“ಹೂ ಈಸ್ ಈಶ್ವರಪ್ಪ, ಐ ಡೋಂಟ್ ಕೇರ್ ಈಶ್ವರಪ್ಪ”: ತಿರುಗೇಟು ನೀಡಿದ ಸಿದ್ದರಾಮಯ್ಯ
ಕುರುಬ ಸಮಾಜವನ್ನು ಒಡೆಯುವುದೇ ರಾಲಿಯ ಉದ್ದೇಶ
Team Udayavani, Feb 11, 2021, 11:56 AM IST
ಹುಬ್ಬಳ್ಳಿ: ಕುರುಬರ ಎಸ್.ಟಿ. ಹೋರಾಟ ಆರ್.ಎಸ್.ಎಸ್ ಪ್ರೇರಿತವಾಗಿದ್ದು, ಈಶ್ವರಪ್ಪ ಅವರನ್ನು ಇಟ್ಟುಕೊಂಡು ಈ ಹೋರಾಟ ಮಾಡಿಸುತ್ತಿದೆ. ಈಶ್ವರಪ್ಪ ಅವರಿಂದ ನಾನು ಸರ್ಟಿಫಿಕೇಟ್ ಬೇಕಾಗಿಲ್ಲ. ನಾನು ಏನು ಅಭಿವೃದ್ಧಿ ಮಾಡಿದ್ದೇನೆ ಅಂತ ರಾಜ್ಯದ ಜನತೆಗೆ ಗೊತ್ತಿದೆ. ಹೂ ಈಸ್ ಈಶ್ವರಪ್ಪ, ಐ ಡೋಂಟ್ ಕೇರ್ ಈಶ್ವರಪ್ಪ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಸಾಧನೆ ಬಗ್ಗೆ ಅವರಿಗೆ ವರದಿ ಕೊಡುವ ಅಗತ್ಯವಿಲ್ಲ. ಕುರುಬರಿಗೆ ಎಸ್ ಟಿ ಮೀಸಲು ನೀಡುವ ವಿಚಾರದಲ್ಲಿ, ಕುಲಶಾಸ್ತ ಅಧ್ಯಯನದ ವರದಿ ಬಂದಿಲ್ಲ, ವರದಿ ಬರುವ ಮುನ್ನವೇ ಹೋರಾಟ ಬೇಡ ಅಂದಿದ್ದೆ. ನಾನು ಸಿಎಂ ಆಗಿದ್ದ ವೇಳೆ ನಾಲ್ಕು ಜಿಲ್ಲೆಗಳಲ್ಲಿ ಕುರುಬರನ್ನು ಎಸ್ ಟಿಗೆ ಸೇರಿಸಬೇಕು ಅಂತಾ ಆದೇಶ ಮಾಡಿದ್ದೆ, ಎಸ್ ಟಿ ಮೀಸಲು ಹೋರಾಟದಲ್ಲಿ ನಾನು ಎಂದಿಗೂ ರಾಜಕೀಯ ಮಾಡಲ್ಲ, ಇದು ಆರ್ ಎಸ್ ಎಸ್ ಪ್ರೇರಿತ ಹೋರಾಟವಾಗಿದೆ. ಕುರುಬ ಸಮಾಜವನ್ನು ಒಡೆಯುವುದೇ ಇದರ ಉದ್ದೇಶ ಎಂದರು.
ಇದನ್ನೂ ಓದಿ:ಪ್ಯಾಂಗಾಂಗ್ ತಟದಿಂದ ಉಭಯ ಸೇನೆ ವಾಪಸ್; ಚೀನಾ ರಕ್ಷಣಾ ಇಲಾಖೆಯಿಂದ ಮಾಹಿತಿ
ಜೆಡಿಎಸ್ ಗೆ ಉತ್ತರ ಕರ್ನಾಟಕದಲ್ಲಿ ನೆಲೆ ಇಲ್ಲ. ಹೀಗಾಗಿ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ. ನೇರವಾಗಿ ಬಿಜೆಪಿಗೆ ಬೆಂಬಲ ನೀಡುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಕೊರೆತೆಯಿಲ್ಲ. ಚುನಾವಣೆ ಘೋಷಣೆಯಾದ ಕೂಡಲೇ ಅಭ್ಯರ್ಥಿ ಘೋಷಣೆ ಮಾಡುತ್ತೇವೆ. ಈ ಸಮಯದಲ್ಲಿ ಹಿಂದ್ ಸಮಾವೇಶ ಮಾಡಲ್ಲ, ಕಾಂಗ್ರೆಸ್ ಹಿಂದುಳಿದವರ ಪರವಾಗಿದೆ, ಹೋರಾಟದ ಅವಶ್ಯಕತೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!