ಹುಬ್ಬಳ್ಳಿ: ಶತಮಾನದ ಶಾಲೆಗಿಲ್ಲ ಸುಸಜ್ಜಿತ ಆಟದ ಮೈದಾನ

ಈ ಕುರಿತು ಬಸವರಾಜ ಹೊರಟ್ಟಿ ಅವರು ಸಹ ಗಮನ ಹರಿಸಬೇಕಾಗಿದೆ.

Team Udayavani, Jan 7, 2023, 6:17 PM IST

ಹುಬ್ಬಳ್ಳಿ: ಶತಮಾನದ ಶಾಲೆಗಿಲ್ಲ ಸುಸಜ್ಜಿತ ಆಟದ ಮೈದಾನ

ಹುಬ್ಬಳ್ಳಿ: ಶತಮಾನದ ಇತಿಹಾಸ ಹೊಂದಿರುವ ಶಾಲೆಗೆ ಸುಸಜ್ಜಿತ ಆಟದ ಮೈದಾನವಿಲ್ಲ, ಇದ್ದರೂ ಮಣ್ಣು ಕಲ್ಲುಗಳಿಂದ ಕೂಡಿದ್ದು, ಮಕ್ಕಳ ಕ್ರೀಡೆಗೆ ಯೋಗ್ಯವಾಗಿಲ್ಲ. ಎಲ್ಲೆಂದರಲ್ಲಿ ಕಲ್ಲುಗಳು, ಪ್ಲಾಸ್ಟಿಕ್‌ ಬಾಟಲ್‌, ಪ್ಲಾಸ್ಟಿಕ್‌ ಹಾಳೆಗಳು, ಇದರಲ್ಲಿಯೇ ಮಕ್ಕಳ ಕ್ರೀಡಾಕೂಟ.

ಇದು ಮಹಾನಗರ ಪಾಲಿಕೆ ಅಧೀನದಲ್ಲಿರುವ ಲ್ಯಾಮಿಂಗ್ಟನ್‌ ಬಾಲಕರ ಪ್ರೌಢಶಾಲೆಯ ಕಥೆ-ವ್ಯಥೆ. ಶುಕ್ರವಾರ ಲ್ಯಾಮಿಂಗ್ಟನ್‌ ಬಾಲಕರ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ವಾರ್ಷಿಕ ಕ್ರೀಡಾಕೂಟ ಆಯೋಜನೆ ಮಾಡಲಾಗಿತ್ತು. ಶಾಲೆಯ ಮುಂಭಾಗದಲ್ಲಿರುವ ಹಾಳಾದ ಮೈದಾನದಲ್ಲಿ ಶಿಕ್ಷಕರು ಆಟೋಟ ಸ್ಪರ್ಧೆಗಳನ್ನು ನಡೆಸುತ್ತಿರುವುದು ಕಂಡುಬಂದಿತು.

ಏರಿಳಿತದ ರಸ್ತೆಯಲ್ಲಿ ಓಟದ ಸ್ಪರ್ಧೆ, ಮೈದಾನದ ಒಂದು ಮೂಲೆಯಲ್ಲಿ ಹಾಕಲಾಗಿರುವ ಮರಳಿನ ಮೇಲೆ ಕುಸ್ತಿ ಪಂದ್ಯಗಳು, ಇನ್ನೊಂದು ಬದಿಯಲ್ಲಿ ಚಕ್ರ ಎಸೆತ…ಇದು ಪರಿಸ್ಥಿತಿಗೆ ಹಿಡಿದ ಕೈಗನ್ನಡಿ.

