ಅಕ್ರಮ ಪ್ಲಾಟ್ ದಂಧೆ; ಬಡವರ ರಕ್ಷಣೆ ಅಗತ್ಯ

ಕಡಿಮೆ ದರಕ್ಕೆ ಭೂಮಿ ಮಾರಾಟ ಮಾಡುವ ವಂಚಕರಿಂದ ಜಾಗೃತರಾಗಿರಲು ಸೂಚನೆ

Team Udayavani, Jun 24, 2019, 8:49 AM IST

hubali-tdy-5..

ಹುಬ್ಬಳ್ಳಿ: ಗೋಕುಲ ರಸ್ತೆಯ ಲಿಡ್ಕರ್‌ ಕಾಲೋನಿಯಲ್ಲಿ ಸಾಂಸ್ಕೃತಿಕ ಭವನ ಕಾಮಗಾರಿಗೆ ಶಾಸಕ ಜಗದೀಶ ಶೆಟ್ಟರ ಭೂಮಿಪೂಜೆ ನೆರವೇರಿಸಿದರು.

ಹುಬ್ಬಳ್ಳಿ: ನಗರದಲ್ಲಿ ಕೆಲವರು ಅಕ್ರಮವಾಗಿ ಪ್ಲಾಟ್‌ಗಳನ್ನು ಮಾರಾಟ ಮಾಡುತ್ತಿರುವುದರಿಂದ ಬಡವರು ತೊಂದರೆಗೀಡಾಗುವಂತಾಗಿದೆ. ಜನಪ್ರತಿನಿಧಿಗಳಿಂದ ಬಡವರಿಗೆ ರಕ್ಷಣೆ ನೀಡುವ ಕಾರ್ಯ ಆಗಬೇಕಿದೆ ಎಂದು ಶಾಸಕ ಜಗದೀಶ ಶೆಟ್ಟರ ಹೇಳಿದರು.

ಗೋಕುಲ ರಸ್ತೆ ಕೈಗಾರಿಕಾ ವಸಾಹತು ಪ್ರದೇಶದ ಲಿಡ್ಕರ್‌ ಕಾಲೋನಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಡಾ| ಬಾಬು ಜಗಜೀವನರಾಮ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಅಂದಾಜು 1.56 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಸಾಂಸ್ಕೃತಿಕ ಭವನ ಕಾಮಗಾರಿಗೆ ರವಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ನಗರದಲ್ಲಿ ಕೆಲವರು ಯಾರದೋ ಜಮೀನನ್ನು ತಮ್ಮದೆಂದು ಮೊಕ್ತಿಯಾರ ಪಡೆದು, ಬಡವರು ಹಾಗೂ ಮಧ್ಯಮ ವರ್ಗದರಿಗೆ ಕಡಿಮೆ ದರಕ್ಕೆ ಕೊಡುವುದಾಗಿ ನಂಬಿಸಿ 10ರೂ. ಬಾಂಡ್‌ ಪೇಪರ್‌ನಲ್ಲಿ ಮಾರಾಟ ಮಾಡಿ ವಂಚಿಸುವ ದಂಧೆ ನಡೆಯುತ್ತಿದೆ. ಇವರನ್ನು ನಂಬಿ ಲಕ್ಷಾಂತರ ರೂ. ಸಾಲ-ಸೋಲ ಮಾಡಿ ಮನೆ ಕಟ್ಟಿಸಿ 20-30 ವರ್ಷ ಅಲ್ಲಿ ವಾಸಿಸುತ್ತಿರುತ್ತಾರೆ. ಕೊನೆಗೆ ಜಾಗದ ಮಾಲೀಕರು ಕೋರ್ಟ್‌ ಮೊರೆ ಹೋಗಿ ತಮ್ಮ ಜಮೀನು ಪಡೆಯುತ್ತಿದ್ದಾರೆ. ಇದರಿಂದ ಬಡವರು ಬೀದಿಗೆ ಬೀಳುವಂತಾಗಿದೆ. ಸರಕಾರದಿಂದ ಬಡವರು, ಮಧ್ಯಮ ವರ್ಗದವರಿಗೆ ವಸತಿ ನಿರ್ಮಾಣ ಮಾಡಿಕೊಟ್ಟರೆ ಸಹಕಾರಿಯಾಗುತ್ತದೆ. ಬಡವರು ಕಡಿಮೆ ದರಕ್ಕೆ ಭೂಮಿ ಮಾರಾಟ ಮಾಡುವ ವಂಚಕರಿಂದ ಜಾಗೃತರಾಗಿರಬೇಕು ಎಂದರು.

ಲಿಡ್ಕರ್‌ ಕಾಲೋನಿಯಲ್ಲಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನವನ್ನು ನಿಗದಿತ 9 ತಿಂಗಳೊಳಗೆ ಗುಣಮಟ್ಟದಲ್ಲಿ ನಿರ್ಮಿಸಿಕೊಡಬೇಕು. ಕಾಲೋನಿಯ ನಿವಾಸಿಗಳಿಗೆ ಆದಷ್ಟು ಬೇಗ ಹಕ್ಕುಪತ್ರ ವಿತರಣೆ ಮಾಡಬೇಕು ಎಂದರು.

ಲಿಡ್ಕರ್‌ ಅಧ್ಯಕ್ಷರಾದ ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಲಿಡ್ಕರ್‌ ಕಾಲೋನಿಯಲ್ಲಿ ಮನೆಗಳನ್ನು ಕಟ್ಟುವ ಉದ್ದೇಶವಿತ್ತು. ಆದರೆ ಜಾಗ ಕಡಿಮೆ ಇದೆ. ಚರ್ಮೋದ್ಯೋಮದಲ್ಲಿರುವ ಜನರಿಗೆ ಅಗತ್ಯ ಮೂಲೌಕರ್ಯ ಒದಗಿಸಲು ಹಾಗೂ ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಚರ್ಮ ಉತ್ಪನ್ನಗಳಿಗೆ ಹೊಸ ವಿನ್ಯಾಸ, ಬ್ರ್ಯಾಂಡಿಂಗ್‌ ಮಾಡಿ ಲಿಡ್ಕರ್‌ ಮಳಿಗೆಗಳಲ್ಲಿ ಮಾರಾಟ ಮಾಡಲಾಗುವುದು. ಚರ್ಮಕಾರರು ಮಧ್ಯವರ್ತಿಗಳ ಆಮಿಷಗಳಿಗೆ ಒಳಗಾಗಬಾರದು. ಮಧ್ಯವರ್ತಿಗಳಿಗೆ ಕಡಿವಾಣ ಹಾಕಲಾಗುವುದು. ಲಿಡ್ಕರ್‌ ಕಾಲೋನಿಯಲ್ಲಿ ವಸತಿ ಸಮುಚ್ಛಯ ನಿರ್ಮಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.

ಪಾಲಿಕೆ ಮಾಜಿ ಸದಸ್ಯ ಮಹೇಶ ಬುರ್ಲಿ, ಮಾಜಿ ಮಹಾಪೌರ ವೆಂಕಟೇಶ ಮೇಸ್ತ್ರಿ, ಸದಾನಂದ ತೇರದಾಳ, ಗುರುನಾಥ ಉಳ್ಳಿಕಾಶಿ ಮೊದಲಾದವರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.