ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ : ಬಿಜೆಪಿಗೆ ಸಾಧ್ಯವಾದೀತೆ ಮಿಷನ್‌-60?

ತಪ್ಪಿದ ಅಧಿಕಾರ ಮತ್ತೆ ಪಡೆಯಲು ಕಾಂಗ್ರೆಸ್‌ ರಣ ತಂತ್ರ­ಅಸ್ತಿತ್ವಕ್ಕಾಗಿ ಜೆಡಿಎಸ್‌, ಎಎ ಪಿ, ಎಐಎಂಐಎಂ ಸಜ್ಜು

Team Udayavani, Aug 19, 2021, 2:00 PM IST

fydryt

ವರದಿ: ಅಮರೇಗೌಡ ಗೋನವಾರ

ಹುಬ್ಬಳ್ಳಿ: ಕಳೆದೊಂದು ದಶಕದಿಂದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿದಿದ್ದ ಬಿಜೆಪಿ, ಈ ಬಾರಿಯೂ ತನ್ನ ವಿಜಯ ಯಾತ್ರೆ ಮುಂದುವರಿಸುವ ನಿಟ್ಟಿನಲ್ಲಿ ಮಿಷನ್‌-60 ಘೋಷಣೆಯೊಂದಿಗೆ ಅತ್ಯುತ್ಸಾಹದಲ್ಲಿದೆ. ಇನ್ನೊಂದು ಕಡೆ ತಪ್ಪಿದ ಅಧಿಕಾರ ಮತ್ತೆ ಪಡೆಯುವ ಸಾಹಸಕ್ಕೆ ಕಾಂಗ್ರೆಸ್‌ಮುಂದಾಗಿದೆ. ಇದರ ನಡುವೆ ಜೆಡಿಎಸ್‌, ಮೊದಲ ಬಾರಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿರುವ ಆಮ್‌ಆದ್ಮಿ ಪಕ್ಷ, ಎಐಎಂಐಎಂ, ಆರ್‌ಪಿಐ ಇನ್ನಿತರೆ ಪಕ್ಷಗಳು ತಮ್ಮ ಅಸ್ತಿತ್ವಕ್ಕಾಗಿ ಸೆಣೆಸಲು ಸಜ್ಜಾಗಿವೆ.

ಕಳೆದ ಬಾರಿಯ ಗೆಲುವು, ಬದಲಾದ ರಾಜಕೀಯ ಸ್ಥಿತಿ, ಅಭಿವೃದ್ಧಿ ಯೋಜನೆಗಳ ಲೆಕ್ಕಾಚಾರದಲ್ಲಿ ಬಿಜೆಪಿ ಈ ಬಾರಿ ಗೆಲುವು ಸುಲಭವಾಗಲಿದೆ ಎಂಬ ಚಿಂತನೆಯಲ್ಲಿದ್ದರೆ, ಬಿಜೆಪಿ ಸರಕಾರದ ವೈಫಲ್ಯ,ಅವಳಿನಗರ ಸಮಸ್ಯೆಗಳಿಗೆ ಸ್ಪಂದನೆ ಕೊರತೆ ವಿಚಾರಗಳನ್ನು ಮುಂದಿಟ್ಟುಕೊಂಡು ಮತದಾರರ ಒಲವು ಗಳಿಸುವ ಯತ್ನಕ್ಕೆ ಕಾಂಗ್ರೆಸ್‌ ಮುಂದಾಗಿದೆ. ಜೆಡಿಎಸ್‌ ಸೇರಿದಂತೆ ಹೊಸ ಪಕ್ಷಗಳ ಸ್ಪರ್ಧೆಯ ನಡುವೆ ಬಿಜೆಪಿಯ ಮಿಷನ್‌-60 ಸಾಧ್ಯವಾದೀತೆ? ಬಿಜೆಪಿ ಗುರಿಯ ಆಸುಪಾಸು ತಲುಪುವ ಉತ್ಸಾಹದಲ್ಲಿದೆ. ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಅಧಿಕಾರ ನಮ್ಮದೇ ಎನ್ನುತ್ತಿವೆ ಕಾಂಗ್ರೆಸ್‌.

