ತಮ್ಮನಿಗೆ ಚಾಕುವಿನಿಂದ ಇರಿದ ಅಣ್ಣ
Team Udayavani, Oct 6, 2022, 9:49 AM IST
ಹುಬ್ಬಳ್ಳಿ: ಚಿನ್ನದ ವಿಚಾರವಾಗಿ ಸಹೋದರರ ನಡುವೆ ಜಗಳವುಂಟಾಗಿ ವಿಕೋಪಕ್ಕೆ ಹೋಗಿ ತಮ್ಮನಿಗೆ ಅಣ್ಣ ಚಾಕುವಿನಿಂದ ಇರಿದು ಮಾರಣಾಂತಿಕ ಗಾಯಗೊಳಿಸಿದ ಘಟನೆ ವಿಜಯದಶಮಿ ದಿನವಾದ ಬುಧವಾರ ಬೆಳಗ್ಗೆ ಇಲ್ಲಿನ ಕೇಶ್ವಾಪುರ ಪಾರಸವಾಡಿಯ ವಿನಾಯಕ ಕಾಲೋನಿಯಲ್ಲಿ ನಡೆದಿದೆ.
ಘಟನೆಯಲ್ಲಿ ಸಾಗರ ಬಾಕಳೆ ಗಂಭೀರ ಗಾಯಗೊಂಡಿದ್ದು, ಸಂಜಯ ಎಂಬುವರೆ ಹಲ್ಲೆ ಮಾಡಿದವರು. ಸಾಗರ ಮನೆಯಲ್ಲಿದ್ದ ಚಿನ್ನವನ್ನು ಸಂಜಯ ತೆಗೆದುಕೊಂಡು ಹೋಗಿದ್ದ. ಪೂಜೆ ಸಲುವಾಗಿ ಅದನ್ನು ಕೇಳಲೆಂದು ತಂದೆಯೊಂದಿಗೆ ಅಣ್ಣನ ಮನೆಗೆ ಸಾಗರ ಹೋದಾಗ ಇಬ್ಬರ ನಡುವೆ ಜಗಳವಾಗಿದೆ.
ಅದು ವಿಕೋಪಕ್ಕೆ ಹೋದಾಗ ಸಾಗರ ಬಿಯರ್ನ ಖಾಲಿ ಬಾಟಲಿಯಿಂದ ಅಣ್ಣನಿಗೆ ಹೊಡೆದಿದ್ದಾನೆ. ಆಗ ಸಿಟ್ಟಾದವನೇ ಅಡುಗೆ ಮನೆಯಲ್ಲಿದ್ದ ಚಾಕುವಿನಿಂದ ಸಾಗರನ ಎದೆ-ಹೊಟ್ಟೆಗೆ ಇರಿದಿದ್ದು, ಗಂಭೀರ ಗಾಯಗೊಂಡಿರುವ ಸಾಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇವರ ನಡುವೆ ಆಸ್ತಿ ವಿಷಯವಾಗಿಯೂ ತಕರಾರು ಇದೆ.
ಘಟನೆಗೆ ಸಂಬಂಧಿಸಿ ಸಂಜಯನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕೇಶ್ವಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