ಹುಬ್ಬಳ್ಳಿ 142 ಶಾಲಾ ಕಟ್ಟಡಗಳಲ್ಲಿ ಸೋರಿಕೆ
Team Udayavani, Aug 18, 2019, 10:10 AM IST
ಹುಬ್ಬಳ್ಳಿ: ನಗರದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಗೆ ನಗರದಲ್ಲಿರುವ ಬಹುತೇಕ ಸರಕಾರಿ ಶಾಲೆಗಳು ಸೋರಿವೆ, ಕೆಲವೊಂದು ಶಾಲೆಗಳು ಬಿರುಕು ಬಿಟ್ಟಿವೆ, ಒಂದೆರಡು ಶಾಲೆಗಳ ಕಾಂಪೌಂಡ್ ಕುಸಿದು ಬಿದ್ದಿದೆ.
ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ವ್ಯಾಪ್ತಿಯ ಸುಮಾರು 142 ಶಾಲೆಗಳ ಕುರಿತು ಇಲಾಖೆಯಿಂದ ಮಾಹಿತಿ ಕಲೆ ಹಾಕಲಾಗಿದೆ. ನಗರದಲ್ಲಿ ಬಿಟ್ಟು ಬಿಡದೇ ಸುರಿದಿರುವ ಭಾರೀ ಮಳೆಗೆ ಶಾಲೆಗಳ ಸ್ಥಿತಿ ಕೂಡಾ ಚಿಂತಾಜನಕವಾಗಿತ್ತು. ಮಳೆಯ ಸಮಯದಲ್ಲಿ ಜಿಲ್ಲಾಡಳಿತದಿಂದ ರಜೆ ಘೋಷಣೆ ಮಾಡಿದ್ದರಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗಲಿಲ್ಲ.
ಪೂರ್ವ ಕ್ಷೇತ್ರ: ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿಯೇ ಹೆಚ್ಚು ಶಾಲೆಗಳು ಇದ್ದು ಅದರಲ್ಲಿ ಹೆಚ್ಚು ಶಾಲೆಗಳು ಮೇಲ್ಭಾಗ ಸೋರುವುದು, ಗೋಡೆಗೆ ಹೊಂದಿಕೊಂಡು ನೀರು ಸೋರುವುದು, ಕೆಲವೊಂದು ಕಟ್ಟಡಗಳ ಮೇಲ್ಛಾವಣಿ ಶಿಥಿಲಗೊಂಡಿರುವುದು ಇಂತಹ ಸಮಸ್ಯೆಗಳು ಕಂಡುಬಂದಿವೆ.
ಸದಾಶಿವನಗರ ಕ್ಲಸ್ಟರ್ ವ್ಯಾಪ್ತಿಯಲ್ಲಿ 5 ಕೊಠಡಿಗಳು, ಪೆಂಡಾರಗಲ್ಲಿ ಕ್ಲಸ್ಟರ್ ವ್ಯಾಪ್ತಿಯಲ್ಲಿ 10 ಕೊಠಡಿಗಳು, ಬಿಡನಾಳ ಕ್ಲಸ್ಟರ್ ವ್ಯಾಪ್ತಿಯಲ್ಲಿ 10 ಕೊಠಡಿಗಳು, ಇಂಡಿಪಂಪ್ ಕ್ಲಸ್ಟರ್ ವ್ಯಾಪ್ತಿಯಲ್ಲಿ 10 ಕೊಠಡಿಗಳು, ಹಳೇಹುಬ್ಬಳ್ಳಿ ಕ್ಲಸ್ಟರ್ ವ್ಯಾಪ್ತಿಯಲ್ಲಿ 13 ಕೊಠಡಿಗಳು, ತಬೀಬಲ್ಯಾಂಡ್ ಕ್ಲಸ್ಟರ್ ವ್ಯಾಪ್ತಿಯಲ್ಲಿ 20 ಕೊಠಡಿಗಳು, ಘಂಟಿಕೇರಿ ಕ್ಲಸ್ಟರ್ ವ್ಯಾಪ್ತಿಯಲ್ಲಿ 25 ಕೊಠಡಿಗಳು, ಬಿಡನಾಳ ಕ್ಲಸ್ಟರ್ ವ್ಯಾಪ್ತಿಯಲ್ಲಿ ಪ್ರೌಢಶಾಲೆಯ 7 ಕೊಠಡಿಗಳ ರಿಪೇರಿ ಕಾರ್ಯ ಮಾಡಬೇಕಾಗಿದೆ.
