ಜಗಕ್ಕೆ ಬೆಳಕು ನೀಡಿದ್ದು 12ನೇ ಶತಮಾನ: ತರಳಬಾಳು ಶ್ರೀ


Team Udayavani, Feb 11, 2019, 11:09 AM IST

11-february-23.jpg

ಹುಬ್ಬಳ್ಳಿ: ಹನ್ನೆರಡನೇ ಶತಮಾನ ಜಗತ್ತಿಗೆ ಬೆಳಕು ನೀಡಿದ ಶತಮಾನ. ಬಸವಾದಿ ಶರಣರು ಸಮಾಜದಲ್ಲಿರುವ ಅಜ್ಞಾನ, ಕಂದಾಚಾರ, ಅಸಮಾನತೆ, ಜಾತಿಯತೆ ಕೊಳೆ ತೊಳೆದು ಸ್ವಚ್ಛತೆ ಮೂಡಿಸುವ ಕಾರ್ಯ ಮಾಡಿದರು ಎಂದು ಸಾಣೆಹಳ್ಳಿ ಶ್ರೀ ತರಳಬಾಳು ಜಗದ್ಗುರು ಡಾ| ಪಂಡಿತಾರಾಧ್ಯ ಶಿವಾಚಾರ್ಯರು ಹೇಳಿದರು.

ನ್ಯೂ ಕಾಟನ್‌ ಮಾರ್ಕೆಟ್‌ನ ಸಾಂಸ್ಕೃತಿಕ ಭವನದಲ್ಲಿ ಸಾಣೆಹಳ್ಳಿ ಶಿವಸಂಚಾರ ಕಲಾಸಂಘದಿಂದ ರವಿವಾರ 100 ಮಕ್ಕಳಿಂದ ನಡೆದ ಜಾನಪದ ಶೈಲಿಯ ನೃತ್ಯ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಮಾಜದಲ್ಲಿರುವ ಜನರ ಬದುಕನ್ನುಉನ್ನತೀಕರಿಸಬೇಕೆಂದು 12ನೇ ಶತಮಾನದ ಬಸವಾದಿ ಶರಣರ ಬದುಕನ್ನು ಜನರಿಗೆ ಮುಟ್ಟಿಸುವ ಕಾರ್ಯ ಮಾಡಿದ್ದಾರೆ. ಅಂದಿನ ಜಗದ್ಗುರುಗಳ ಪ್ರೇರಣೆಯಿಂದ ಸಾಣೆಹಳ್ಳಿಯಲ್ಲಿ ಶಿವಕುಮಾರ ಕಲಾ ಸಂಘ, ಶಿವಸಂಚಾರ ಆರಂಭವಾಯಿತು. ಕಳೆದ 21 ವರ್ಷದಲ್ಲಿ ಶಿವಸಂಚಾರದಿಂದ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ 63 ನಾಟಕಗಳ 3 ಸಾವಿರಕ್ಕೂ ಹೆಚ್ಚು ಪ್ರದರ್ಶನ ನೀಡಲಾಗಿದೆ ಎಂದರು.

ಇಂದು ಸಮಾಜದಲ್ಲಿ ಶುದ್ಧ ರಾಜಕಾರಣ ಉಳಿದಿಲ್ಲ, ಶುದ್ಧವಾದ ರಾಜಕೀಯ ಬೇಕು. ಕೊಳಕು ರಾಜಕೀಯ ಬೇಡವಾಗಿದೆ. ನಾವು ಯೋಗ್ಯರನ್ನು ಆಯ್ಕೆ ಮಾಡಬೇಕಿದೆ. ಮತ ಮಾರಿಕೊಳ್ಳುವವರು ಇರುವವರೆಗೂ ಪ್ರಜಾಪ್ರಭುತ್ವ ಹಾಳಾಗಿ ಹೋಗುತ್ತದೆ ಎಂದರು. ಮೂರುಸಾವಿರ ಮಠದ ಶ್ರೀ ಜಗದ್ಗುರು ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿ, ಪಂಡಿತಾರಾಧ್ಯರು ಪ್ರಯೋಗಶೀಲರು, ಸದಾ ಒಂದಿಲ್ಲೊಂದು ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ಅವರ ಮೂಲಕವೇ ವಚನಗಳು ಇಂದು ಎಲ್ಲೆಡೆ ಪ್ರಚಾರ ಪಡೆಯುತ್ತಿವೆ ಎಂದರು. ಡಾ| ಎಸ್‌.ಪಿ.ಬಳಿಗಾರ ಮಾತನಾಡಿ, ಶಿವಸಂಚಾರ ಕಲಾಸಂಘದ 100 ಮಕ್ಕಳು 40ಕ್ಕೂ ಹೆಚ್ಚು ವಚನಗಳನ್ನು ನೃತ್ಯರೂಪದಲ್ಲಿ ತೋರಿಸುವುದು ಸಾಮಾನ್ಯ ಕೆಲಸವಲ್ಲ. ಔಷಧಿ ಇಲ್ಲದೇ ರೋಗ ಗುಣವಾಗಬೇಕೆಂದರೆ ಇಂತಹ ಕಾರ್ಯಕ್ರಮದ ಮೂಲಕವೇ ಸಾಧ್ಯ ಎಂದು ಹೇಳಿದರು.

