ಹುಬ್ಬಳ್ಳಿ-ಹೈದರಾಬಾದ್ ವಿಮಾನಯಾನ ಆರಂಭ

­ವಾರದಲ್ಲಿ ಮೂರು ದಿನ ಸೇವೆ !ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ

Team Udayavani, Apr 1, 2021, 6:59 PM IST

fghtr

ಹುಬ್ಬಳ್ಳಿ: ನಗರದಿಂದ ಹೈದರಾಬಾದ್‌ ಗೆ ಅಲೈಯನ್ಸ್‌ ಏರ್‌ವೇಸ್‌ನಿಂದ ಆರಂಭಿಸಲಾದ ನೇರ ವಿಮಾನಯಾನ ಸೇವೆಗೆ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಬುಧವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಚಾಲನೆ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆಗೆ ಅವಶ್ಯವಾದ ಭೂಸ್ವಾ ಧೀನ ಸೇರಿದಂತೆ ಇನ್ನಿತರೆ ಕಾರ್ಯವನ್ನು ಜಿಲ್ಲಾಧಿಕಾರಿ ಮಾಡುತ್ತಿದ್ದಾರೆ. ಅದು ಪೂರ್ಣಗೊಂಡರೆ ನಗರದಿಂದ ಬೋಯಿಂಗ್‌ ಸೇರಿದಂತೆ ಅದಕ್ಕಿಂತ ದೊಡ್ಡ ಪ್ರಮಾಣದ ವಿಮಾನಗಳ ಸೇವೆ ನೇರವಾಗಿ ದೇಶ-ವಿದೇಶಗಳಿಗೂ ದೊರೆಯಲಿದೆ ಎಂದರು.

ಹುಬ್ಬಳ್ಳಿ ನಿಲ್ದಾಣವು ನೈಟ್‌ ಲ್ಯಾಂಡಿಂಗ್‌, ವಿಜುವಲ್‌ ಲೈಟ್ಸ್‌, ರನ್‌ವೇ ಲೈಟ್ಸ್‌ ಹಾಗೂ ಕ್ಯಾಟ್‌ ವನ್‌ ಅಪ್ರೋಚ್‌, ಸ್ವಯಂ ಚಾಲಿತ ಲ್ಯಾಂಡಿಂಗ್‌ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆಯೊಂದಿಗೆ ಸುಸಜ್ಜಿತವಾದ ನಿಲ್ದಾಣವಾಗಿ ಅಭಿವೃದ್ಧಿ ಪಡಿಸಲಾಗಿದೆ. ದೊಡ್ಡ ಪ್ರಮಾಣದ ನಿಲ್ದಾಣವಾಗಿ ಬೆಳವಣಿಗೆ ಆಗುತ್ತಿದೆ. ಹುಬ್ಬಳ್ಳಿ-ಹೈದರಾಬಾದ್‌ ನಡುವೆ ವಿಮಾನಸೇವೆ ಅವಶ್ಯವಿತ್ತು. ಈ ಬಗ್ಗೆ ಹಲವು ತಿಂಗಳಿಂದ ಪ್ರಯಾಣಿಕರಿಂದ ಬೇಡಿಕೆಯಿತ್ತು. ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ ಸಿಂಗ್‌ ಪುರಿಯವರ ವಿಶೇಷ ಪ್ರಯತ್ನದಿಂದ ಹೈದರಾಬಾದ್‌ ನಗರಕ್ಕೆ ವಾರದಲ್ಲಿ ಮೂರು ದಿನ ವಿಮಾನಯಾನ ಸೇವೆ ಆರಂಭವಾಗಿದೆ. ವಿಮಾನಯಾನಗಳ ಸಂಖ್ಯೆ ಆಧರಿಸಿ ಮುಂದಿನ ದಿನಗಳಲ್ಲಿ ವಾರದ ಎಲ್ಲ ದಿನವೂ ಇದರ ಸೇವೆ ವಿಸ್ತರಿಸಲಾಗುವುದು ಎಂದರು.

