ಉಸಿರಾಡಲೂ ಬಿಡದೆ ಐಟಿ ಬುಲಾವ್: ಡಿಕೆಶಿ
ಅಧಿಕಾರ ಅವರದ್ದಿದೆ,ಹೇಗೆ ಬೇಕು ಹಾಗೆ ಮಾಡಲಿ; ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಗ್ಗೆ ಎಐಸಿಸಿಯಿಂದ ಸೂಚನೆ ಬಂದಿದೆ
Team Udayavani, Dec 2, 2019, 8:30 PM IST
ಹುಬ್ಬಳ್ಳಿ: ಆದಾಯ ತೆರಿಗೆ ಇಲಾಖೆಯವರು ನೋಟಿಸ್ ನೀಡಿದ್ದಾರೆ. ನನಗೆ ಸ್ವಲ್ಪ ಉಸಿರಾಡಲು ಬಿಡಿ ಎಂದು ಕೇಳಿಕೊಂಡಿದ್ದೆ, ಆದರೆ ಕೂಡಲೇ ಬನ್ನಿ ಎಂದು ತಿಳಿಸಿದ್ದರಿಂದ ಬೆಂಗಳೂರಿಗೆ ತೆರಳುತ್ತಿದ್ದೇನೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು ಕಾನೂನು ಅವರ ಕೈಯಲ್ಲಿದೆ, ಏನು ಬೇಕಾದರೂ ಮಾಡಬಹುದು. ಉಪಚುನಾವಣೆಯಲ್ಲಿ ಕಾಗವಾಡ ಚುನಾವಣಾ ಪ್ರಚಾರಕ್ಕೆ ಅನುಮತಿ ಕೊಟ್ಟಿಲ್ಲ. ಅ ಧಿಕಾರ ಅವರದ್ದಿದೆ, ಹೇಗೆ ಬೇಕು ಹಾಗೆ ಮಾಡಲಿ. ದುಡ್ಡಿನ ಮೇಲೆಯೇ ರಾಜಕಾರಣ ಮಾಡಲು ಸಾಧ್ಯವಿಲ್ಲ, ಮತದಾರರು ಬಿಜೆಪಿ ಬಳಿ ಹಣ ಪಡೆದುಕೊಂಡು ಅನರ್ಹರ ವಿರುದ್ಧ ಮತ ಹಾಕುತ್ತಾರೆ. ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ವಿಚಾರದಲ್ಲಿ ಎಲ್ಲರೂ ಅವರದೇ ರೀತಿ ವ್ಯಾಖ್ಯಾನ ಮಾಡುತ್ತಿದ್ದಾರೆ. ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಕುರಿತು ಎಐಸಿಸಿಯಿಂದ ಕೆಲ ಸೂಚನೆಗಳು ಬಂದಿದ್ದು, ನೋಡೋಣ ಎಂದರು.
ಎಚ್ಡಿಕೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಹವಾಮಾನ ವೈಪರೀತ್ಯದಿಂದ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು. ಬೆಳಗಾವಿಯಿಂದ ಚಿಕ್ಕಬಳ್ಳಾಪುರಕ್ಕೆ ಹೊರಟ್ಟಿದ್ದ ಕುಮಾರಸ್ವಾಮಿ ಅವರು ಕೆಲಹೊತ್ತು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶ್ರಾಂತಿ ಪಡೆದು ನಂತರ ಪ್ರಯಾಣ ಬೆಳೆಸಿದರು. ಇದೇ ಸಮಯದಲ್ಲಿ ಡಿ.ಕೆ.ಶಿವಕುಮಾರ ಬೆಂಗಳೂರಿಗೆ ತೆರಳಬೇಕಿತ್ತು. ಅವರು ಕೂಡ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿ.ಕೆ ಶಿವಕುಮಾರ ಪರಸ್ಪರ ಭೇಟಿಯಾಗಿ ಪ್ರಸಕ್ತ ರಾಜಕೀಯ ವಿದ್ಯಮಾನಗಳು ಮತ್ತು ಉಪಚುನಾವಣೆ ಕುರಿತು ಚರ್ಚಿಸಿದರು. ಇಬ್ಬರೂ ನಾಯಕರು ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಚರ್ಚೆ ನಡೆಸಿದರು. ನಂತರ ಪ್ರತ್ಯೇಕ ಹೆಲಿಕಾಪ್ಟರ್ಗಳ ಮೂಲಕ ಪ್ರಯಾಣ ಬೆಳೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