ಶಾಂತ ಗಂಗಾಧರ ಮಾತನಾಡಿ, ಶತಮಾನದಿಂದ ದೀಪ ಬೆಳಗುತ್ತಿದೆ. ಆದರೆ ಬೆಂಕಿ ಹಚ್ಚುವವರು ಕೆಲವರು, ದೀಪ ಹಚ್ಚುವವರು ಕೆಲವರು. ಮಾತು ಬೆಲೆಬಾಳುವ ಸಮಾಜ ಕಟ್ಟುತ್ತದೆ. ನಾವೆಲ್ಲರೂ ಒಂದು ಎಂದು ತೋರಿಸಿರುವುದು ವಚನ. ವಚನ ಹೇಳಬಹುದು, ಹಾಡಬಹುದು, ನೃತ್ಯ ಮಾಡಬಹುದು ಎಂಬುದನ್ನು ತರಳಬಾಳು ಶ್ರೀಗಳು ತೋರಿಸಿ ಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು. ಪ್ರಾಚಾರ್ಯ ಐ.ಜಿ. ಚಂದ್ರಶೇಖರ ಮಾತನಾಡಿದರು. ನಂತರ ಮಕ್ಕಳು ವಿವಿಧ ವಚನಗಳ ನೃತ್ಯ ಪ್ರದರ್ಶನ ನೀಡಿದರು. ಪಿ.ಎಸ್‌. ಧರಣೆಪ್ಪನವರ, ಕಾಡಯ್ಯ ಹಿರೇಮಠ, ಡಾ| ಕೆ.ಎಚ್. ಜಿತೂರಿ, ಡಾ| ಸುರೇಶ ಹಿರೇಗೌಡರ, ಡಾ| ಅಭಯಕುಮಾರ ಮಂಟಗಾಣಿಕರ, ವಿ.ಸಿ. ಶಿಗ್ಲಿ, ಎಸ್‌.ಕೆ. ಆದಪ್ಪನವರ, ಡಾ| ಸವಿತಾ ರಾಯಚೂರ ಇನ್ನಿತರರು ಇದ್ದರು. ಆರ್‌.ಟಿ. ಮಜ್ಜಗಿ ನಿರೂಪಿಸಿದರು.

12ನೇ ಶತಮಾನದಲ್ಲಿ ವಚನಗಳು ಸೃಷ್ಟಿ ಆಗಿದ್ದರೂ ಇಂದಿಗೂ ಅವು ಪ್ರಸ್ತುತವಾಗಿವೆ. ನಮ್ಮ ಬದುಕಿಗೆ ದಾರಿ ದೀಪವಾಗಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಹಿರಿಯ ತರಳುಬಾಳು ಶ್ರೀಗಳು ಮೊಟ್ಟ ಮೊದಲಿಗೆ ವಚನಗಳನ್ನು ಹಾಡಿಸಿದರು. ನಂತರ ನಾಟಕಗಳನ್ನು ಮಾಡಿಸಿದರು. ಪುಸ್ತಕಗಳನ್ನು ಪ್ರಕಟಿಸಿದರು. ನೃತ್ಯದ ಮೂಲಕ ವಚನಗಳನ್ನು ಜನರಿಗೆ ತಲುಪಿಸಿದರು. ಇಂದಿನ ದೃಶ್ಯ ಮಾಧ್ಯಮ ಹಿಂದೆ ಇದ್ದಿದ್ದರೆ ದೊಡ್ಡ ಕ್ರಾಂತಿಯೇ ಆಗುತ್ತಿತ್ತು.
•ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ,ಸಾಣೇಹಳ್ಳಿ, ಶ್ರೀ ತರಳಬಾಳು ಮಠ

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.