ಹುಬ್ಬಳ್ಳಿ-ಮಂಗಳೂರು ನಡುವೆ ವಿಮಾನ ಸಂಪರ್ಕ ಕಲ್ಪಿಸಲು ಬೇಡಿಕೆ ಇದೆ. ಇದನ್ನು ಸಹ ಶೀಘ್ರ ಆರಂಭಿಸಲಾಗುವುದು. ಈಗಾಗಲೇ ನಗರದಿಂದ ಮುಂಬಯಿ, ಅಹಮದಾಬಾದ್‌, ಕೊಚ್ಚಿ, ಕೊಣ್ಣೂರ, ಗೋವಾಗಳಿಗೆ ವಿಮಾನಯಾನ ಸೌಲಭ್ಯ ಕಲ್ಪಿಸಲಾಗಿದೆ. ಕೊರೊನಾ ನಂತರದ ಸ್ಥಿತಿಗತಿ ನೋಡಿಕೊಂಡು ಇತರೆ ನಗರಗಳಿಗೂ ವಿಮಾನ ಸಂಪರ್ಕ ಕಲ್ಪಿಸಲಾಗುವುದು. ಟ್ರೂ ಜೆಟ್‌ ಮಾಲಿಕರೊಂದಿಗೆ ಹೆಚ್ಚಿನ ವಿಮಾನ ಸಂಪರ್ಕ ಕಲ್ಪಿಸುವಂತೆ ಮಾತುಕತೆ ನಡೆಸಲಾಗಿದೆ ಎಂದರು.

ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾತನಾಡಿ, ನಗರದ ವಿಮಾನ ನಿಲ್ದಾಣದಲ್ಲಿ 2600 ಮೀಟರ್‌ ರನ್‌ ವೇಯನ್ನು 3400 ಮೀಟರ್‌ಗೆ ವಿಸ್ತರಿಸಲು ನಿಲ್ದಾಣದ ನಿರ್ದೇಶಕರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಅದು ಮಾಸ್ಟರ್‌ ಪ್ಲಾನ್‌ದಲ್ಲೂ ಸೇರ್ಪಡೆಯಾಗಿದೆ. ಇದು ಕಾರ್ಯಗತವಾದ ಮೇಲೆ ನಿಲ್ದಾಣವು ಅಂತಾರಾಷ್ಟ್ರೀಯ ದರ್ಜೆಗೆ ತಲುಪುತ್ತದೆ.

ಮುಂದಿನ ದಿನಗಳಲ್ಲಿ ಹೊಸ ಟರ್ಮಿನಲ್‌ ಕಟ್ಟಡವು ವಿಸ್ತರಣೆಯಾಗಲಿದ್ದು, ಆಗ ನಗರದಿಂದ ಮಧ್ಯ ಪೂರ್ವ ಹಾಗೂ ಅಂತಾರಾಷ್ಟ್ರೀಯ ವಿಮಾನಗಳ ಸೇವೆ ಲಭ್ಯವಾಗಲಿದೆ ಎಂದರು. ವಿಮಾನ ನಿಲ್ದಾಣ ನಿರ್ದೇಶಕ ಪ್ರಮೋದ ಕುಮಾರ ಠಾಕರೆ, ವಿಮಾನ ನಿಲ್ದಾಣ ಭದ್ರತಾ ಧಿಕಾರಿ ಜಗದೀಶ ಹಂಚಿನಾಳ, ಏರ್‌ ಇಂಡಿಯಾದ ಸ್ಥಳೀಯ ನಿಲ್ದಾಣದ ವ್ಯವಸ್ಥಾಪಕ ನಾಗೇಂದ್ರ ಕೆಂಪಯ್ಯ ಮೊದಲಾದವರಿದ್ದರು.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.