ಮೋಜಿನ ಮೂಡಲ್ಲಿ ಅಪಾಯ ಮರೆತ ಜನತೆ 


Team Udayavani, Jul 21, 2018, 5:49 PM IST

21-july-23.jpg

ಕೊಪ್ಪಳ: ಕಳೆದ ನಾಲ್ಕಾರು ವರ್ಷಗಳ ಬಳಿಕ ತುಂಗಭದ್ರೆಗೆ ಜೀವಕಳೆ ಬಂದಿದೆ. ಜಲಾಶಯವು ಭರ್ತಿಯಾದ ಹಿನ್ನೆಲೆಯಲ್ಲಿ ಹೆಚ್ಚುವರಿ ನೀರನ್ನು ಗೇಟ್‌ಗಳ ಮೂಲಕ ಹೊರ ಬಿಡಲಾಗುತ್ತಿದೆ. ಆದರೆ ಮುನಿರಾಬಾದ್‌ ಸಮೀಪದ ಎಚ್‌ ಎಚ್‌-63 ಹಳೇ ಸೇತುವೆಯ ಗೇಟ್‌ ಬಳಿ ಜನರು ನೀರಿನ ಹರಿವು ನೋಡಲು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ. ಆದರೆ ಹಳೆ ಸೇತುವೆ ಅಪಾಯವನ್ನೂ ಮರೆತಿದ್ದಾರೆ.

ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅತ್ಯ ಧಿಕ ಮಳೆಯಾದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಈಗಾಗಲೇ ಡ್ಯಾಂ ಬಹುತೇಕ ಭರ್ತಿಯಾಗಿದ್ದು, ಒಳ ಹರಿವಿನ ಪ್ರಮಾಣವೂ 50 ಸಾವಿರ ಕ್ಯೂಸೆಕ್‌ನಷ್ಟಿದೆ. ಡ್ಯಾಂನ ನೀರಿನ ಸಂಗ್ರಹಣಾ ಸಾಮರ್ಥ್ಯದ ಸ್ಥಿತಿಗತಿ ಅವಲೋಕಿಸಿದ ನೀರಾವರಿ ಇಲಾಖೆಯಿಂದ ಹೆಚ್ಚುವರಿ ನೀರನ್ನು ಜಲಾಶಯ ಮುಖ್ಯ ಗೇಟ್‌ ಗಳ ಮೂಲಕ ಹರಿಬಿಡಲಾಗಿದೆ.

ಹಲವು ವರ್ಷಗಳಿಂದ ಡ್ಯಾಂನಲ್ಲಿ ನೀರು ಸಂಗ್ರಹಣೆಯಾಗದೇ ಇರುವುದನ್ನು ನೋಡಿದ ಜನರು ಈಗ ನೀರಿನ ದೃಶ್ಯ ನೋಡಿ ಕಣ್ಮನ ತಣಿಸಿಕೊಳ್ಳಲು ತಂಡೋಪ ತಂಡವಾಗಿ ಡ್ಯಾಂನತ್ತ ಹೆಜ್ಜೆ ಹಾಕುತ್ತಿದ್ದಾರೆ. ಡ್ಯಾಂನ ಮುಂಭಾಗದ ಸುಂದರ ನೋಟವು ಸಮೀಪದ ರಾಷ್ಟ್ರೀಯ ಹೆದ್ದಾರಿ-63 ರಸ್ತೆಯಲ್ಲಿ ನಿಂತು ನೋಡಿದರೆ ಎಲ್ಲರ ಕಣ್ಣು ಕೊರೈಸುವಂತೆ ಕಾಣುತ್ತದೆ. ಅಲ್ಲಿ ಡ್ಯಾಂನಿಂದ ನೀರು ಹೊರ ಬರುತ್ತಿರುವ ದೃಷ್ಯವೂ ಎಲ್ಲರ ಕಣ್ಣನ್ನು ಅರಳಿಸುವಂತೆ ಮಾಡುತ್ತದೆ.