ಅಧಿಕಾರ ಹಿಡಿಯಲು ಸರ್ಕಸ್‌ ಶುರು: 2013ರಲ್ಲಿ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆದಿತ್ತು. ಹುಬ್ಬಳ್ಳಿಯವರೇ ಆದ ಜಗದೀಶ ಶೆಟ್ಟರ ಅವರು ಮುಖ್ಯಮಂತ್ರಿಯೂ ಆಗಿದ್ದರು. ಪಾಲಿಕೆ ಚುನಾವಣೆಯಲ್ಲಿ ಒಟ್ಟು 67 ಸ್ಥಾನಗಳಲ್ಲಿ ಸುಮಾರು 40-45 ಸ್ಥಾನಗಳ ಗೆಲುವಿನ ನಿರೀಕ್ಷೆಯೊಂದಿಗೆ ಸ್ಪರ್ಧೆಗಿಳಿದಿದ್ದ ಬಿಜೆಪಿ 33 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಅಧಿಕಾರದ ಉತ್ಸಾಹದಲ್ಲಿದ್ದ ಕಾಂಗ್ರೆಸ್‌ 22 ಸ್ಥಾನ ಗಳಿಸಿದ್ದರೆ, ಜೆಡಿಎಸ್‌ ಕೇವಲ 9 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿತ್ತು. ಕೆಜೆಪಿ, ಬಿಜೆಪಿ ಬಂಡಾಯ ಹಾಗೂ ಪಕ್ಷೇತರರು ತಲಾ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದ್ದರು. ಬಿಜೆಪಿ ಗೆಲುವಿನ ಓಟಕ್ಕೆ ಸುಮಾರು 8-9 ವಾರ್ಡ್‌ಗಳಲ್ಲಿ ಕೆಜೆಪಿ ಬ್ರೇಕ್‌ ಹಾಕಿತ್ತು. ನಿರೀಕ್ಷಿತ ಸ್ಥಾನಗಳ ಗೆಲವು ಸಾಧ್ಯವಾಗದಿದ್ದರೂ ಬಿಜೆಪಿ ಜೆಡಿಎಸ್‌ ಬೆಂಬಲದೊಂದಿಗೆ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿತ್ತು. ಇದೀಗ ಅವಳಿನಗರದಲ್ಲಿ 82 ವಾರ್ಡ್‌ಗಳಾಗಿವೆ. ಅಧಿಕಾರ ಹಿಡಿಯಲು ಬಿಜೆಪಿ-ಕಾಂಗ್ರೆಸ್‌ ತಮ್ಮದೇ ಕಾರ್ಯತಂತ್ರ-ಸರ್ಕಸ್‌ಗೆ ಮುಂದಾಗಿವೆ. ಒಂದು ವೇಳೆ ಅತಂತ್ರ ಸ್ಥಿತಿ ಎದುರಾದರೆ ತನಗೆ ಬೇಡಿಕೆ ಖಚಿತ ಎಂಬ ನಿರೀಕ್ಷೆಯಲ್ಲಿ ಜೆಡಿಎಸ್‌ ಇದೆಯಾದರೂ ಈ ಬಾರಿ ಅದು ಇದ್ದ ಸ್ಥಾನಗಳನ್ನಾದರೂ ಉಳಿಸಿಕೊಳ್ಳುವುದೇ ಅಥವಾ ಸ್ಥಾನ ಹೆಚ್ಚಳ ಸಾಧನೆ ತೋರುವುದೇ ಎಂದು ನೋಡಬೇಕಿದೆ.

