ಪಾಲಿಕೆ ಚುನಾವಣೆ ಪ್ರಕ್ರಿಯೆ ಸಕ್ರಿಯ

|ಅಂದು ಕೊಂಡಂತೆ ನಡೆ ದರೂ ಬೇಕು 7-8 ತಿಂಗಳು |ವಾರ್ಡ್‌ ಮರುವಿಂಗಡಣೆ-ಮೀಸಲಾತಿ ಸವಾಲು

Team Udayavani, Dec 18, 2020, 2:59 PM IST

ಪಾಲಿಕೆ ಚುನಾವಣೆ ಪ್ರಕ್ರಿಯೆ ಸಕ್ರಿಯ

ಹುಬ್ಬಳ್ಳಿ: ಮಹಾನಗರ ಪಾಲಿಕೆ ವಾರ್ಡ್‌ಗಳ ಮರುವಿಂಗಡಣೆ, ಚುನಾವಣೆ ಕುರಿತಾಗಿ ಹೈಕೋರ್ಟ್‌ ಮಹತ್ವದ ನಿರ್ದೇಶನ ನೀಡಿದೆ. ಎಲ್ಲವೂ ಅಂದುಕೊಂಡಂತೆ ಕಾಲಮಿತಿ ಯೊಳಗೆ ನಡೆದು ಮತ್ತೆ ಯಾವುದೇ ವಿಘ್ನ ಬಾರದಿದ್ದರೂ ಪಾಲಿಕೆ ಚುನಾವಣೆ ನಡೆಯಬೇಕೆಂದರೆ ಕನಿಷ್ಠ 7-8 ತಿಂಗಳಾದರೂ ಬೇಕಾಗುತ್ತದೆ. ಈ ಮಧ್ಯ ಜನಗಣತಿ ಬರುವುದರಿಂದ ಚುನಾವಣೆ ಇನ್ನಷ್ಟು ವಿಳಂಬವಾದೀತೆ ಎಂಬ ಶಂಕೆ ಅನೇಕರದ್ದಾಗಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಡಳಿತ ಮಂಡಳಿ ಅಧಿಕಾರಾವಧಿ 2019ರ ಮಾರ್ಚ್‌ಗೆ ಕೊನೆಗೊಂಡಿತ್ತು.ಮಹಾನಗರದಲ್ಲಿನ ವಾರ್ಡ್‌ಗಳನ್ನುಮರುವಿಂಗಡಿಸುವ ಹಾಗೂ ವಾರ್ಡ್‌ ಸಂಖ್ಯೆ ಹೆಚ್ಚಳ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿತ್ತು. ಇದಕ್ಕೆ ಪೂರಕ ಎನ್ನುವಂತೆ ವಾರ್ಡ್ ‌ಗಳ ಮರು ವಿಂಗಡಣೆಯೊಂದಿಗೆ ಮೀಸಲಾತಿ ಘೋಷಿಸಲಾಗಿತ್ತಾದರೂ, ಈ ಬಗ್ಗೆ ಆಕ್ಷೇಪ ವ್ಯಕ್ತವಾಗಿ ಪ್ರಕರಣ ಕೋರ್ಟ್‌ ಮೆಟ್ಟಿಲೇರಿತ್ತು. ಕೊನೆಗೆ ಸರ್ಕಾರ ಮೀಸಲಾತಿ ಅಧಿಸೂಚನೆ ಹಿಂಪಡೆಯಬೇಕಾಯಿತು. ಇದೀಗಹೈಕೋರ್ಟ್‌ ಸೂಚನೆಯಿಂದಾಗಿ ಮತ್ತೆ ಪಾಲಿಕೆ ಚುನಾವಣೆ ಪ್ರಕ್ರಿಯೆ ಸಕ್ರಿಯತೆ ಪಡೆದುಕೊಂಡಿದೆ.

82 ವಾರ್ಡ್‌ಗಳು ಅಸ್ತಿತ್ವಕ್ಕೆ?: ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ 67 ವಾರ್ಡ್‌ಗಳಿದ್ದು, ಮರು ವಿಂಗಡಣೆಯಾದರೆ 82 ವಾರ್ಡ್‌ಗಳಾಗಲಿವೆ.ಸುಮಾರು 15 ವಾರ್ಡ್‌ಗಳು ಹೊಸದಾಗಿಅಸ್ತಿತ್ವಕ್ಕೆ ಬರಲಿವೆ. ರಾಜ್ಯದಲ್ಲಿ ಬೆಂಗಳೂರುನಂತರದಲ್ಲಿ ಎರಡನೇ ಅತಿದೊಡ್ಡ ಮಹಾ ನಗರ ಎಂಬ ಕೀರ್ತಿ ಹೊಂದಿದೆ. ಮಹಾನಗರ ಒಟ್ಟಾರೆ 200 ಚದರ ಕಿಮೀಗಿಂತ ಹೆಚ್ಚಿನ ವ್ಯಾಪ್ತಿಯನ್ನು ಹೊಂದಿದ್ದು, 52ಕ್ಕೂ ಅಧಿಕ ಹಳ್ಳಿಗಳು ಮಹಾನಗರ ಮಡಿಲೊಳಗೆ ಸೇರಿವೆ. ಇದೀಗ ಇನ್ನಷ್ಟು ಹಳ್ಳಿಗಳ ವ್ಯಾಪ್ತಿಯೊಂದಿಗೆ ಮಹಾನಗರ ವಿಸ್ತೀರ್ಣ ಮತ್ತಷ್ಟು ಹೆಚ್ಚಿದೆ. ಮಹಾನಗರದಲ್ಲಿ ಜನಗಣತಿ ಪ್ರಕಾರ 8.68 ಲಕ್ಷ ಜನಸಂಖ್ಯೆ ವಾಸವಾಗಿದ್ದು, ಪ್ರಸ್ತುತ ಜನಸಂಖ್ಯೆ ಇನ್ನು ಹೆಚ್ಚು ಇದೆ. ಹೊಸ ಬಡಾವಣೆಗಳ ಪ್ರಮಾಣ ಹಾಗೂ ಮಹಾನಗರಕ್ಕೆ ವಲಸೆ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚತೊಡಗಿದೆ. ನಿತ್ಯ ಸುಮಾರು 500-550 ಟನ್‌ ತ್ಯಾಜ್ಯ ಉತ್ಪಾದನೆ ಆಗುತ್ತಿದೆ.

