5 ವರ್ಷ ನಾನೇ ಮುಖ್ಯಮಂತ್ರಿ: ಸಿದ್ದರಾಮಯ್ಯ
Team Udayavani, Feb 4, 2017, 3:50 AM IST
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಹಾಗೂ ಹೈಕಮಾಂಡ್ ತನ್ನನ್ನು ಮುಖ್ಯಮಂತ್ರಿ ಮಾಡಿದೆ. ಯಾವುದೇ ಅನುಮಾನ ಬೇಡ. 5 ವರ್ಷ ಪೂರ್ಣಗೊಳ್ಳುವವರೆಗೆ ತಾನೇ ಮುಖ್ಯಮಂತ್ರಿ ಆಗಿರುತ್ತೇನೆ. ಮುಂದಿನ ಅವಧಿಗೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಕುರಿತ ಕೆಲವರ ಒತ್ತಾಯಕ್ಕೆ ಪ್ರತಿಕ್ರಿಯಿಸಿ, ಹೈಕಮಾಂಡ್ ಮಾರ್ಗದರ್ಶನದಲ್ಲಿ ಪಕ್ಷದ ಶಾಸಕಾಂಗ ಸಭೆ ತನ್ನನ್ನು ಮುಖ್ಯಮಂತ್ರಿ ಮಾಡಿದೆ. ಆಡಳಿತಾವಧಿ ಮುಗಿಯುವವರೆಗೂ ತಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಪಕ್ಷದ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರ ಹೇಳಿಕೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಅಭ್ಯರ್ಥಿ ಅಂತಿಮವಾಗಿಲ್ಲ:
ನಂಜನಗೂಡು ಉಪ ಚುನಾವಣೆಗಾಗಿ ಪಕ್ಷದಿಂದ ಅಭ್ಯರ್ಥಿ ಯಾರೆಂಬುದು ಇನ್ನು ಅಂತಿಮವಾಗಿಲ್ಲ. ಜೆಡಿಎಸ್ನ ಕಳಲೆ ಕೃಷ್ಣಮೂರ್ತಿ ತನ್ನನ್ನು ಭೇಟಿಯಾಗಿದ್ದಾರೆ. ಆದರೆ, ಪಕ್ಷಕ್ಕೆ ಸೇರ್ಪಡೆಗೊಂಡಿಲ್ಲ. ಹೈಕಮಾಂಡ್ ಜತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಎಸ್.ಎಂ. ಕೃಷ್ಣ ಯಾವುದೇ ಬೇಡಿಕೆ ಇಟ್ಟಿಲ್ಲ. ಸರಕಾರದ ಮಟ್ಟದಲ್ಲೂ ಈ ಕುರಿತು ಯಾವುದೇ ಪ್ರಸ್ತಾಪವಾಗಿಲ್ಲ. ಜೆಡಿಎಸ್ನ ಕೆಲ ಶಾಸಕರು ತನ್ನನ್ನು ಭೇಟಿ ಮಾಡಿದ್ದಾರೆ. ಆದರೆ ಈ ಕುರಿತು ಪಕ್ಷದಲ್ಲಿ ಚರ್ಚೆ ಆಗಿಲ್ಲ. ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಲಾಗುವುದು. ಅವರು ಮತ್ತೆ ಪಕ್ಷಕ್ಕೆ ಬಂದರೆ ಸ್ವಾಗತ ಎಂದರು. ಹುಬ್ಬಳ್ಳಿ-ಧಾರವಾಡದಲ್ಲಿ ಕ್ರೀಡಾ ಗ್ರಾಮ ನಿರ್ಮಿಸುವ ಕುರಿತು ಪರಿಶೀಲಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್