ಪ್ರಮುಖ ಮೂರು ಪಕ್ಷಗಳ ನಡುವೆ ಈ ಬಾರಿ ಆಮ್‌ಆದ್ಮಿ ಪಕ್ಷ, ಎಐಎಂಐಎಂ, ಆರ್‌ಪಿಐ ಇನ್ನಿತರೆ ಪಕ್ಷಗಳು ಅದೃಷ್ಟ ಪರೀಕ್ಷೆಗೆ ಮುಂದಾಗಿವೆ. ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ಟಿಕೆಟ್‌ ಪೈಪೋಟಿ ಜೋರಾಗಿಯೇ ಇದೆ. ಎರಡು ಪಕ್ಷಗಳಲ್ಲಿ ಟಿಕೆಟ್‌ ಯಾರಿಗೆ ಎಂಬ ಚಿಂತನ-ಮಂಥನ ನಡೆದಿದ್ದು, ಗೆಲ್ಲುವ ಕುದುರೆಗೆ ಆದ್ಯತೆ ನೀಡಲು ಎರಡು ಪಕ್ಷಗಳು ಮುಂದಾಗಿವೆ. ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಆ.19 ಇಲ್ಲವೆ 20ರಂದು ಬಿಡುಗಡೆ ಮಾಡುವ ಸಾಧ್ಯತೆ ಇದ್ದು, ಕಾಂಗ್ರೆಸ್‌ ನಲ್ಲಿ ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಟಿಕೆಟ್‌ ಯಾರಿಗೆ ಎಂಬುದನ್ನು ಶಾಸಕ ಪ್ರಸಾದ ಅಬ್ಬಯ್ಯ ಅವರ ನಿರ್ಣಯಕ್ಕೆ ಪಕ್ಷ ಮನ್ನಣೆ ನೀಡಲಿದೆ ಎಂದು ಹೇಳಲಾಗುತ್ತಿದ್ದು, ಪಾಲಿಕೆ ವ್ಯಾಪ್ತಿಯ ಹುಬ್ಬಳ್ಳಿ-ಧಾರವಾಡ ಕೇಂದ್ರ, ಪಶ್ಚಿಮ ಹಾಗೂ ಧಾರವಾಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಭ್ಯರ್ಥಿಗಳು ಯಾರೆಂಬುದನ್ನು ಕೆಪಿಸಿಸಿ ನಿರ್ಧರಿಸುತ್ತದೆ ಎಂದು ಹೇಳಲಾಗುತ್ತಿದೆ. ಹು.ಧಾ.ಪೂರ್ವ ವಿಧಾನಸಭೆ ಕ್ಷೇತ್ರ ಹೊರತುಪಡಿಸಿ ಪಾಲಿಕೆ ವ್ಯಾಪ್ತಿಯ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಮೂವರು ಅಭ್ಯರ್ಥಿಗಳ ಹೆಸರು ಶಿಫಾರಸು ಮಾಡಲು ಕಾಂಗ್ರೆಸ್‌ ಪಕ್ಷ ಮೂರು ಕ್ಷೇತ್ರಗಳಿಗೆ ಪಕ್ಷದ ಸ್ಥಳೀಯ ಮುಖಂಡರ ಸಮಿತಿಗಳನ್ನು ಮಾಡಿದ್ದು, ಸಮಿತಿ ಸೂಚಿಸುವ ಮೂರು ಹೆಸರುಗಳಲ್ಲಿ ಕೆಪಿಸಿಸಿ ಒಂದು ಹೆಸರನ್ನು ಅಂತಿಮಗೊಳಿಸಲಿದೆ ಎನ್ನಲಾಗಿದೆ.

ಆಮ್‌ಆದ್ಮಿ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದರೆ, ಆರ್‌ಪಿಐ ಮೊದಲ ಪಟ್ಟಿ ಪ್ರಕಟಿಸಿದೆ. ಎಐಎಂಐಎಂ ಸೇರಿದಂತೆ ವಿವಿಧ ಪಕ್ಷಗಳು ಈ ನಿಟ್ಟಿನಲ್ಲಿ ಇದುವರೆಗೂ ಏನನ್ನು ಹೇಳಿಲ್ಲ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.