ನೇಕಾರರಿಗೆ ಗುಂಪು ವಿಮಾ ಯೋಜನೆ ಜಾರಿಗೊಳಿಸಿ


Team Udayavani, Aug 24, 2018, 5:24 PM IST

24-agust-23.jpg

ಗದಗ: ನೇಕಾರರಿಗೆ ಗುಂಪು ವಿಮಾ ಯೋಜನೆ ಸಮರ್ಪಕ ಅನುಷ್ಠಾನಗೊಳಿಸಬೇಕು ಮತ್ತು ವಿಶೇಷ ಘಟಕ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಅನುಸರಿಸುತ್ತಿರುವ ವಿಳಂಬ ಧೋರಣೆ ಖಂಡಿಸಿ ಬಿಜೆಪಿ ನೇಕಾರ ಪ್ರಕೋಷ್ಠ ಜಿಲ್ಲಾ ಘಟಕದ ಸದಸ್ಯರು ಗುರುವಾರ ಬೆಟಗೇರಿಯಲ್ಲಿ ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆಯ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಕುರಿತು ಸ್ಥಳೀಯ ಅಧಿಕಾರಿಗಳ ಮೂಲಕ ಬೆಂಗಳೂರಿನ ಕೈಮಗ್ಗ ಮತ್ತು ಜವಳಿ ಇಲಾಖೆಯ ಆಯುಕ್ತರಿಗೆ ಮನವಿ ಸಲ್ಲಿಸಿ, ರಾಜ್ಯ ಮತ್ತು ಕೇಂದ್ರ ಸರಕಾರಗಳು ನೇಕಾರರ ಬದುಕಿನಲ್ಲಿ ಗುಣಾತ್ಮಕ ಬದಲಾವಣೆಗಾಗಿ ಹತ್ತು ಹಲವು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿವೆ. ಆದರೆ, ಅವುಗಳ ಅರ್ಹರಿಗೆ ತಲುಪುತ್ತಿಲ್ಲ. ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಆಸಕ್ತಿ ತೋರದ ಹಿನ್ನೆಲೆಯಲ್ಲಿ ಯೋಜನೆಯ ಲಾಭ ಫಲಾನುಭವಿಗಳ ಕೈಸೇರುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

2011-12ರಿಂದ ಈವರೆಗೆ ವಿಶೇಷ ಘಟಕ ಯೋಜನೆ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಅಕ್ರಮವಾಗಿ ಸ್ಥಿತಿವಂತರು ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ಕೆಲವರು ಹಳೆಯ ಮಗ್ಗಗಳನ್ನು ತೋರಿಸಿ, ಯೋಜನೆಯಡಿ ದೊರೆಯುವ ಆರ್ಥಿಕ ನೆರವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಯೋಜನೆಯಡಿ ದೊರೆಯುವ ಮಗ್ಗಗಳನ್ನು ಮಾರಾಟ ಮಾಡಿ, ಹಳೆ ಮಗ್ಗಳನ್ನೇ ತೋರಿಸುವವರ ಸಂಖ್ಯೆಯೂ ಕಡಿಮೆಯಿಲ್ಲ. ವಿದ್ಯುತ್‌ ಮಗ್ಗಗಳಿಗೆ ಸಿರಿಯಲ್‌ ನಂಬರ್‌ ಇಲ್ಲದ ಕಾರಣ ಈ ರೀತಿಯ ಅಕ್ರಮಗಳಿಗೆ ತಡೆ ಇಲ್ಲದಂತಾಗಿದೆ. ಇಂಥ ಅಕ್ರಮಗಳನ್ನು ತಡೆಯುವಲ್ಲಿ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ನೇಕಾರರ ಗುಂಪು ವಿಮಾ ಯೋಜನೆಯಡಿ ನೇಕಾರರ ಮಕ್ಕಳಿಗೆ ಶಿಷ್ಯ ವೇತನ ದೊರೆಯುತ್ತಿಲ್ಲ. ವಿಮಾ ಕಂತುಗಳನ್ನು ಬಾಕಿಯಿಲ್ಲದಂತೆ ಪಾವತಿಸಿದರೂ, 2-3 ವರ್ಷಗಳಿಂದ ಮಕ್ಕಳಿಗೆ ಶಿಷ್ಯ ವೇತನ ಬಿಡುಗಡೆಯಾಗಿಲ್ಲ ಎಂದು ಅಳಲು ತೋಡಿಕೊಂಡರು.

ಪ್ರಸಕ್ತ ಸಾಲಿನಲ್ಲಿ ವಿಮಾ ಯೋಜನೆಯನ್ನು ಅವೈಜ್ಞಾನಿಕವಾಗಿ ತಿದ್ದುಪಡಿ ಮಾಡಲಾಗಿದೆ. ವಿಮೆಗೆ ನಿಗದಿಗೊಳಿಸಿದ್ದ ವಯೋಮಿತಿಯನ್ನು 60 ರಿಂದ 50ಕ್ಕೆ ಮಿತಿಗೊಳಿಸಿದ್ದು, ನೇಕಾರರ ಮಕ್ಕಳ ವಿದ್ಯಾಭ್ಯಾಸದ ಪ್ರೋತ್ಸಾಹ ಧನವನ್ನು ರದ್ದುಗೊಳಿಸಲಾಗಿದೆ. ಪರಿಷ್ಕರ ಯೋಜನೆಯಿಂದ ಯಾವುದೇ ನೇಕರಾರರಿಗೆ ಅನುಕೂಲತೆಯಿಲ್ಲ ಎಂದು ಕಿಡಿಕಾರಿದ ಪ್ರತಿಭಟನಾಕಾರರು, ಈ ಕೂಡಲೇ ಪರಿಷ್ಕೃತ ಯೋಜನೆಯನ್ನು ಕೈಬಿಟ್ಟು, ಹಿಂದಿನ ಯೋಜನೆಯನ್ನೇ ಯಥಾ ಪ್ರಕಾರ ಮುಂದುವರಿಸಬೇಕು. ನೇಕಾರರ ವಸತಿ ಯೋಜನೆಯನ್ನು ಸಮಪರ್ಕ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಬಿಜೆಪಿ ಪ್ರಕೋಷ್ಠ ಶಹರ ಅಧ್ಯಕ್ಷ ದೇವಪ್ಪ ಗೋಟೂರ, ಜಿಲ್ಲಾ ಸಹ ಸಂಚಾಲಕ ರವಿಕುಮಾರ ಗಂಜಿ, ನಗರಸಭೆ ಸದಸ್ಯ ರಾಘವೇಂದ್ರ ಯಳವತ್ತಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.