ನನಗೂ ಶಾಲೆ..


Team Udayavani, Sep 16, 2019, 10:25 AM IST

HUBALII-TDY-1

ಹುಬ್ಬಳ್ಳಿ: ಸಮಾಜದ ಎಲ್ಲರೂ ಮುಖ್ಯವಾಹಿನಿಗೆ ಬರಬೇಕೆಂಬ ಉದ್ದೇಶಕ್ಕಾಗಿ ಸರಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಪೂರಕವೆಂಬಂತೆ ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣ ಇಲಾಖೆ ಉತ್ತಮ ಕೆಲಸ ನಿರ್ವಹಿಸುತ್ತಿದೆ.

ಶಹರ ವ್ಯಾಪ್ತಿಯ ಸುಮಾರು 730 ಅಂಗವಿಕಲ ವಿದ್ಯಾರ್ಥಿಗಳಲ್ಲಿ 90 ಮಕ್ಕಳಿಗೆ ಹಳೇಹುಬ್ಬಳ್ಳಿ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ.1ರ ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ ಕೇಂದ್ರದಲ್ಲಿ ತರಬೇತಿ ನೀಡಲಾಗುತ್ತಿದೆ. ಪ್ರತಿದಿನ 10 ಮಕ್ಕಳಿಗೆ ಶಾಲೆಗೆ ಕರೆಯಿಸಿ ವಿಶೇಷ ತರಬೇತಿ ನೀಡಲಾಗುತ್ತಿದೆ.

ಕಳೆದ ಮೂರು ವರ್ಷಗಳಿಂದ ಶಹರ ವ್ಯಾಪ್ತಿಯಲ್ಲಿ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. 2017-18ರಲ್ಲಿ 45, 2018-19ರಲ್ಲಿ 63 ಹಾಗೂ 2019-20ರಲ್ಲಿ 90 ಮಕ್ಕಳಿಗೆ ತರಬೇತಿ ನೀಡಲಾಗುತ್ತಿದೆ. ಶಹರದಲ್ಲಿರುವ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಅಧ್ಯಯನ ಮಾಡುವ ಮಕ್ಕಳಿಗೆ ಈ ತರಬೇತಿ ನೀಡಲಾಗುತ್ತಿದೆ. ಕಳೆದ ಎರಡು ವರ್ಷಗಳಲ್ಲಿ 21 ಮಕ್ಕಳಿಗೆ ವಿಶೇಷ ತರಬೇತಿ ನೀಡಿ ಮುಖ್ಯವಾಹಿನಿಗೆ ತರಲಾಗಿದೆ.

 

ವಿಪ್ರೋಕೇರ್‌ ಸಹಯೋಗ: ವಿಪ್ರೋಕೇರ್‌ ಸಂಸ್ಥೆಯಡಿ ಫೋರ್ಥ್ ವೇವ್ಸ್‌ ಫೌಂಡೇಶನ್‌ ಆರಂಭಿಸಿದ್ದು, ಅದರ ಮೂಲಕ “ನನಗೂ ಶಾಲೆ’ ಎಂಬ ಶೀರ್ಷಿಕೆಯಡಿ ನಾಲ್ವರು ಸ್ವಯಂ ಸೇವಕರು ಕೇಂದ್ರದಲ್ಲಿ ಕೆಲಸ ನಿರ್ವಹಿಸುತ್ತಾರೆ. ಪ್ರತಿದಿನ ಬೆಳಗ್ಗೆ 10ರಿಂದ ಸಂಜೆ 4 ಗಂಟೆವರೆಗೆ ಕೇಂದ್ರದಲ್ಲಿದ್ದು, ಮಕ್ಕಳಿಗೆ ಆಟೋಟದೊಂದಿಗೆ ತರಬೇತಿ ನೀಡುತ್ತಾರೆ. ಇವರೊಂದಿಗೆ ನಾಲ್ವರು ಸರಕಾರಿ ಶಿಕ್ಷಕರು ಬ್ಲಾಕ್‌ ಇನಕ್ಲುಸಿವ್‌ ಎಜುಕೇಶನ್‌ ರಿಸೋರ್ಸ್‌ ಸೆಂಟರ್‌(ಬಿಐಇಆರ್‌ಸಿ) ಮಕ್ಕಳಿಗೆ ತರಬೇತಿ ನೀಡುತ್ತಾರೆ. ಜೊತೆಗೆ ಶಹರದ 120 ಶಾಲೆಗಳನ್ನು ಈ ನಾಲ್ವರು ಶಿಕ್ಷಕರು ಹಂಚಿಕೊಂಡು ಆಯಾ ಶಾಲೆಗಳಿಗೆ ತೆರಳಿ ಅಂಗವಿಕಲ ಮಕ್ಕಳಿಗೆ ವಿಶೇಷ ತರಬೇತಿ ನೀಡಿ ಬರುತ್ತಾರೆ.

