ಚೀನಾದಲ್ಲಿ ಮಿಂಚಿದ ಹುಬ್ಬಳ್ಳಿ ಯುವತಿ


Team Udayavani, Jul 14, 2018, 4:43 PM IST

14-july-18.jpg

ಹುಬ್ಬಳ್ಳಿ: ನಗರದ ಯುವತಿಯೊಬ್ಬರು ಚೀನಾದಲ್ಲಿ ನಡೆದ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು
ಭರತನಾಟ್ಯ ಪ್ರದರ್ಶಿಸಿ ಭೇಷ್‌ ಎನಿಸಿಕೊಂಡಿದ್ದಾರೆ. ಮೂರುಸಾವಿರ ಮಠದ ಮಹಿಳಾ ಕಾಲೇಜಿನ ಬಿಎ ಹಿಂದೂಸ್ಥಾನಿ ಸಂಗೀತ ಅಂತಿಮ ವರ್ಷದ ವಿದ್ಯಾರ್ಥಿನಿ ಸೌಜನ್ಯ ಕುಲಕರ್ಣಿ ಚೀನಾದಲ್ಲಿ ‘ಮಹಿಷಾಸುರ ಮರ್ದಿನಿ’ ಭರತನಾಟ್ಯ ಪ್ರದರ್ಶಿಸಿ ಹುಬ್ಬಳ್ಳಿಗೆ ಕೀರ್ತಿ ತಂದಿದ್ದಾರೆ. ಭಾರತದಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿ ಎಂಬ ಶ್ರೇಯಸ್ಸು ಇವರದು. 

ಚೀನಾದಲ್ಲಿ ಜು. 3ರಿಂದ 10ರ ವರೆಗೆ ನಡೆದ ಇಂಟರ್‌ನ್ಯಾಷನಲ್‌ ಯುಥ್‌ ಡೆಲಿಗೇಶನ್‌ ಪ್ರೋಗ್ರಾಮ್‌ನಲ್ಲಿ ಪಾಲ್ಗೊಂಡ ಸೌಜನ್ಯ ಅಲ್ಲಿನ ಬೀಜಿಂಗ್‌, ಕನ್ಮಿಂಗ್‌ ಹಾಗೂ ಗ್ಯಾಂಜ್‌ಜಾನ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಗ್ಯಾಂಗ್‌ಜಾನ್‌ನ ಸಮುದ್ರ ಮಧ್ಯೆ ಕ್ರೂಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೀನಾ ಕಲಾವಿದರು ಅಲ್ಲಿನ ಜಾನಪದ ಕಲೆ ಪ್ರದರ್ಶನ ಮಾಡಿದರೆ, ಸೌಜನ್ಯ ನಮ್ಮ ಪ್ರಾಚೀನ ಕಲೆ ಭರತನಾಟ್ಯ ಪ್ರದರ್ಶಿಸಿದರು.

ಭರತನಾಟ್ಯ ಪ್ರದರ್ಶನದ ನಂತರ ಕಲೆ ಹಾಗೂ ಥೀಮ್‌ ಕುರಿತು ಅನುವಾದಕರ ನೆರವಿನಿಂದ ವಿವರಿಸಿದರು. ಕಲಾ ಪ್ರದರ್ಶನದಿಂದಾಗಿ ಜೂಲಿ, ರೇನಾ ಸೇರಿದಂತೆ ಹಲವು ಚೀನಿ ಸ್ನೇಹಿತೆಯರನ್ನೂ ಸಂಪಾದಿಸಿದರು. ಸಂಗೀತವನ್ನೂ ಕಲಿಯುತ್ತಿರುವುದರಿಂದ ಸೌಜನ್ಯ ಅವರಿಗೆ 2 ನಿಮಿಷಗಳ ಕಾಲ ಗಾಯನಕ್ಕೆ ಅವಕಾಶ ಲಭಿಸತ್ತು. ಹಿಂದೂಸ್ಥಾನಿ ಸಂಗೀತವನ್ನು ಪ್ರಸ್ತುತಪಡಿಸಿ ಪ್ರೇಕ್ಷಕರ ಚಿತ್ತ ಸೆಳೆದರು.

