ನಾಳೆ ನೇಚರ್‌ ಫ‌ಸ್ಟ್‌ ಇಕೋ ವಿಲೇಜ್‌ ಉದ್ಘಾಟನೆ


Team Udayavani, Apr 23, 2017, 3:33 PM IST

hub5.jpg

ಧಾರವಾಡ: ಯಾವುದೇ ಅತ್ಯಾಧುನಿಕ ಸೌಕರ್ಯಗಳಿಲ್ಲದೆ, ಪರಿಸರ ನಿರ್ಮಿತ ವಸ್ತುಗಳ ಮಧ್ಯದಲ್ಲೇ ಅತ್ಯಂತ ಸುಂದರ ಹಾಗೂ ಸರಳ ಜೀವನ ಬದುಕುವ ಕಲೆಯನ್ನು ನಾಡಿನ ಜನತೆಗೆ ಪರಿಚಯಿಸುವ ಉದ್ದೇಶದಿಂದ ನೇಚರ್‌ ಫಸ್ಟ್‌ ಇಕೋ ವಿಲೇಜ್‌ ತಲೆ ಎತ್ತಿದೆ ಎಂದು ನೇಚರ್‌ ಫಸ್ಟ್‌ ಇಕೋ ವಿಲೇಜ್‌ ಸಂಸ್ಥಾಪಕ ಪಿ.ವಿ. ಹಿರೇಮಠ ಹೇಳಿದರು. 

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡದಿಂದ 14 ಕಿಲೋ ಮೀಟರ್‌ ದೂರದಲ್ಲಿರುವ ಹಳ್ಳಿಗೇರಿ ಕ್ರಾಸ್‌ನಲ್ಲಿ ಎಂಟು ಎಕರೆ ಪ್ರದೇಶದಲ್ಲಿ ತಲೆ ಎತ್ತಿರುವ ನೇಚರ್‌ ಫೆಸ್ಟ್‌ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಇಂತಹ ವಿನೂತನ ಪ್ರಯೋಗ ಮಾಡಲಾಗಿದೆ.

ಸುಸ್ಥಿರ ಬದುಕಿನ ಮಹತ್ವ ಸಾರುವ ಹಾಗೂ ಪ್ರತಿಯೊಬ್ಬರಿಗೂ ಪ್ರಾಯೋಗಿಕವಾಗಿ ಪರಿಸರ ಸ್ನೇಹಿ ಜೀವನ ಅಳವಡಿಸಿಕೊಳ್ಳಲು ಅವಶ್ಯವಿರುವ ಪರಿಸರ ಶಿಕ್ಷಣ, ಅದರ ಬಳಕೆಗೆ ಬೇಕಾದ ಮಾನದಂಡಗಳನ್ನು ಈ ನೇಚರ್‌ ಫಸ್ಟ್‌ ಇಕೋ ವಿಲೇಜ್‌ ಒಳಗೊಂಡಿದೆ ಎಂದರು. 

ನಮ್ಮ ಸುತ್ತಮುತ್ತ ಲಭ್ಯವಿರುವ ಅನೇಕ ಸಂಪನ್ಮೂಲ ಬಳಸಿಕೊಂಡು ಅದರ ಮೂಲಕ ಅತಿ ಕಡಿಮೆ ಖರ್ಚಿನಲ್ಲಿ ಪರಿಸರ ಸ್ನೇಹಿ ಜೀವನ ನಡೆಸುವುದು. ಅದರಲ್ಲೂ ವಿಶೇಷವಾಗಿ ನಾವು ದಿನನಿತ್ಯ ಉಪಯೋಗಿಸಿ ಬಿಟ್ಟ ತರಕಾರಿ ಹಾಗೂ ಮುಸರೆಯಿಂದ ಜೈವಿಕ ಗೊಬ್ಬರ ತಯಾರಿಸುವುದು,

ಅತಿ ಕಡಿಮೆ ನೀರಿನಲ್ಲಿ ಕೃಷಿ, ಮಳೆ ನೀರಿನ ಮರು ಬಳಕೆ, ವಿದ್ಯುತ್‌ ಮೇಲೆ ಹೆಚ್ಚು ಅವಲಂಬಿತರಾಗದೆ ಜೈವಿಕ ಇಂಧನ ಹಾಗೂ ಸೋಲಾರ್‌ ಬಳಕೆ ಪ್ರಮಾಣ ಹೆಚ್ಚಿಸುವುದು ಸೇರಿದಂತೆ ಒಬ್ಬ ಮನುಷ್ಯ ನಿಸರ್ಗದ ಮಧ್ಯೆ, ನಿಸರ್ಗಕ್ಕೆ ತೊಂದರೆ ಕೊಡದಂತೆ ಹೇಗೆಲ್ಲಾ ಬದುಕು ಕಟ್ಟಿಕೊಳ್ಳಬಲ್ಲ ಎಂಬ ಮಾದರಿಯನ್ನು ಈ ನೇಚರ್‌ ಫಸ್ಟ್‌ ಇಕೋ ವಿಲೇಜ್‌ನಲ್ಲಿ ರೂಪಿಸಲಾಗಿದೆ ಎಂದು ವಿವರಿಸಿದರು. 