ಗೃಹಾಧಾರಿತ ಶಿಕ್ಷಣ: ಏಳಲು ಆಗದ ಸ್ಥಿತಿಯಲ್ಲಿರುವ ಮಕ್ಕಳಿಗೆ ಮನೆಗಳಿಗೆ ತೆರಳಿ ಗೃಹಾಧಾರಿತ ಶಿಕ್ಷಣ ತರಬೇತಿ ನೀಡಲಾಗುತ್ತದೆ. ಮಗುವಿಗೆ ಫಿಜಿಯೋಥೆರಪಿ, ವ್ಯಾಯಾಮ, ನಡೆದಾಟ, ಅವರ ಭಾವನೆಗಳಿಗೆ ತಕ್ಕ ಕೆಲಸಗಳನ್ನು ಮಾಡಿಸುವುದು ಸೇರಿದಂತೆ ಇನ್ನಿತರ ಕೆಲಸ ಮಾಡಿಸಿ ತರಬೇತಿ ನೀಡಲಾಗುತ್ತದೆ. ಖಾತೆಗೆ ಹಣ ಸಂದಾಯ: ಬಹು ವಿಧದಅಂಗವಿಕಲತೆಯಿಂದ ಬಳಲುತ್ತಿರುವ

ಮಕ್ಕಳಿಗೆ ಕೇಂದ್ರಕ್ಕೆ ಆಗಮಿಸಿ ತರಬೇತಿ ಕೊಡಿಸಲು ಮಗುವಿನ ಪಾಲಕರಿಗೆ ಸಾರಿಗೆ ಹಾಗೂ ರಕ್ಷಣೆ ಹಣವನ್ನು ಪ್ರತಿ ತಿಂಗಳು ಅವರ ಖಾತೆಗೆ ಜಮೆ ಮಾಡಲಾಗುತ್ತದೆ. ಇದರಿಂದ ಪಾಲಕರು ಸಹ ಮಕ್ಕಳ ತರಬೇತಿ ಸಮಯದಲ್ಲಿ ಅವರೊಂದಿಗೆ ಇದ್ದು, ತರಬೇತಿ ಪಡೆಯುವುದನ್ನು ನೋಡಬಹುದಾಗಿದೆ.

 

  • ಅಂಗವಿಕಲ ಮಕ್ಕಳಿಗೆ ವಿಶೇಷ ತರಬೇತಿ
  • ಕ್ಷೇತ್ರ ಶಿಕ್ಷಣ ಇಲಾಖೆಯ ಮಾದರಿ ಕಾರ್ಯ
  • ಮುಖ್ಯವಾಹಿನಿಗೆ ಕೆರೆತರುವ ಪ್ರಯತ್ನ
  • ಗೃಹಾಧಾರಿತ ಶಿಕ್ಷಣಕ್ಕೂ ಇಲ್ಲಿದೆ ಆದ್ಯತೆ
  • ಫೋರ್ಥ್ವೇವ್ಸ್‌ ಫೌಂಡೇಶನ್‌ ಹಾಥ್‌
  • ಸ್ವಯಂಸೇವಕರಿಗೆ ಸರ್ಕಾರಿ ಶಿಕ್ಷಕರ ಸಾಥ್‌
  • 90 ಮಕ್ಕಳಿಗೆ ಚೈತನ್ಯ ತುಂಬುವ ಕಾಯಕ