ಹು-ಧಾ ಕೇಂದ್ರ ವಿಧಾನಸಭಾ ಕ್ಷೇತ್ರ: ನಾಗಶೆಟ್ಟಿಕೊಪ್ಪ ಕ್ಲಸ್ಟರ್ ವ್ಯಾಪ್ತಿಯಲ್ಲಿ 14 ಕೊಠಡಿಗಳು, ಹೊಸೂರ ಕ್ಲಸ್ಟರ್ ವ್ಯಾಪ್ತಿಯಲ್ಲಿ 5 ಕೊಠಡಿಗಳು.
ಹು-ಧಾ ಪಶ್ಚಿಮ ವಿಧಾನಸಭೆ ಕ್ಷೇತ್ರ: ಸದಾಶಿವ ಕ್ಲಸ್ಟರ್ ವ್ಯಾಪ್ತಿಯಲ್ಲಿ 2 ಕೊಠಡಿಗಳು, ಬಸವೇಶ್ವರ ನಗರ ಕ್ಲಸ್ಟರ್ ವ್ಯಾಪ್ತಿಯಲ್ಲಿ 15 ಕೊಠಡಿಗಳು, ಆನಂದನಗರ ಕ್ಲಸ್ಟರ್ ವ್ಯಾಪ್ತಿಯಲ್ಲಿ 5 ಕೊಠಡಿಗಳು ಹಾನಿಯಾಗಿರುವ ಕುರಿತು ವರದಿ ಮಾಡಲಾಗಿದ್ದು, ಇಲಾಖೆಗೆ ಮಾಹಿತಿ ನೀಡಲಾಗಿದೆ.
ಕಾಂಪೌಂಡ್ ಗೋಡೆ ಕುಸಿತ: ಹು-ಧಾ ಪೂರ್ವ ಹಾಗೂ ಕೇಂದ್ರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಶಿವಶಕ್ತಿ ನಗರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ.5 ಘಂಟಿಕೇರಿ, ಶಿರಡಿನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ವಿಶ್ವೇಶ್ವರ ನಗರ ಸರಕಾರಿ ಪ್ರೌಢಶಾಲೆಯ ಕಾಂಪೌಂಡ್ ಗೋಡೆಗಳು ಕುಸಿದಿರುವ ಕುರಿತು ವರದಿಯಾಗಿವೆ.
ಭಾರಿ ಮಳೆಗೆ ಶಹರ ಕ್ಷೇತ್ರ ವ್ಯಾಪ್ತಿಯ ಹಲವು ಶಾಲೆಗಳಲ್ಲಿ ಸೋರಿಕೆ ಕಂಡು ಬಂದಿದೆ. ಕೌಲಪೇಟೆ ಶಾಲೆಯ ಮೇಲ್ಭಾಗದಲ್ಲಿ ಹೆಚ್ಚಿನ ಸೋರಿಕೆ ಕಂಡುಬಂದಿದ್ದು, ಅಲ್ಲಲ್ಲಿಸ್ಯ್ಲಾಬ್ ಕಿತ್ತಿರುವ ಕುರಿತು ಸಮೀಕ್ಷೆಯಲ್ಲಿ ಮಾಹಿತಿ ಸಿಕ್ಕಿದೆ. ಈ ಕುರಿತು ಇಲಾಖೆಗೆ ಸಂಪೂರ್ಣ ವರದಿ ಸಲ್ಲಿಸಲಾಗುತ್ತಿದೆ. •ಶ್ರೀಶೈಲ ಕರಿಕಟ್ಟಿ, ಶಹರ ಕ್ಷೇತ್ರ ಶಿಕ್ಷಣಾಧಿಕಾರಿ
•ಬಸವರಾಜ ಹೂಗಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