ಪಠ್ಯಪುಸ್ತಕ ಗೊಂದಲ ನನಗೆ ಗೊತ್ತಿಲ್ಲ: ಬಸವರಾಜ ಹೊರಟ್ಟಿ
Team Udayavani, Jun 5, 2022, 9:40 PM IST
ಹುಬ್ಬಳ್ಳಿ: ಪಠ್ಯಪುಸ್ತಕಗಳ ಗೊಂದಲ ಕುರಿತು ವಿಷಯ ತಿಳಿದಿದ್ದೇನೆ. ವಾಸ್ತವ ಏನಿದೆ ಎಂಬುದರ ಬಗ್ಗೆ ಆಳವಾದ ಮಾಹಿತಿ ನನಗಿಲ್ಲ. ಏನೇ ಗೊಂದಲ, ತಪ್ಪುಗಳಿದ್ದರೆ ಅವುಗಳನ್ನು ಸರಿಪಡಿಸುವುದು ಸರ್ಕಾರದ ಕಾರ್ಯ. ಅಧಿಕಾರ ಇದ್ದರೆ ಸಾಲದು ಬದ್ಧತೆ ಇರಬೇಕೆಂದು ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಸಚಿವ ನಾಗೇಶ ಅಸಮರ್ಥರು ಎಂದು ಹೇಳಲ್ಲ. ಅಧಿಕಾರಿಗಳು ಸರಿಯಾದ ಸಹಕಾರ ಕೊಡಲ್ಲ. ಯಾವುದೇ ಸರ್ಕಾರವಿರಲಿ ಸಕಾಲಕ್ಕೆ ಪಠ್ಯಪುಸ್ತಕಗಳ ವಿಚಾರದಲ್ಲಿ ರಾಜಕೀಯ, ಸಿದ್ಧಾಂತಗಳು ಸರಿಯಲ್ಲ. ಪಠ್ಯಪುಸ್ತಕಗಳಲ್ಲಿ ತಪ್ಪುಗಳಿದ್ದರೆ ಸಮಿತಿ ರಚಿಸಿ ಪರಿಷ್ಕರಣೆ ಮಾಡುವ ಕೆಲಸ ಆಗಬೇಕು ಎಂದರು.
ಹಿಂದೆ ಏನು ಕಲಿತುಕೊಂಡು ಬಂದಿದ್ದೇವೆಯೋ ಅದೇ ಬಸವಣ್ಣನವರ ನಿಜವಾದ ಇತಿಹಾಸ. ಈಗ ಬರೆದಿರುವುದೆಲ್ಲಾ ಸುಳ್ಳು. ಪಠ್ಯಪುಸ್ತಕದ ಗೊಂದಲ ಕುರಿತು ಮಾಹಿತಿ, ಒಂದಿಷ್ಟು ಅಧ್ಯಯನ ಮಾಡಿ ಸರ್ಕಾರಕ್ಕೆ ಸಲಹೆ ಕೊಡುತ್ತೇನೆ. ಯಾವುದೇ ತಪ್ಪುಗಳನ್ನು ನೇರವಾಗಿ ಹೇಳುವ ವ್ಯಕ್ತಿತ್ವ ನನ್ನದು. ಇದನ್ನು ಯಾರೂ ವೈಯಕ್ತಿಕವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ. ಹಿಂದೆ ನಾನು ಹೊಸ ಶಿಕ್ಷಣ ನೀತಿಯನ್ನು ಸಂಪೂರ್ಣ ವಿರೋಧಿಸಿರಲಿಲ್ಲ. ಅದರಲ್ಲಿರುವ ಕೆಲ ತಪ್ಪುಗಳನ್ನು ಸರಿಪಡಿಸಿ, ಶಾಲೆ, ಕಾಲೇಜುಗಳ ಹಂತಗಳಲ್ಲಿ ಚರ್ಚೆ ಮಾಡಿ ಅನುಷ್ಠಾನಕ್ಕೆ ತರಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