ಅಕ್ರಮ ಸಂಬಂಧಿಕರಿಗೆ ಕೋಳ


Team Udayavani, Aug 27, 2019, 9:47 AM IST

huballi-tdy-3

ಹುಬ್ಬಳ್ಳಿ: ಮಗು ಕೊಲೆ ಮಾಡಿ ಕಿಮ್ಸ್‌ ಆಸ್ಪತ್ರೆಯಲ್ಲಿ ಶವ ಬಿಟ್ಟು ಹೋಗಿದ್ದ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ಗೋಕುಲ ರಸ್ತೆ ಪೊಲೀಸರು ಬಂಧಿಸಿದರು.

ಹುಬ್ಬಳ್ಳಿ: ಕಿಮ್ಸ್‌ನಲ್ಲಿ ಮೃತ ಹೆಣ್ಣು ಮಗು ಶವ ಬಿಟ್ಟು ತಲೆಮರೆಸಿಕೊಂಡಿದ್ದ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ಗೋಕುಲ ರಸ್ತೆ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇವರಿಬ್ಬರು ತಮ್ಮ ಅಕ್ರಮ ಸಂಬಂಧಕ್ಕೆ ನಾಲ್ಕು ವರ್ಷದ ಮಗುವನ್ನು ಬಲಿ ತೆಗೆದುಕೊಂಡಿದ್ದಾರೆ ಎಂದು ಪೊಲೀಸ್‌ ಆಯುಕ್ತ ಆರ್‌. ದಿಲೀಪ್‌ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರಕರಣದಲ್ಲಿ ಮೂಲತಃ ಬೆಳಗಾವಿಯ ಕಾಸಬಾಗ ಮಾರುತಿ ಗಲ್ಲಿಯ ಇಲ್ಲಿನ ಗೋಕುಲ ಗ್ರಾಮದ ಕುರ್ಡಿಕೇರಿ ಓಣಿಯ ಪೂಜಾ ಆರ್‌. ತಾಳೂಕರ ಹಾಗೂ ವಿದ್ಯಾನಗರ ನೇಕಾರ ಕಾಲೋನಿಯ ದಾದಾಪೀರ ಊರ್ಫ್‌ ದದ್ದು ಬಿ. ಚಳ್ಳಮರದಶೇಖ ಎಂಬುವವರೇ ಬಂಧಿತರಾಗಿದ್ದಾರೆ ಎಂದರು.

ಇವರಿಬ್ಬರು ತಮ್ಮ ಮಗಳು ಖುಷಿ ರಾಜು ತಾಳೂಕರ (4) ಮನೆಯಲ್ಲಿ ಬಿದ್ದು ಗಾಯಗೊಂಡಿದ್ದಾಳೆ ಎಂದು ಆ. 20ರಂದು ಕಿಮ್ಸ್‌ಗೆ ದಾಖಲಿಸಿದ್ದರು. ಆದರೆ ಮಗು ಮೃತಪಟ್ಟಿದೆ ಎಂದು ಗೊತ್ತಾಗುತ್ತಿದ್ದಂತೆ ಶವ ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದರು. ಬಾಲಕಿಯ ತಲೆಯ ಹಿಂಭಾಗದಲ್ಲಿ ಹೊಡೆತ ಬಿದ್ದಿದ್ದರಿಂದ ಸಾವಿನಲ್ಲಿ ಸಂಶಯವಿದೆ ಎಂದು ಗೋಕುಲ ರಸ್ತೆ ಠಾಣೆ ಇನ್‌ಸ್ಪೆಕ್ಟರ್‌ ದಿಲೀಪ ಪಿ. ನಿಂಬಾಳಕರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಇವರಿಬ್ಬರು ಕಿಮ್ಸ್‌ನಲ್ಲಿ ಮೃತ ಮಗು ಬಿಟ್ಟು ಹೋಗಿದ್ದು ಸಿಸಿಟಿವಿಯಲ್ಲಿ ದೃಶ್ಯಾವಳಿಗಳು ದಾಖಲಾಗಿದ್ದವು. ಮೃತ ಬಾಲಕಿಯ ವಾರಸುದಾರರ ಬಗ್ಗೆ ಕಲೆ ಹಾಕಿ, ಅವರಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗಿತ್ತು ಎಂದು ಹೇಳಿದರು.