ಮಹಾನಗರ ಪಾಲಿಕೆ ಆಡಳಿತ ನಿರ್ವಹಣೆ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಪ್ರಧಾನ ಕಚೇರಿ ಇದ್ದರೆ, ಧಾರವಾಡದಲ್ಲಿ ಕಚೇರಿ ಇದೆ. ಅವಳಿ ನಗರ ವ್ಯಾಪ್ತಿಯಲ್ಲಿ ಹುಬ್ಬಳ್ಳಿಯಲ್ಲಿ 8 ಹಾಗೂಧಾರವಾಡದಲ್ಲಿ 4 ಸೇರಿದಂತೆ ಒಟ್ಟಾರೆ 12 ವಲಯ ಕಚೇರಿಗಳನ್ನು ಮಾಡುವ ಮೂಲಕ ಅಧಿಕಾರ ವಿಕೇಂದ್ರಿಧೀಕರಣ ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ 67 ವಾರ್ಡ್‌ಗಳಲ್ಲಿ ಹುಬ್ಬಳ್ಳಿ ವ್ಯಾಪ್ತಿಯಲ್ಲಿ 48 ವಾರ್ಡ್‌ಗಳು ಬರುತ್ತಿದ್ದು, ಧಾರವಾಡ ವ್ಯಾಪ್ತಿಯಲ್ಲಿ 21 ವಾರ್ಡ್‌ಗಳು ಬರುತ್ತಿವೆ. ವಾರ್ಡ್‌ಗಳ ಮರುವಿಂಗಡಣೆಯಿಂದ 82 ವಾರ್ಡ್‌ಗಳು ಅಸ್ತಿತ್ವಕ್ಕೆ ಬರುತ್ತಿದ್ದು, ಹೆಚ್ಚುವರಿ 15 ವಾರ್ಡ್‌ಗಳಲ್ಲಿ ಹುಬ್ಬಳ್ಳಿ ಹಾಗೂ ಧಾರವಾಡ ವ್ಯಾಪ್ತಿಗೆ ಎಷ್ಟು ವಾರ್ಡ್‌ಗಳ ಹಂಚಿಕೆ ಆಗಲಿವೆ ನೋಡಬೇಕಿದೆ.

ಅಧಿಕಾರಿಗಳ ಹೆಗಲಿಗೆ ಜವಾಬ್ದಾರಿ ಹೊರೆ : ವಾರ್ಡ್‌ ಮೀಸಲಾತಿ ಘೋಷಣೆ ಸಾಹಸ ಮತ್ತೂಂದು ರೂಪದ್ದಾಗಿದೆ. ವಾರ್ಡ್‌ ಮೀಸಲು ಘೋಷಣೆ ನಂತರ ಆಕ್ಷೇಪ ಸಾಧ್ಯತೆ ಇಲ್ಲದಿಲ್ಲ. ಈ ಹಿಂದೆ 82 ವಾರ್ಡ್‌ಗಳನ್ನು ರೂಪಿಸಿ ಮೀಸಲಾತಿ ಘೋಷಣೆ ಮಾಡಿದ ನಂತರವೇ ಆಕ್ಷೇಪ ವ್ಯಕ್ತವಾಗಿ ಪ್ರಕರಣ ಕೋರ್ಟ್‌ ಮೆಟ್ಟಿಲೇರಿತ್ತು. ಕೊನೆಗೆ ಸರಕಾರ ತಾನು ಹೊರಡಿಸಿದ ಅಧಿಸೂಚನೆ ಹಿಂಪಡೆಯಬೇಕಾಗಿತ್ತು. ಜತೆಗೆ ಮತದಾರರ ಪಟ್ಟಿ ತಯಾರು ಸಹ ಸುಲಭ ಸಾಧ್ಯವಲ್ಲ. ಮತದಾರರ ಹೆಸರು ಇರುವ ವಾರ್ಡ್‌ ಬಿಟ್ಟು ಇನ್ನೊಂದು ವಾರ್ಡ್‌ಗೆ ಸೇರ³ಡೆಯಂತಹ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುತ್ತದೆ. ಹೈಕೋರ್ಟ್‌ ಸೂಚನೆ ಹಿನ್ನೆಲೆಯಲ್ಲಿ ಸೂಚಿಸಿದ ಕಾಲಮಿತಿಯಲ್ಲಿ ವಾರ್ಡ್‌ಗಳ ಮರುವಿಂಗಡಣೆ, ಮೀಸಲು ನಿಗದಿ, ಮತದಾರರ ಪಟ್ಟಿ ಸಿದ್ಧತೆಯ ಅನಿವಾಯìತೆಗೆ ಸಿಲುಕಿರುವ ಅಧಿಕಾರಿಗಳು ಕಾಲಿಗೆ ಚಕ್ರಕಟ್ಟಿಕೊಂಡು ಸುತ್ತಬೇಕಾಗಿದೆ, ಪರಿಶ್ರಮ ವಹಿಸಬೇಕಾಗಿದೆ. ಅದು ಎಷ್ಟರ ಮಟ್ಟಿಗೆ ಸಾಧ್ಯವಾಗಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.