ನಾನು ಸೂಪರ್ ಸಿಎಂ ಅಲ್ಲ:ಎಚ್.ಡಿ.ರೇವಣ್ಣ
Team Udayavani, Jun 18, 2018, 6:25 AM IST
ಹುಬ್ಬಳ್ಳಿ: “ನಾನು ಸೂಪರ್ ಸಿಎಂ ಅಲ್ಲವೇ ಅಲ್ಲ, ಆದರೆ ಈ ನಿಟ್ಟಿನಲ್ಲಿ ನನಗೆ ಪುಕ್ಕಟೆ ಪ್ರಚಾರ ಸಿಗ್ತಿದೆ. ನಾನು ಕೇವಲ ಲೋಕೋಪಯೋಗಿ ಸಚಿವನಾಗಿ ಕಾರ್ಯ ನಿರ್ವಹಿಸುತ್ತಿದ್ದೇನಷ್ಟೆ’ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಕೆಲಸ ಬಿಟ್ಟು ಬೇರೇನೂ ಮಾಡಿಲ್ಲ. ಆರ್ಡಿಪಿಆರ್ ಇಲಾಖೆಗೆ ಅಧಿಕಾರಿಗಳನ್ನು ನಾನು ಕೊಟ್ಟಿದ್ದೀನಿ. ಪೋಸ್ಟಿಂಗ್ ಮಾಡಿಕೊಳ್ಳುವುದು ಅವರಿಗೆ ಬಿಟ್ಟ ವಿಷಯ. ಜಲಸಂಪನ್ಮೂಲ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ. ಕಾಂಗ್ರೆಸ್ ಅಧ್ಯಕ್ಷರಿಗೆ ಬಹಿರಂಗವಾಗಿ ಹೇಳಿದ್ದೇನೆ ಎಂದರು.
ಕಾಂಗ್ರೆಸ್ ನಾಯಕರಾದ ವೇಣುಗೋಪಾಲ, ಡಾ| ಜಿ.ಪರಮೇಶ್ವರ್, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಾನು ಹಸ್ತಕ್ಷೇಪ ಮಾಡುತ್ತಿದ್ದೇನೆಂದು ತಿಳಿಸಿದರೆ ಅದಕ್ಕೆ ಉತ್ತರ ಕೊಡುತ್ತೇನೆ. ಸಮನ್ವಯ ಸಮಿತಿ ಅದನ್ನೆಲ್ಲ ನೋಡಿಕೊಳ್ಳುತ್ತದೆ ಎಂದರು. ಪೂರ್ಣ ಬಜೆಟ್ ಇಲ್ಲವೆ ಪೂರಕ ಬಜೆಟ್ ಮಂಡಿಸಬೇಕೋ ಇಲ್ಲವೋ ಎಂಬುದು ಸಿಎಂ ವಿವೇಚನೆಗೆ ಬಿಟ್ಟ ವಿಷಯ. ಅವರು ಸಲಹೆ ಕೇಳಿದ್ರೆ ಮಾತ್ರ ಹೇಳ್ತೀನಿ ಎಂದರು.
ಹೊರಟ್ಟಿಗೆ ಸಚಿವ ಸ್ಥಾನಕ್ಕೆ ಮನವಿ ಮಾಡುವೆ: ಬಸವರಾಜ ಹೊರಟ್ಟಿಯವರು ನಮ್ಮ ನಾಯಕರು. ಉನ್ನತ ಶಿಕ್ಷಣ ಇಲಾಖೆಗೆ ಅವರ ಕೊಡುಗೆ ದೊಡ್ಡದು. ಅವರಿಗೆ ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯವಿದೆ. ಅವರಿಗೆ ಸಚಿವ ಸ್ಥಾನ ಕೊಡುವಂತೆ ಎಚ್.ಡಿ. ದೇವೇಗೌಡರ, ಕುಮಾರಸ್ವಾಮಿ ಅವರ ಗಮನಕ್ಕೆ ತರುತ್ತೇನೆ ಎಂದು ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು. ಹೊರಟ್ಟಿ ಹಾಗೂ ಎನ್.ಎಚ್. ಕೋನರಡ್ಡಿ ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಕಾರ್ಯವನ್ನು ಪಕ್ಷದ ನಾಯಕರು ಮಾಡುತ್ತಾರೆ. ವಿಶ್ರಾಂತ ಕುಲಪತಿ ರಂಗಪ್ಪರನ್ನು ಶಿಕ್ಷಣ ಇಲಾಖೆ ಸಲಹೆಗಾರರನ್ನಾಗಿ ನೇಮಿಸುವ ಹಾಗೂ ರೋಹಿಣಿ ಸಿಂಧೂರಿ ಅವರನ್ನು ಹಾಸನ ಜಿÇÉಾಧಿಕಾರಿ ಮಾಡುವ ವಿಚಾರ ಸಿಎಂಗೆ ಬಿಟ್ಟಿದ್ದು ಎಂದರು.
ವಿನಯ್ ಮನೆಗೆ ರೇವಣ್ಣ ಭೇಟಿ: ಸಚಿವ ಎಚ್.ಡಿ. ರೇವಣ್ಣ ಅವರು ಮಾಜಿ ಸಚಿವ ವಿನಯ್ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿ, ವಿನಯ್ ಅವರೊಂದಿಗೆ ಕೆಲ ಹೊತ್ತು ಚರ್ಚಿಸಿ, ಉಪಾಹಾರ ಸೇವಿಸಿದರು. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ನ ಪ್ರಮುಖ ನಾಯಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಮಾನ ನೀಡಿಲ್ಲ ಎಂಬ ಅಸಮಾಧಾನಗಳ ಮಧ್ಯೆಯೇ, ಹೋರಾಟದ ರೂವಾರಿ, ವಿನಯ್ ಕುಲಕರ್ಣಿ ನಿವಾಸಕ್ಕೆ ಸಚಿವ ರೇವಣ್ಣ ಭೇಟಿ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಡಿ.ಕೆ. ಶಿವಕುಮಾರ್ ಮತ್ತು ನಾನು ಚೆನ್ನಾಗಿದ್ದೀವಿ. ಸುಮ್ಮನೆ ನಮ್ಮ ನಡುವೆ ಜಗಳ ತಂದಿಡುವ ಕೆಲಸ ನಡೆಯುತ್ತಿದೆ. ಸಮ್ಮಿಶ್ರ ಸರಕಾರ ಐದು ವರ್ಷ ಆಡಳಿತ ನಡೆಸುತ್ತದೆ. ಈ ಕುರಿತು ಯಾರೂ ಧೃತಿಗೆಡಬೇಕಿಲ್ಲ.
– ಎಚ್.ಡಿ.ರೇವಣ್ಣ, ಲೋಕೋಪಯೋಗಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