ಚಿತ್ರ ಮಾಧ್ಯಮ ಸಂಸ್ಕೃತಿಯ ಪ್ರತಿಬಿಂಬ

ಕಲಾ ಪ್ರದರ್ಶನಕ್ಕೆ ಯೋಗ್ಯವಾದ ಮ್ಯೂಜಿಯಂ ಮಾಡಬೇಕಿದೆ:ರಾಜೂರು

Team Udayavani, Jun 23, 2022, 12:12 PM IST

6

ಧಾರವಾಡ: ಚಿತ್ರ ಮಾಧ್ಯಮ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದೆ. ಇದನ್ನು ಉಳಿಸಿ ಬೆಳೆಸುವ ಕಾರ್ಯ ಆಗಬೇಕಾಗಿದೆ ಎಂದು ಡಾ| ವೀರಣ್ಣ ರಾಜೂರ ಹೇಳಿದರು.

ನಗರದ ಕವಿಸಂನಲ್ಲಿ ಹಿರಿಯ ಕಲಾವಿದ ರಾಮಣ್ಣ ಸೂರಿ ಅವರ ಡಿಜಿಟಲ್‌ ಕಲಾಕೃತಿಗಳು ಹಾಗೂ ಬಿ.ಜಿ.ಗುಜ್ಜಾರಪ್ಪ ಅವರ ಅಕ್ರಾಲಿಕ್‌ ಕಲಾಕೃತಿಗಳ ಐದು ದಿನಗಳ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ಧಾರವಾಡದ ಚಿತ್ರಕಲೆ ಕ್ಷೇತ್ರಕ್ಕೆ ಡಿ.ಬಿ ಹಾಲಭಾವಿಯವರಿಂದ ಹಿಡಿದು ಇಂದಿನ ಕಲಾವಿದರು ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಕವಿಸಂ ಬದ್ಧತೆ ಇಟ್ಟುಕೊಂಡುಎಲ್ಲ ಕಲೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ. ಕಲಾ ಪ್ರದರ್ಶನಕ್ಕೆ ಯೋಗ್ಯವಾದ ಮ್ಯೂಜಿಯಂ ಮಾಡಬೇಕಿದೆ ಎಂದರು.

ತುಮಕೂರಿನ ಹಿರಿಯ ಕಲಾವಿದ ಪ್ರಭು ಹರಸೂರ ಮಾತನಾಡಿ, ಎಲ್ಲ ಕಲೆಗೆ ಮೂಲ ಕಲೆ ಚಿತ್ರಕಲೆ. ಹಿರಿಯ ಕಲಾವಿದರ ಚಿತ್ರಕಲೆಗಳ ಒಳಗಿನ ಸೂಕ್ಷ್ಮತೆಯನ್ನು ಗಮನಿಸುವಂತಾಗ ಬೇಕು. ಆವಾಗಲೇ ಕಲಾ ವಿದ್ಯಾರ್ಥಿಗಳು ತಮ್ಮ ಚಿತ್ರಕಲೆಯಲ್ಲಿ ಹೊಸತನ ತಂದುಕೊಳ್ಳಲು ಸಾಧ್ಯವಿದೆ ಎಂದರು.

ಕಲಾವಿದ ಬಿ.ಜಿ. ಗುಜ್ಜಾರಪ್ಪ ಮಾತನಾಡಿ, ಕಲಾವಿದ ಮಾತುಗಾರ ನಿರುವುದಿಲ್ಲ. ಭಾಷಣಕಾರನಿಗೆ ಹೇಗೆ ಪದಗಳು ಪುಂಕಾನುಪುಂಕವಾಗಿ ಅವರ ಬಾಯಲ್ಲಿ ಬರುತ್ತವೋ ಹಾಗೆ ಕಲಾವಿದನ ತಲೆಯಲ್ಲಿ ರೇಖೆಗಳು ತೆರೆತೆರೆಯಾಗಿ ಬರುತ್ತವೆ.ಕಲೆಯನ್ನು ಸರಿಯಾಗಿ ಬಳಸಿಕೊಂಡು ಒಳ್ಳೆಯ ಬದುಕನ್ನು ರೂಪಿಸಿಕೊಳ್ಳಬಹುದು ಎಂದರು.

ಕಲಾವಿದ ರಾಮಣ್ಣ ಸೂರಿ ಮಾತನಾಡಿ, ಡಿಜಿಟಲ್‌ ಚಿತ್ರಕಲೆಗೆ ಹೋಗುವವರು ಕ್ಯಾನವಾಸ್‌ದಲ್ಲಿ ಚಿತ್ರ ಬಿಡಿಸುವಲ್ಲಿ ಪರಿಣತಿ ಹೊಂದಿದವರಿರಬೇಕು. ಡಿಜಿಟಲ್‌ ಕಲೆಯಲ್ಲಿ ಬೇಕಾದಷ್ಟು ಅವಕಾಶಗಳಿವೆ. ತ್ವರಿತವಾಗಿ ಕಲೆ ಬಿಡಿಸಬಹುದು. ಅದೇ ಕ್ಯಾನವಾಸ್‌ನಲ್ಲಿ ಮಾಡುವಾಗ ತಿಂಗಳಾನುಗಟ್ಟಲೇ ಕೆಲಸ ಮಾಡಬೇಕಾಗುತ್ತದೆ ಎಂದರು.