ಜನ್ಮತಾಳುವ ಮಕ್ಕಳು ಅಂಗವಿಕಲತೆ ಹೊಂದಿದ್ದರೆ ಪಾಲಕರು ಏನು ಮಾಡುವುದು ಎನ್ನುವ ಚಿಂತೆಯಲ್ಲಿ ತೊಡಗುತ್ತಾರೆ. ಆದರೆ ಸರಕಾರದ ನೆರವಿನಿಂದ ಬಡ ಅಂಗವಿಕಲ ಮಕ್ಕಳನ್ನು ಮುಖ್ಯವಾಹಿನಿಗೆ ತರಲೆಂದು ಸಮನ್ವಯ ಶಿಕ್ಷಣ ಸಂಪನ್ಮೂಲ ಕೇಂದ್ರ ತೆರೆಯಲಾಗಿದೆ. ಸದ್ಯ ಇಲ್ಲಿ ಸುಮಾರು 90 ವಿದ್ಯಾರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ. ಇದರಿಂದ ಬಡವರಿಗೆ ತುಂಬಾ ಅನುಕೂಲವಾಗಿದೆ. -ಶ್ರೀಶೈಲ ಕರಿಕಟ್ಟಿ, ಶಹರ ಕ್ಷೇತ್ರ ಶಿಕ್ಷಣಾಧಿಕಾರಿ

ವಿಪ್ರೋಕೇರ್‌ ಸಹಯೋಗದಲ್ಲಿ ಫೋರ್ಥ್ ವೇವ್ಸ್‌ ಫೌಂಡೇಶನ್‌ ರಚಿಸಿದ್ದು, ಇಂತಹ ಕೇಂದ್ರಗಳಲ್ಲಿ ಫೌಂಡೇಶನ್‌ನ ಸ್ವಯಂ ಸೇವಕರನ್ನು ಬಿಟ್ಟು ಸೇವೆ ಮಾಡಿಸಲಾಗುತ್ತದೆ. ಬುದ್ಧಿಮಾಂದ್ಯ ಮಕ್ಕಳು ಸೇರಿದಂತೆ ಬಹುವಿಧದ ಅಂಗವಿಕಲ ಮಕ್ಕಳಿಗೆ ಹೊರಗಿನ ಜಗತ್ತು ಏನುಎನ್ನುವುದನ್ನು ಇಲ್ಲಿ ತೋರಿಸಲಾಗುತ್ತದೆ. ಇದರಿಂದ ಮಕ್ಕಳಲ್ಲಿ ಹೊಸ ಚೈತನ್ಯ ಮೂಡುತ್ತಿದೆ. ಹಲವಾರು ವಿದ್ಯಾರ್ಥಿಗಳು ತರಬೇತಿ ನಂತರ ತಮ್ಮ ಕೆಲಸ ತಾವೇ ಮಾಡಿಕೊಳ್ಳುತ್ತಿರುವುದು ನೋಡಿದರೆ ನಮ್ಮ ಕೆಲಸ ಸಂತಸ ಮೂಡಿಸುತ್ತದೆ. .ರುಕ್ಸಾನ್‌ ನದಾಫ್‌-ಭಾರತಿ ಜಾಲಿಬಡ್ಡಿ, ಸ್ವಯಂ ಸೇವಕರು

 

.ಬಸವರಾಜ ಹೂಗಾರ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.