ರಾಜ್ಯಸಭೆ ಚುನಾವಣೆ ವಿಚಾರವಾಗಿ ಕಾಂಗ್ರೆಸ್ ಪಕ್ಷದೊಂದಿಗೆ ನಾನು ಮಾತನಾಡಿಲ್ಲ: ಕುಮಾರಸ್ವಾಮಿ
Team Udayavani, Jun 4, 2022, 3:48 PM IST
ಹುಬ್ಬಳ್ಳಿ: ರಾಜ್ಯಸಭೆ ಚುನಾವಣೆಗೆ ನಾಲ್ಕನೇ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಯಾವ ನಾಯಕರೊಂದಿಗೂ ನಾನು ಮಾತನಾಡಿಲ್ಲ. ಇದೆಲ್ಲ ವದಂತಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ನಗರದಲ್ಲಿ ಸುದ್ದಿಗಾರೊಂದಿಗೆ ಶನಿವಾರ ಮಾತನಾಡಿದ ಅವರು, ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಗುನ್ನಾ, ತಳಮಳ ಎಂಬ ಚರ್ಚೆಗಳಾಗುತ್ತಿವೆ. ಆದರೆ ಯಾವುದೇ ರೀತಿಯ ತಳಮಳ, ನಡುಕ ಪಕ್ಷಕ್ಕಿಲ್ಲ. ಅದಕ್ಕಾಗಿಯೇ ನಾನು ರಾಜ್ಯಸಭಾ ಚುನಾವಣೆ ಜಂಜಾಟದಿಂದ ದೂರ ಉಳಿದಿದ್ದೆ. ಆದರೆ ಕಾಂಗ್ರೆಸ್ ನಾಯಕರು ಜೆಡಿಎಸ್ ಪಕ್ಷವನ್ನು ಅವಮಾನ ಮಾಡಲು ಹಲವಾರು ಹೇಳಿಕೆ ಕೊಡುತ್ತಿದ್ದಾರೆ. ಪಕ್ಷವನ್ನು ನಿರ್ನಾಮ ಮಾಡುವ ಕೆಲಸ ಮಾಡಲಾಗುತ್ತಿದೆ. ಆದರೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರರಂತಹ ನೂರಾರು ಜನರು ಬಂದರು ಅದು ಸಾಧ್ಯವಿಲ್ಲ ಎಂದರು.
ರಾಜಕಾರಣದಲ್ಲಿ ಆಶಾವಾದ ಇರಬೇಕು. ಹಾಗಾಗಿ ನಮ್ಮ ಪಕ್ಷದಿಂದ ರಾಜ್ಯಸಭೆಗೆ ಅಭ್ಯರ್ಥಿಗಳನ್ನು ನಿಲ್ಲಿಸಿದ್ದೇವೆ. ನಮ್ಮಲ್ಲಿ 32 ಮತಗಳಿವೆ. 3-4 ಜನರಲ್ಲಿ ಅಸಮಾಧಾನ ಇರುವುದು ನಿಜ, ಅವರನ್ನು ವಿಶ್ವಾಸಕ್ಕೆ ಪಡೆಯುವ ಕೆಲಸ ನಡೆಯುತ್ತಿದೆ. ಎಲ್ಲರ ಮತಗಳು ಪಕ್ಷದ ಅಭ್ಯರ್ಥಿಗಳ ಪರ ಬೀಳಲಿವೆ. ಈ ಬಾರಿ ಅಡ್ಡ ಮತಗಳು ಬರುವುದು ಸಾಧ್ಯವಿಲ್ಲ ಎಂದರು.
ಇದುವರೆಗೆ ಜೆಡಿಎಸ್ ಪಕ್ಷವನ್ನು ಬಿಜೆಪಿಯ ಬಿ ಟೀಮ್ ಎಂದು ಆರೋಪಿಸಲಾಗುತ್ತಿತ್ತು. ಆದರೆ ಬರುವ ಜು. 10ರ ರಾಜ್ಯಸಭೆಯ ಫಲಿತಾಂಶದ ನಂತರ ಯಾರು ಬಿಜೆಪಿಯ ಬಿ ಟೀಮ್ ಹಾಗೂ ನಾಯಕ ಯಾರೆಂದು ಗೊತ್ತಾಗುತ್ತದೆ ಎಂದರು.
ಇದನ್ನೂ ಓದಿ:ರೋಹಿತ್ ಚಕ್ರತೀರ್ಥ ಮತ್ತು ಬರಗೂರು ರಾಮಚಂದ್ರಪ್ಪರ ತುಲಾಭಾರ ಮಾಡಿ: ಪ್ರಿಯಾಂಕ್ ಖರ್ಗೆ
ರಾಜ್ಯಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಬಹುದು ಎಂದು ತಿಳಿದು ಕೊಂಡಿದ್ದಾರೆ. ಆದರೆ ಅವರೇ ತಮ್ಮ ಕಲ್ಲನ್ನು ತಾವೇ ಹೊಡೆದುಕೊಳ್ಳುತ್ತಾರೆ ನೋಡಿ ಎಂದರು.
ನನಗೆ ರಾಜ್ಯಸಭೆ ಚುನಾವಣೆ ಮುಖ್ಯವಲ್ಲ. ಮುಂಬರುವ 2023ರ ಚುನಾವಣೆಯಲ್ಲಿ 123 ಸ್ಥಾನಗಳ ಗುರಿ ಹೊಂದಿದ್ದು, ಆ ನಿಟ್ಟಿನಲ್ಲಿ ರಾಜ್ಯಾದ್ಯಂತ ಮುಂದಿನ 8-10 ತಿಂಗಳು ಸಂಚರಿಸಿ ಪಕ್ಷ ಸಂಘಟಿಸುವೆ. ಪಕ್ಷವು ಅಧಿಕಾರಕ್ಕೆ ಬರುವುದು ನಿಶ್ಚಿತವೆಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