ರಾಜಕಾಲುವೆ ಒತ್ತುವರಿಯಾಗಿದ್ದರೆ ಮುಲಾಜಿಲ್ಲದೆ ತೆರವು; ಸಚಿವ ಹಾಲಪ್ಪ

ಸ್ಮಾರ್ಟ್‌ಸಿಟಿ ಯೋಜನೆಯಲ್ಲೂ ತಪ್ಪು ನಿರ್ಧಾರ ಕೈಗೊಂಡಿದ್ದರಿಂದ ಈ ಭಾಗದ ಜನರು ತೊಂದರೆ ಅನುಭವಿಸುವಂತಾಗಿದೆ

Team Udayavani, Oct 12, 2022, 5:50 PM IST

ರಾಜಕಾಲುವೆ ಒತ್ತುವರಿಯಾಗಿದ್ದರೆ ಮುಲಾಜಿಲ್ಲದೆ ತೆರವು; ಸಚಿವ ಹಾಲಪ್ಪ

ಹುಬ್ಬಳ್ಳಿ: ರಾಜಕಾಲುವೆ ಒತ್ತುವರಿ ಆಗಿದ್ದರೆ ಮುಲಾಜಿಲ್ಲದೆ ತೆರವು ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಹೇಳಿದರು. ಸೋಮವಾರ ರಾತ್ರಿ ನಗರದಲ್ಲಿ ಸುರಿದ ಭಾರಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಬಾಧಿತವಾದ ಹಳೇಹುಬ್ಬಳ್ಳಿ ಪ್ರದೇಶಗಳಿಗೆ ಮಂಗಳವಾರ ಭೇಟಿಕೊಟ್ಟು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರಾಜಕಾಲುವೆ ಒತ್ತುವರಿಯಾದ ಬಗ್ಗೆ ಸರ್ವೇ ಮಾಡಿಸಿ ವರದಿ ಪಡೆಯಲಾಗುವುದು. ಒತ್ತುವರಿ ಕಂಡುಬಂದರೆ ತೆರವು ಮಾಡಲಾಗುವುದು. ರಾಜ ಕಾಲುವೆ ಹೂಳು ಮತ್ತು ಇತರೆ ವಿಷಯಗಳ ಕುರಿತು ಇನ್ನೆರಡು ದಿನಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ ನಡೆಸಿ ಸಂಪೂರ್ಣ ವಿವರ ಪಡೆಯಲಾಗುವುದು. ಮನೆಗೆ ನೀರು ನುಗ್ಗಿ ಹಾನಿಗೊಳಗಾದವರಿಗೆ ಎನ್‌ ಡಿಆರ್‌ಎಫ್‌ ಮತ್ತು ರಾಜ್ಯ ಸರಕಾರದ ನಿಯಮಾನುಸಾರ ಪರಿಹಾರ ನೀಡಲು ಆದ್ಯತೆ ನೀಡಲಾಗುವುದು ಎಂದರು.

ನಗರದಲ್ಲಿ ರಾಜಕಾಲುವೆ ಸುತ್ತ ತಡೆಗೋಡೆ ಹಾಗೂ ದುರಸ್ತಿ ಕಾಮಗಾರಿಯನ್ನು ವಿಶ್ವ ಬ್ಯಾಂಕ್‌ನ 120 ಕೋಟಿ ರೂ. ನೆರವಿನೊಂದಿಗೆ ಉಣಕಲ್ಲ ಕೆರೆಯಿಂದ ಮಾಡಲಾಗುತ್ತಿದೆ. ಅದು ಹಳೇಹುಬ್ಬಳ್ಳಿ ಭಾಗದ ಕೆಲ ಪ್ರದೇಶದಲ್ಲೂ ಆಗುತ್ತದೆ. ಇನ್ನುಳಿದ ಪ್ರದೇಶಗಳಲ್ಲೂ ಕಾಮಗಾರಿ ಕೈಗೊಳ್ಳಲು ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.

ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಮಳೆಯಿಂದ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದೆ. ಸೋಮವಾರ ರಾತ್ರಿಯಿಂದಲೇ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ಕೊಡಲಾಗಿದೆ. ರಾಜಕಾಲುವೆಯ ತಡೆಗೋಡೆ ಇನ್ನಷ್ಟು ಏರಿಸಬೇಕಾಗಿದೆ. ನಾಲಾದ ಹೂಳು ತೆಗೆಯುವಂತೆ ಎರಡು ಬಾರಿ ಪಾಲಿಕೆ ಅಧಿಕಾರಿಗಳ ಜೊತೆ ಆಯುಕ್ತರ ಸಮ್ಮುಖದಲ್ಲೆ ಸಭೆ ಮಾಡಿದರೂ ಪ್ರಯೋಜನವಾಗಿಲ್ಲ. ಮುಖ್ಯಮಂತ್ರಿ ಮತ್ತು ಸಂಸದರ ಗಮನಕ್ಕೆ ತಂದರೂ ಫಲವಾಗಿಲ್ಲ. ಸದನದಲ್ಲೂ ಪ್ರಸ್ತಾಪ ಮಾಡಿದ್ದೆ. ಆದರೂ ಪರಿಹಾರ ದೊರೆತಿಲ್ಲ. ಸ್ಮಾರ್ಟ್‌ಸಿಟಿ ಯೋಜನೆಯಲ್ಲೂ ತಪ್ಪು ನಿರ್ಧಾರ ಕೈಗೊಂಡಿದ್ದರಿಂದ ಈ ಭಾಗದ ಜನರು ತೊಂದರೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದರು.

ಇದಕ್ಕೂ ಮೊದಲು ಸಚಿವರು ಮತ್ತು ಶಾಸಕರು ಮಳೆಯಿಂದ ಬಾಧಿತವಾದ ಪ್ರದೇಶಗಳಾದ ಹಳೇಹುಬ್ಬಳ್ಳಿ ನಾರಾಯಣ ಸೋಪಾ, ಬ್ಯಾಹಟ್ಟಿ ಪ್ಲಾಟ್‌, ಗೌಸಿಯಾ ಟೌನ್‌, ಸದರ ಸೋಪಾ ಸೇರಿದಂತೆ ಇತರೆ ಪ್ರದೇಶಗಳಿಗೆ ಭೇಟಿಕೊಟ್ಟು ಜನರ ಸಮಸ್ಯೆ ಆಲಿಸಿದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಗ್ರಾಮೀಣ ತಹಶೀಲ್ದಾರ್‌ ಪ್ರಕಾಶ ನಾಶಿ, ಪಾಲಿಕೆ ಸದಸ್ಯರಾದ ರಾಧಾಬಾಯಿ ಸಫಾರೆ, ನಜೀರಅಹ್ಮದ ಹೊನ್ಯಾಳ, ಮಾಜಿ ಸದಸ್ಯ ಬಸೀರ್‌ ಅಹ್ಮದ ಗೂಡಮಾಲ, ವಲಯಾಧಿಕಾರಿ ಕಾಂಬಳೆ, ಬಿಜೆಪಿಯ ಚಂದ್ರಶೇಖರ ಗೋಕಾಕ, ಬಸವರಾಜ ಅಮ್ಮಿನಭಾವಿ, ಮಹಾಂತೇಶ ಗಿರಿಮಠ ಇನ್ನಿತರರಿದ್ದರು.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.