ಪತಿ ಬಿಟ್ಟು ಪ್ರಿಯಕರನೊಂದಿಗಿದ್ದ ಪೂಜಾ: ಬೆಳಗಾವಿ ಕಾಸಬಾಗದಲ್ಲಿದ್ದ ಬಂಧಿತ ಪೂಜಾ ತಾಳೂಕರ ಒಂದು ತಿಂಗಳ ಹಿಂದೆ ತನ್ನೆರಡು ಮಕ್ಕಳಾದ ಖುಷಿ ಮತ್ತು ಸಾನ್ವಿಯೊಂದಿಗೆ ಮನೆ ಬಿಟ್ಟು ನಗರಕ್ಕೆ ಬಂದಿದ್ದಳು. ಇಲ್ಲಿ ತನ್ನ ಹಳೆಯ ಪ್ರಿಯಕರ ದಾದಾಪೀರನೊಂದಿಗೆ ಗೋಕುಲ ಕುರ್ಡಿಕೇರಿ ಓಣಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಳು. ಇವರಿಬ್ಬರು ಆರು ವರ್ಷಗಳಿಂದ ಪ್ರೀತಿಸುತ್ತಿದ್ದು, ಇವರ ಅಕ್ರಮ ಸಂಬಂಧದಿಂದ ಎರಡನೇ ಮಗು ಸಾನ್ವಿ ಜನಿಸಿದ್ದಳು. ಒಂದನೇ ಮಗು ಖುಷಿಯು ಪೂಜಾಳ ಪತಿಗೆ ಜನಿಸಿದ್ದು, ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾಳೆ ಎಂದುಕೊಂಡು ಅವಳಿಗೆ ತಿರಸ್ಕಾರ ಮಾಡುತ್ತಿದ್ದರು. ಸರಿಯಾಗಿ ಊಟ ಕೊಡುತ್ತಿರಲಿಲ್ಲ. ಹಲ್ಲೆ ಮಾಡುತ್ತ ತೊಂದರೆ ಕೊಡಲಾಗುತ್ತಿತ್ತು.

ಆ. 20ರಂದು ಮಧ್ಯಾಹ್ನ ದಾದಾಪೀರನು ಖುಷಿಯ ತಲೆಯ ಹಿಂಭಾಗಕ್ಕೆ ಕಟ್ಟಿಗೆಯಿಂದ ಹೊಡೆದಾಗ ಬಿದ್ದು ಪ್ರಜ್ಞಾಹೀನವಾಗಿದ್ದಳು. ಅವಳು ಇನ್ನೂ ಬದುಕಿದ್ದಾಳೆ ಎಂದುಕೊಂಡು ಕಿಮ್ಸ್‌ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಮಗು ಮೃತಪಟ್ಟಿದೆ ಎಂಬುದು ಗೊತ್ತಾಗುತ್ತಿದ್ದಂತೆ, ತಮ್ಮ ಅಕ್ರಮ ಸಂಬಂಧ ಎಲ್ಲಿ ಬಯಲಾಗುತ್ತದೋ ಎಂದುಕೊಂಡು ಮಗುವಿನ ಶವ ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದರು ಎಂದು ಆಯುಕ್ತರು ತಿಳಿಸಿದರು.

ಕಿಮ್ಸ್‌ನಲ್ಲಿ ಮಗು ದಾಖಲಿಸುವಾಗ ದಾದಾಪೀರನು ತಾನು ಮಗುವಿನ ತಂದೆ ರಾಜು ಎಂದು ಹೆಸರು ದಾಖಲಿಸಿದ್ದ, ಸಿಸಿಟಿವಿ ದೃಶ್ಯಾವಳಿ ಹಾಗೂ ಖಚಿತ ಮಾಹಿತಿ ಮೇರೆಗೆ ಇಬ್ಬರನ್ನು ನರಗುಂದ ತಾಲೂಕು ಶಿರೋಳ ಗ್ರಾಮದಲ್ಲಿ ಬಂಧಿಸಲಾಗಿದೆ. ಇವರು ತಾವೇ ಮಗು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ದಾದಾಪೀರನ ಮೇಲೆ ಈಗಾಗಲೇ ಎಪಿಎಂಸಿ-ನವನಗರ, ವಿದ್ಯಾನಗರ ಠಾಣೆಯಲ್ಲಿ ಕಳ್ಳತನ ಪ್ರಕರಣಗಳಿದ್ದು, ಈತ ವೃತ್ತಿಪರ ಕಳ್ಳನಾಗಿದ್ದಾನೆ. ಇವರಿಬ್ಬರನ್ನು ಬಂಧಿಸುವಲ್ಲಿ ಸಿಬ್ಬಂದಿ ಕಾರ್ಯ ಶ್ಲಾಘನೀಯ. ಅವರಿಗೆ ಬಹುಮಾನ ಘೋಷಿಸಲಾಗಿದೆ ಎಂದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.