ಆದರೆ ಡ್ಯಾಂ ದೂರದಲ್ಲಿ ರಾಷ್ಟ್ರೀಯ ಹೆದ್ದಾರಿಗಾಗಿಯೇ ಹಲವು ವರ್ಷಗಳ ಹಿಂದೆ ಸೇತುವೆ ನಿರ್ಮಿಸಲಾಗಿತ್ತು. ಆದರೆ ಇತ್ತೀಚೆಗಿನ ದಿನಗಳಲ್ಲಿ ಆ ಸೇತುವೆ ಶಿಥಿಲಗೊಂಡ ಹಿನ್ನೆಲೆಯಲ್ಲಿ ಅದರ ಪಕ್ಕದಲ್ಲೇ ಹೊಸ ಸೇತುವೆ ನಿರ್ಮಾಣ ಮಾಡಲಾಗಿದೆ. ಪ್ರಸ್ತುತ ಹಳೆ ಸೇತುವೆಯಲ್ಲಿ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ. ಇದನ್ನೇ ಸದ್ಭಳಕೆ ಮಾಡಿಕೊಳ್ಳುತ್ತಿರುವ ಜನರು ಹಳೇ ಸೇತುವೆ ಮೇಲೆ ಕುಳಿತು ಡ್ಯಾಂನಿಂದ ನೀರು ಹರಿದು ಬರುತ್ತಿರುವ ಫೋಟೋ ಹಾಗೂ ವೀಡಿಯೋ ಹಾಗೂ ಸೇಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಮಕ್ಕಳು, ವೃದ್ಧರು ಸೇರಿದಂತೆ ಯುವಕರು ಸೇತುವೆ ಮೇಲೆ ಓಡಾಡುತ್ತಿದ್ದಾರೆ. ಸೇತುವೆ ಕೆಳ ಭಾಗದಲ್ಲಿ ನೀರಿನ ರಭಸವೂ ಹೆಚ್ಚಾಗಿದೆ. ಅಲ್ಲದೇ, ಸೇತುವೆ ಶಿಥಿಲಾವಸ್ಥೆಯಲ್ಲಿದೆ. ಅದರ ಮೇಲೆ ಜನದಟ್ಟಣೆ ಹೆಚ್ಚಾಗಿದೆ. ಹೀಗಾಗಿ ಜನರಿಗೆ ಅಪಾಯಕ್ಕೆ ಆಹ್ವಾನ ನೀಡುವಂತ ಸ್ಥಿತಿಯಲ್ಲಿದೆ.

ಹಳೆ ಸೇತುವೆಗೆ ಎಡ ಹಾಗೂ ಬಲ ಭಾಗದಲ್ಲಿ ಯಾವುದೇ ರಕ್ಷಣಾ ಗೋಡೆಯಿಲ್ಲ. ಹೀಗಾಗಿ ಜನರು ಸ್ವಲ್ಪ ಆಯ ತಪ್ಪಿದರೂ ಭೋರ್ಗರೆಯುವ ನೀರಿನಲ್ಲಿ ಬೀಳುವುದು ನಿಶ್ಚಿತ. ನೀರಿನ ಮೋಜಿನಲ್ಲಿಯೇ ತೊಡಗುತ್ತಿರುವ ಯುವಕರು ಬೈಕ್‌ನಲ್ಲಿ ರೈಡಿಂಗ್‌ ಮಾಡುತ್ತಿದ್ದಾರೆ. ಇದು ಜನರಿಗೆ ಕಿರಿಕಿರಿ ಮಾಡಲಾಂಭಿಸಿದೆ.

ಪೊಲೀಸ್‌ ಇಲಾಖೆ ಹಾಗೂ ಜಿಲ್ಲಾಡಳಿತವು ತುಂಗಭದ್ರಾ ಡ್ಯಾಂ ಮುಂಭಾಗದಲ್ಲಿನ ಹಳೆ ಸೇತುವೆಯ ಬಳಿ ಭದ್ರತಾ ವ್ಯವಸ್ಥೆ ಕೈಗೊಳ್ಳುವ ಅಗತ್ಯವಿದೆ. ಅವಘಡಗಳು ಸಂಭವಿಸುವ ಮುನ್ನ ಜಾಗೃತರಾಗಬೇಕಿದೆ. ರಕ್ಷಣಾ ಗೋಡೆ ಇಲ್ಲವೇ ಬ್ಯಾರೆಕೇಡ್‌ಗಳ ಅಳವಡಿಸುವ ಅವಶ್ಯಕತೆಯಿದೆ ಎನ್ನುತ್ತಿದ್ದಾರೆ ಸ್ಥಳೀಯ ಪ್ರಜ್ಞಾವಂತ ಜನರು. 

ತುಂಗಭದ್ರಾ ಡ್ಯಾಂ ಮುಂಭಾಗದಲ್ಲಿ ಹಳೆ ಸೇತುವೆ ಮೇಲೆ ಜನರು ನೀರು ಹರಿಯುವುದನ್ನು ನೋಡುತ್ತಿದ್ದಾರೆ. ಆದರೆ
ಸೇತುವೆ ತುಂಬಾ ಹಳೆಯದಾಗಿದ್ದು, ಕುಸಿಯುವ ಸಾಧ್ಯತೆಯಿದೆ. ಪೊಲೀಸ್‌ ಇಲಾಖೆ, ಜಿಲ್ಲಾಡಳಿತ ಹಳೆ ಸೇತುವೆಯ ಸುತ್ತ ಭದ್ರತೆ ಒದಗಿಸಿ ಜಾಗೃತಿ ಮೂಡಿಸಬೇಕಿದೆ.
 ವೀರೇಂದ್ರ ಮುನಿರಾಬಾದ್‌,
ಸ್ಥಳೀಯ ನಿವಾಸಿ.

ಟಾಪ್ ನ್ಯೂಸ್

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.