ಸವಾಲಿನ ಮೆಟ್ಟಿಲು: ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮಕ್ಕೆ ಆಯ್ಕೆಯಾಗುವುದು ಸುಲಭವಾಗಿರಲಿಲ್ಲ. ಕಾಲೇಜು, ವಿಶ್ವವಿದ್ಯಾಲಯ, ದಕ್ಷಿಣ ವಲಯ, ರಾಜ್ಯ ಮಟ್ಟ ಹಾಗೂ ರಾಷ್ಟ್ರ ಮಟ್ಟದಲ್ಲಿ ಆಯ್ಕೆಯಾಗುವುದು ದೊಡ್ಡ ಸವಾಲಾಗಿತ್ತು. ಆದರೆ ಆತ್ಮಸ್ಥೈರ್ಯದಿಂದ ಸೌಜನ್ಯ ಅವಕಾಶ ಪಡೆದಿದ್ದರು. ಸೌಜನ್ಯ ಅವರ ತಾಯಿ ರೂಪಾ ಕುಲಕರ್ಣಿ ಅಂಗವಿಕಲರಾಗಿದ್ದು, ರೈಲ್ವೆ ಉದ್ಯೋಗಿಯಾಗಿದ್ದಾರೆ. ಪತಿ ತೀರಿ ಹೋಗಿದ್ದರಿಂದ ಅವರೇ ತಂದೆ ಹಾಗೂ ತಾಯಿಯಾಗಿ ಮಗಳನ್ನು ಬೆಳೆಸುತ್ತಿದ್ದಾರೆ. ಸಾಧನೆ ಮಾಡಲು ಮಗಳಿಗೆ ಸ್ಫೂರ್ತಿ ತುಂಬುತ್ತಿದ್ದಾರೆ.

ಬಹುಮುಖ ಪ್ರತಿಭೆ: ನೃತ್ಯಪಟು ಹಾಗೂ ಗಾಯಕಿಯಾಗಿರುವ ಸೌಜನ್ಯ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್‌) ಕಾರ್ಯಕರ್ತೆಯೂ ಹೌದು. ಜ. 26ರಂದು ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಪಾಲ್ಗೊಂಡ ಅವರು ಜ. 27 ಹಾಗೂ 28ರಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಎದುರು ಭರತನಾಟ್ಯ ಪ್ರದರ್ಶನ ನೀಡಿ ಶಭಾಷ್‌ ಎನಿಸಿಕೊಂಡಿದ್ದಾರೆ.

ಭರತನಾಟ್ಯ ಕಲಿಯಲು ಚೀನಿಯರ ಆಸಕ್ತಿ
ಚೀನಾದಲ್ಲಿ ಬಾಲಿವುಡ್‌ ಹಾಡುಗಳಿಗಿಂತ ಆಸಕ್ತಿಯಿಂದ ಶಾಸ್ತ್ರೀಯ ಸಂಗೀತ ಆಲಿಸುತ್ತಾರೆ. ಭರತನಾಟ್ಯಕ್ಕೆ ಈ ಮಟ್ಟಿಗೆ ಅಭಿಮಾನಿಗಳಿದ್ದಾರೆ ಎಂಬುದು ಗೊತ್ತಿರಲಿಲ್ಲ. ಪ್ರದರ್ಶನದ ನಂತರ ಅನೇಕರು ಬಂದು ಭರತನಾಟ್ಯದ ಬಗ್ಗೆ ಕೇಳಿ ತಿಳಿದುಕೊಂಡರು. ಕೆಲ ಯುವತಿಯರು ಕಲಿಯಲು ಆಸಕ್ತಿ ತೋರಿಸಿದರು. ಅನುವಾದಕರ ನೆರವಿನಿಂದ ಸಂವಾದ ಸಾಧ್ಯವಾಯಿತು ಎಂದು ಸೌಜನ್ಯ ಕುಲಕರ್ಣಿ ಹೇಳುತ್ತಾರೆ.

ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮಗಳು ಕೇವಲ ಕಲಾ ಪ್ರದರ್ಶನಕ್ಕೆ ಮಾತ್ರವಲ್ಲ, ದೇಶದ ಸಂಸ್ಕೃತಿ, ಸಂಪ್ರದಾಯ, ಆಹಾರ, ವಿಹಾರ, ವೈವಿಧ್ಯತೆ, ವಿಶೇಷತೆ ತಿಳಿದುಕೊಳ್ಳಲು ಪೂರಕವಾಗುತ್ತವೆ. ಕಾಲೇಜಿನ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಸಹಕಾರ ಹಾಗೂ ತಾಯಿಯ ಪ್ರೋತ್ಸಾಹವೇ ಇದಕ್ಕೆ ಕಾರಣ.
ಸೌಜನ್ಯ ಕುಲಕರ್ಣಿ

ವಿಶ್ವನಾಥ ಕೋಟಿ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.