ಹುಬ್ಬಳ್ಳಿ: ಲಾರಿಗೆ ಎರಡು ಬೈಕ್ ಗಳು ಢಿಕ್ಕಿಯಾಗಿ ಮೂವರು ಯುವಕರ ದುರ್ಮರಣ
Team Udayavani, Aug 26, 2022, 1:57 PM IST
ಹುಬ್ಬಳ್ಳಿ: ನಗರದ ಹೊರವಲಯದ ತಾರಿಹಾಳ ಬಳಿಯ ಮೆಹಬೂಬ ಡಾಬಾದ ಹತ್ತಿರ ಗುರುವಾರ ರಾತ್ರಿ ನಿಂತಿದ್ದ ಲಾರಿಗೆ ಎರಡು ಬೈಕ್ ಗಳು ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಸೆಟ್ಲಮೆಂಟ್ ನಿವಾಸಿಗಳಾದ ಸುನಿಲ ಭಜಂತ್ತಿ (25), ಮಂಜುನಾಥ ಕ್ಯಾರಕಟ್ಟಿ (35), ವಿನೋದ ಕ್ಯಾರಕಟ್ಟಿ (30) ಮೃತಪಟ್ಟಿದ್ದು, ಪರಶುರಾಮ ನಿಟ್ಟೂರ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಗೌಂಡಿ ಕೆಲಸ ಮಾಡಿಕೊಂಡು ತಾರಿಹಾಳದಿಂದ ನಗರಕ್ಕೆ ಪ್ರತ್ಯೇಕವಾಗಿ ಎರಡು ಬೈಕ್ ಗಳಲ್ಲಿ ಬರುತ್ತಿದ್ದಾಗ ಈ ಅವಘಡ ನಡೆದಿದೆ. ಸ್ಥಳದಲ್ಲೇ ಸುನಿಲ ಮತ್ತು ಮಂಜುನಾಥ ಮೃತಪಟ್ಟರೆ, ಕಿಮ್ಸ್ ನಲ್ಲಿ ದಾಖಲಾಗಿದ್ದ ವಿನೋದನು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆಂದು ಪೊಲೀಸ್ ಮೂಲಗಳು ತಿಳಿಸಿವೆ. ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