14 ರೈಲ್ವೇ ನಿಲ್ದಾಣಗಳಿಗೆ ತೆರಳಲು ಕೋವಿಡ್ ಕೇರ್ ಸೆಂಟರ್ ಸಜ್ಜು
Team Udayavani, May 8, 2020, 3:31 PM IST
ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ಕೊರೊನಾ ಸೋಂಕಿತರಿಗೆ ಚಿಕಿತ್ಸೆಗೆಂದು ಭಾರತೀಯ ರೈಲ್ವೆ ಸಚಿವಾಲಯ ಸೂಚನೆ ಮೇರೆಗೆ ನೈರುತ್ಯ ರೈಲ್ವೆ ವಲಯ ಒಟ್ಟು 320 ರೈಲ್ವೆ ಬೋಗಿಗಳನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿದ್ದು, ಎಲ್ಲ ಬೋಗಿಗಳು ಆಯಾ ವಲಯ ವ್ಯಾಪ್ತಿಗೆ ತೆರಳಲು ಮುಂದಾಗಿವೆ.
ಕೋವಿಡ್ ಕೇರ್ ಸೆಂಟರ್ಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಲಹೆ ಮೇರೆಗೆ ರೂಪಿಸಲಾಗಿದೆ. ರೈಲ್ವೆ ಮಂಡಳಿ ನೈರುತ್ಯ ರೈಲ್ವೆ ವಲಯಕ್ಕೆ 312 ಕೋವಿಡ್ ಕೇರ್ ಸೆಂಟರ್ ರೂಪನೆಗೆ ಸೂಚಿಸಿತ್ತು. ಆದರೆ, 320 ಸೆಂಟರ್ ಗಳನ್ನು ತಯಾರಿಸಲಾಗಿದೆ. ರಾಜ್ಯ ಸರಕಾರದ ಬೇಡಿಕೆಯಂತೆ ಕೊರೊನಾ ಸೋಂಕಿತರ ಚಿಕಿತ್ಸೆಗೆ ಬಳಕೆಯಾಗುವ ಸರ್ವ ಸನ್ನದ್ಧ ಬೋಗಿಗಳನ್ನು ನೀಡಲಾಗುತ್ತದೆ. ನೈರುತ್ಯ ರೈಲ್ವೆ ವಲಯ ವ್ಯಾಪ್ತಿಯ ರಾಜ್ಯದ 14 ರೈಲ್ವೆ ನಿಲ್ದಾಣಗಳಿಗೆ ಈ ವಿಶೇಷ ಬೋಗಿಗಳನ್ನು ಕಳುಹಿಸಬಹುದಾಗಿದೆ. ಆಯಾ ಜಿಲ್ಲಾಡಳಿತಗಳು ಇವುಗಳನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. ನೈರುತ್ಯ ರೈಲ್ವೆ ವಲಯ ವ್ಯಾಪ್ತಿಯ ಬೆಂಗಳೂರು, ಹುಬ್ಬಳ್ಳಿ, ಮೈಸೂರು, ಯಶವಂತಪುರ, ಹರಿಹರ, ಶಿವಮೊಗ್ಗ ನಗರ, ಹೊಸಪೇಟೆ, ಹಾಸನ, ಅರಸಿಕೆರೆ, ಬಾಗಲಕೋಟೆ, ತಾಳಗುಪ್ಪ, ವಿಜಯಪುರ, ಬೆಳಗಾವಿ, ವಾಸ್ಕೋ-ಡ-ಗಾಮ ನಿಲ್ದಾಣಗಳಲಿ ಈ ವಿಶೇಷ ಬೋಗಿಗಳನ್ನು ನಿಲ್ಲಿಸಬಹುದ್ದಾಗಿದ್ದು, ಆಯಾ ನಿಲ್ದಾಣಗಳಿಗೆ ತೆರಳಲು ಇವು ಸಜ್ಜುಗೊಂಡಿವೆ.
ರಾಜ್ಯ ಸರಕಾರ ಬೇಡಿಕೆ ಮೇರೆಗೆ ಮಾತ್ರ ವಲಯ ವ್ಯಾಪ್ತಿಯ 14 ರೈಲ್ವೆ ನಿಲ್ದಾಣಗಳಲ್ಲಿ ಯಾವುದಕ್ಕೆ ಹೇಳಿದರೆ ಅಲ್ಲಿಗೆ ವಿಶೇಷ ಬೋಗಿಗಳನ್ನು ಕಳುಹಿಸಲಾಗುತ್ತದೆ. ಆಯಾ ಜಿಲ್ಲಾಡಳಿತಗಳು ಸೂಚನೆ ಮೇರೆಗೆ ಇವುಗಳನ್ನು ಕಳುಹಿಸಲಾಗುತ್ತದೆ. ಜತೆಗೆ ಸರಕಾರ ಬೇಡಿಕೆ ಸಲ್ಲಿಸಿದಲ್ಲಿ, ತುರ್ತು ಸ್ಥಿತಿಯಲ್ಲಿ ಕೋವಿಡ್ ಕೇರ್ ಸೆಂಟರ್ ಜತೆಗೆ ಹುಬ್ಬಳ್ಳಿ, ಬೆಂಗಳೂರು, ಮೈಸೂರು, ಯಶವಂತಪುರಕ್ಕೆ ವೈದ್ಯಕೀಯ ಸಿಬ್ಬಂದಿ ನೀಡಲು ನೈರುತ್ಯ ರೈಲ್ವೆ ವಲಯ ಸಿದ್ಧ ಇದ್ದು, ಇನ್ನುಳಿದ ನಿಲ್ದಾಣಗಳಿಗೆ ರಾಜ್ಯ ಸರಕಾರವೇ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಬೇಕಾಗಿದೆ. ಬೋಗಿಗೆ ಆರ್ಪಿಎಫ್ ಭದ್ರತೆ ಒದಗಿಸಲಾಗುತ್ತದೆ ಎಂದು ನೈರುತ್ಯ ರೈಲ್ವೆ ವಲಯ ಕಚೇರಿ ಪ್ರಕಟನೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