಯಾಪಾರಸ್ಥರು ಸಹ ಸರಕಾರ ನಿಗದಿಪಡಿಸಿದ ಅವಧಿಯೊಳಗೆ ತಮ್ಮೆಲ್ಲ ವ್ಯಾಪಾರ-ವಹಿವಾಟು ನಡೆಸಬೇಕೆಂದಿರುವುದರಿಂದ ಬೆಳಗ್ಗೆ 9:30ಗಂಟೆಯೊಳಗೆ ಮುಗಿಸುತ್ತಿದ್ದಾರೆ. ತರಕಾರಿ ವ್ಯಾಪಾರಿಗಳು ಚಿಲ್ಲರೆ ವ್ಯಾಪಾರ ಮಾಡಿದರೆಅಂತಹ ವ್ಯಾಪಾರಸ್ಥರನ್ನು ಎಪಿಎಂಸಿಯವರುಗುರುತಿಸಿ ದಂಡ ಹಾಕುತ್ತಿದ್ದಾರೆ. ಹೀಗಾಗಿಯಾವ ವ್ಯಾಪಾರಸ್ಥರು ಚಿಲ್ಲರೆ ವ್ಯಾಪಾರಕ್ಕೆ ಮುಂದಾಗುತ್ತಿಲ್ಲ.

ಲಾಕ್‌ಡೌನ್‌ ವೇಳೆ ಎಪಿಎಂಸಿ ಪ್ರಾಂಗಣದಲ್ಲಿ ಯಾರಿಗೂ ಪಾಸ್‌ ಕೊಟ್ಟಿಲ್ಲ. ವ್ಯಾಪಾರಸ್ಥರಿಗೆ ಅವರು ಹೊಂದಿದ್ದ ಅಂಗಡಿಯ ಲೈಸನ್ಸ್‌ ಮೇಲೆ ಅಟೆಸ್ಟೆಡ್‌ ಮಾಡಿ ಗುರುತಿನ ಚೀಟಿ ನೀಡಲಾಗಿದೆ. ಹಮಾಲರಿಗೆ ಹಮಾಲಿಕಾರ್ಮಿಕರ ಸಂಘದಿಂದ ಗುರುತಿನ ಚೀಟಿ ವಿತರಿಸಲಾಗಿದೆ.ತರಕಾರಿ ಚಿಲ್ಲರೆ ವ್ಯಾಪಾರಕ್ಕೆ ಅವಕಾಶ ಕೊಟ್ಟಿಲ್ಲ. ಅನಗತ್ಯವಾಗಿ ಆಗಮಿಸುವವರಿಗೆ ಪ್ರವೇಶ ನಿರ್ಬಂ ಧಿಸಲಾಗಿದೆ. ಕೊರೊನಾ ಅಲೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.ಅರವಿಂದ ಪಿ. ಪಾಟೀಲ, ಸಹಾಯಕ ಕಾರ್ಯದರ್ಶಿ, ಎಪಿಎಂಸಿ

ವ್ಯಾಪಾರದ ಜತೆ ಕೊರೊನಾ ಬಗ್ಗೆ ಜಾಗೃತಿ ವಹಿಸಬೇಕಿದೆ. ಸರಕಾರದ ಮಾರ್ಗಸೂಚಿ ಪಾಲಿಸಬೇಕಿದೆ. ಜನತಾ ಕರ್ಫ್ಯೂ ಸಮಯದಲ್ಲಿ ಶೇ. 50 ವ್ಯಾಪಾರವಿತ್ತು. ಇದೀಗ ಶೇ. 25 ವ್ಯಾಪಾರ-ವಹಿವಾಟು ಆಗುತ್ತಿದೆ. ಸಂಜೆವರೆಗೂ ಲೋಡಿಂಗ್‌, ಅನ್‌ಲೋಡಿಂಗ್‌ ಮಾಡಬಹುದೆಂದು ಪೊಲೀಸ್‌ ಆಯುಕ್ತರು ಹೇಳಿದ್ದರು. ಬೆಳಗ್ಗೆ 10 ಗಂಟೆ ನಂತರ ಯಾರಿಗೂ ಓಡಾಡಲು ಬಿಡುತ್ತಿಲ್ಲ. ಹೀಗಾಗಿ ಹಮಾಲರು ಬೇರೆ ಪ್ರದೇಶಗಳಿಂದ ಎಪಿಎಂಸಿಗೆ ಬರಲು ಕಷ್ಟವಾಗುತ್ತಿದೆ. ವ್ಯಾಪಾರಸ್ಥರು 10 ಗಂಟೆಯೊಳಗೆ ಅಂಗಡಿಗಳನ್ನು ಬಂದ್‌ ಮಾಡುತ್ತಿದ್ದಾರೆ.ಶಿವಾನಂದ ಸಣ್ಣಕ್ಕಿ, ಕಿರಾಣಿ ವರ್ತಕರ ಸಂಘದ ಅಧ್ಯಕ್ಷ, ಎಪಿಎಂಸಿ

 

­- ಶಿವಶಂಕರ ಕಂಠಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.