ಬಿ. ಮಾರುತಿ ಪ್ರಾಸ್ತಾವಿಕ ಮಾತನಾಡಿದರು. ಕವಿಸಂ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು. ಸುರೇಶ ಹಾಲಭಾವಿ, ಡಾ|ಪಾರ್ವತಿ ಹಾಲಭಾವಿ, ಎಸ್‌. ಎಮ್‌ ಲೋಹಾರ, ಎಸ್‌.ಕೆ. ಪತ್ತಾರ, ಎಂ.ಆರ್‌.ಬಾಳಿಕಾಯಿ, ಎಚ್‌.ಎಫ್‌. ಚಿಕ್ಕಮಠ, ಡಾ|ಆನಂದ ಪಾಟೀಲ, ಬಿ.ಎಂ. ಪಾಟೀಲ, ಸುಪ್ರೀಯಾ ದೀಪಕ್‌ ಮುಂತಾದ ಹಿರಿಯ ಕಲಾವಿದರು ಪಾಲ್ಗೊಂಡಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಸ್ವಾಗತಿಸಿದರು. ಧಾರವಾಡ ಸರಕಾರಿ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ|ಬಿ.ಹೆಚ್‌. ಕುರಿ ನಿರೂಪಿಸಿದರು. ಶಂಕರ ಕುಂಬಿ ವಂದಿಸಿದರು.

ಇಂದಿನಿಂದ ಚಿತ್ರಕಲಾ ಪ್ರದರ್ಶನ

ಧಾರವಾಡ: ಇಲ್ಲಿಯ ಜೆಎಸ್ಸೆಸ್‌ ಹಾಲಬಾವಿ ಸ್ಕೂಲ್‌ ಆಫ್‌ ಆರ್ಟ್‌ನಲ್ಲಿ ಜೂ.23 ರಿಂದ ಜೂ.26ರವರೆಗೆ ಪೂಜಾ ನೇರಲೇಕರ, ಮಗಳು ಚೈತ್ರಾ ನೇರಲೇಕರ ಅವರ ಚಿತ್ರಕಲಾ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಪ್ರಮೋದ ನೇರಲೇಕರ ಹೇಳಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ.23ರಂದು ಬೆಳಿಗ್ಗೆ 10:00 ಗಂಟೆಗೆ ಹಾಲಬಾವಿ ಸ್ಕೂಲ್‌ ಆಫ್‌ ಆರ್ಟ್‌ ಕಾಲೇಜು ವಿಶ್ರಾಂತ ಪ್ರಾಚಾರ್ಯ ಎಸ್‌ .ಡಿ. ಹಾಲಬಾವಿ ಪ್ರದರ್ಶನಕ್ಕೆ ಚಾಲನೆ ನೀಡುವರು.

ಅತಿಥಿಗಳಾಗಿ ಪ್ರಾಚಾರ್ಯರಾದ ಡಾ|ಪಿ.ಎಂ. ಜಿಜೋ, ಡಾ|ಬಿ.ಎಂ.ಪಾಟೀಲ, ಸಂಸ್ಥೆಯ ಆಡಳಿತಾಧಿಕಾರಿ ಎಸ್‌.ಜಿ. ಬಿರಾದಾರ ಪಾಲ್ಗೊಳ್ಳಲಿದ್ದು, ಹೆಚ್ಚಿನ ಪ್ರಮಾಣದಲ್ಲಿ ಕಲಾಸಕ್ತರು ಪ್ರದರ್ಶನದಲ್ಲಿ ಭಾಗವಹಿಸಬೇಕು. ಜೂ.23ರಿಂದ ಜೂ.26ರವರೆಗೆ ನಿತ್ಯ ಬೆಳಿಗ್ಗೆ 11:00 ರಿಂದ ಸಂಜೆ 4:00 ಗಂಟೆವರೆಗೆ ಕಲಾಕೃತಿಗಳ ಪ್ರದರ್ಶನ ಇರಲಿದೆ ಎಂದರು. ಪೂಜಾ ನೇರಲೇಕರ ಮಾತನಾಡಿ, ನಾನು ನನ್ನ ಮಗಳು ಇಬ್ಬರೂ ಒಟ್ಟಿಗೆ ತೆಗೆದಿರುವ 40ಕ್ಕೂ ಹೆಚ್ಚು ಪರಿಸರ, ಪ್ರಾಣಿ-ಪಕ್ಷಿ ಇತರೆ ರೀತಿಯ ಕಲಾಕೃತಿಗಳ ಪ್ರದರ್ಶನವನ್ನು ನಾನು ಕಲಿತ ಸಂಸ್ಥೆಯಲ್ಲಿಯೇ ಪ್ರದರ್ಶನಕ್ಕೆ ಇಡಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.