ಔಷಧಿ ವನ: ಸುಮಾರು 135 ಬಲು ಅಪರೂಪದ ಔಷಧಿಧಿ ಗಿಡಗಳನ್ನು ಜನರಿಗೆ ಇಕೋ ವಿಲೇಜ್‌ನಲ್ಲಿ ಪರಿಚಯಿಸಲಾಗುವುದು. ಅವುಗಳ ಮಹತ್ವ, ಬಳಕೆ ವಿಧಾನ, ಅವುಗಳ ಪಾಲನೆ, ಪೋಷಣೆ ಮಾಹಿತಿ ನೀಡಲಾಗುವುದು. ಅದೇ ರೀತಿ ಇತ್ತೀಚಿನ ದಿನಗಳಲ್ಲಿ ಜನರಿಂದ ಕಣ್ಮರೆಯಾಗುತ್ತಿರುವ ಬೇರೆ ಬೇರೆ 120 ಹಣ್ಣಿನ ಗಿಡಗಳನ್ನು ಇಲ್ಲಿ ಬೆಳೆಯಲಾಗಿದೆ ಎಂದರು. 

ತರಕಾರಿ ಕೈತೋಟ, ಜೈವಿಕ ಈಜುಗೋಳ, ಸಾವಯವ ಆಹಾರ ಪದ್ಧತಿ ಬಳಕೆ, ಪರಿಸರದತ್ತ ಜನರನ್ನು ಸೆಳೆಯುವುದಕ್ಕೆ ಅಗತ್ಯವಾದ ಎಲ್ಲಾ ಪ್ರಯೋಗಗಳನ್ನು ಇಲ್ಲಿ ಮಾಡಲಾಗಿದೆ ಎಂದರು. ಪರಿಸರ ಶಾಲೆ: ಇಲ್ಲಿ ಬರುವವರಿಗೆ ಒಂದು ಗಂಟೆಗಳ ಕಾಲ ಪರಿಸರ ಸ್ನೇಹಿ ತಿಳಿವಳಿಕೆ ನೀಡಲಾಗುವುದು.

ಶಾಲೆ ಮಕ್ಕಳಿಗೆ ಭೂಮಿಗೆ ಬೀಜ ಬಿತ್ತುವ ವಿಧಾನ, ಸಸಿ ನೆಡುವ ವಿಧಾನ ಸ್ವತಃ ಅವರೇ ಪ್ರಾಯೋಗಿಕವಾಗಿ ಮಾಡಿ ನೋಡಿ ನಲಿಯುವ ಅವಕಾಶ, ಜೊತೆಗೆ ಯಾವ್ಯಾವ ಬೀಜಗಳು ಭೂಮಿ ಮೇಲೆ ಹಾಗೂ ಒಳಗೆ ಬೆಳೆಯಲಾಗುತ್ತದೆ ಎಂಬುದರ ಬಗ್ಗೆ ತಿಳಿವಳಿಕೆ ನೀಡಲಾಗುವುದು.

ಹುಲ್ಲು ಹಾಸಿಗೆ ಹಾಗೂ ಈಜುಕೊಳದ ಸುತ್ತ ಕುಳಿತು ಸುಮಾರು 500 ಜನ ಕಾರ್ಯಕ್ರಮ ವೀಕ್ಷಿಸುವ ಸೌಲಭ್ಯ ಕಲ್ಪಿಸಲಾಗಿದೆ  ಎಂದರು. ಪ್ರಕಾಶ ಗೌಡರ, ಚಂದ್ರಶೇಖರ ಬೈರಪ್ಪನವರ, ಉಪಾಧ್ಯಕ್ಷರು, ಶಿವಾಜಿ ಸೂರ್ಯವಂಶಿ, ಅಸ್ಲಂಜಹಾನ ಅಬ್ಬಿಹಾಳ, ಅನೀಲ ಅಳ್ಳೊಳ್ಳಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.  

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.