ಸಭಾಪತಿಗಳು ದೈಹಿಕ ಶಿಕ್ಷಕರಾಗಿದ್ದ ಶಾಲೆ: ವಿಧಾನ ಪರಿಷತ್‌ ಸಭಾಪತಿ ಆಗಿರುವ ಬಸವರಾಜ ಹೊರಟ್ಟಿ ಅವರು ಸೇವೆ ಸಲ್ಲಿಸಿರುವ ಶಾಲೆ ಇದಾಗಿದೆ. ಹು-ಧಾ ಮಹಾನಗರ ಪಾಲಿಕೆ ಉತ್ತರದಾಯಿತ್ವ ಹೊಂದಿದೆ. ಈಗಾಗಲೇ ಶಾಲೆಯ ಅಭಿವೃದ್ಧಿಗೆ ಪಾಲಿಕೆ ಹಲವಾರು ಕ್ರಮ ಕೈಗೊಂಡಿದ್ದು, ಮೈದಾನದ ವಿಷಯದಲ್ಲಿ ಮಾತ್ರ ನಿರಾಸಕ್ತಿ ಎದ್ದು ಕಾಣುತ್ತಿದೆ. ಈ ಕುರಿತು ಬಸವರಾಜ ಹೊರಟ್ಟಿ ಅವರು ಸಹ ಗಮನ ಹರಿಸಬೇಕಾಗಿದೆ.

ವಾರ್ಷಿಕ ಕ್ರೀಡಾಕೂಟ
ಮಹಾನಗರ ಪಾಲಿಕೆಯ ಲ್ಯಾಮಿಂಗ್ಟನ್‌ ಬಾಲಕರ ಪ್ರೌಢಶಾಲೆಯಲ್ಲಿ ಶುಕ್ರವಾರ ವಾರ್ಷಿಕ ಕ್ರೀಡಾಕೂಟ ನಡೆಸಲಾಯಿತು. ಶಾಲೆಯ ವಿದ್ಯಾರ್ಥಿಗಳಿಗೆ ಮೂರು ವಿಭಾಗದಲ್ಲಿ ವಿಂಗಡಿಸಿ 100, 200, 400, 800 ಹಾಗೂ 1500 ಮೀಟರ್‌ ಓಟದ ಸ್ಪರ್ಧೆ ನಡೆಸಲಾಯಿತು. ಜೊತೆಗೆ ಕುಸ್ತಿ, ಗುಂಡು ಎಸೆತ, ಲಾಂಗ್‌ಜಂಪ್‌, ಚಕ್ರ ಎಸೆತ್‌, ಚೆಸ್‌ ಪಂದ್ಯಾವಳಿ ನಡೆಸಲಾಯಿತು.

ನೆಹರು ಮೈದಾನದಲ್ಲಿ ನಡೆಯುತ್ತಿತ್ತು
ಪ್ರತಿವರ್ಷ ಲ್ಯಾಮಿಂಗ್ಟನ್‌ ಶಾಲೆಯ ವಾರ್ಷಿಕ ಕ್ರೀಡಾಕೂಟಗಳನ್ನು ಪಕ್ಕದ ನೆಹರು ಮೈದಾನದಲ್ಲಿ ಆಯೋಜನೆ ಮಾಡಲಾಗುತ್ತಿತ್ತು. ಆದರೆ ಕಳೆದ ಎರಡು ವರ್ಷಗಳಿಂದ ಕೋವಿಡ್‌ ಹಿನ್ನೆಲೆಯಲ್ಲಿ ಕ್ರೀಡಾಕೂಟ ಆಯೋಜನೆ ಮಾಡಲಾಗಿಲ್ಲ. ಈ ವರ್ಷ ಆಯೋಜನೆ ಮಾಡಿದ್ದರೂ ನೆಹರು ಮೈದಾನ ಕಾಮಗಾರಿ ಹಿನ್ನೆಲೆಯಲ್ಲಿ ಮೈದಾನದಲ್ಲಿ ಕ್ರೀಡಾಕೂಟ ಆಯೋಜನೆಗೆ ಅವಕಾಶ ಸಿಗಲಿಲ್ಲ. ಆದ್ದರಿಂದ ಇರುವ ಮೈದಾನದಲ್ಲಿ ವಿದ್ಯಾರ್ಥಿಗಳಿಗೆ ವಾರ್ಷಿಕ ಕ್ರೀಡಾಕೂಟ ನಡೆಸಲಾಗುತ್ತಿದೆ.
ಡಿ.ಜಿ. ಜಾಧವ, ದೈಹಿಕ ಶಿಕ್ಷಣ ಶಿಕ್ಷಕ

*ಬಸವರಾಜ ಹೂಗಾರ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.