ಪ್ರಾಮಾಣಿಕ ಸೇವೆಯಿಂದ ಇಲಾಖೆ ಗೌರವ ಹೆಚ್ಚಳ
ಒಂದೇ ಕುಟುಂಬದವರಂತೆ ಇದ್ದಾಗ ಮಾತ್ರ ಸುಗಮವಾಗಿ ಕಾರ್ಯ ಸಾಗಲು ಸಾಧ್ಯ
Team Udayavani, Jul 3, 2019, 12:05 PM IST
ಅಳ್ನಾವರ: ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಯನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಅಳ್ನಾವರ: ಕೆಲಸದ ಒತ್ತಡದ ನಡುವೆಯೂ ಜನರೊಂದಿಗೆ ಬಾಂಧವ್ಯವನ್ನು ಇಟ್ಟುಕೊಂಡು ಉತ್ತಮ ಸೇವೆ ನೀಡುವ ಪೊಲೀಸ್ ಸಿಬ್ಬಂದಿ ಕಾರ್ಯ ಶ್ಲಾಘನೀಯ ಎಂದು ತರಬೇತಿ ಅವಧಿಯ ಡಿವೈಎಸ್ಪಿ ಶಿವಾನಂದ ಕಟಗಿ ಹೇಳಿದರು.
ಸ್ಥಳೀಯ ಠಾಣೆಯಲ್ಲಿ ಸೇವೆ ಸಲ್ಲಿಸಿ ಪದೋನ್ನತಿ ಹೊಂದಿದ ಇಬ್ಬರು ಹಾಗೂ ವರ್ಗಾವಣೆಯಾಗುತ್ತಿರುವ ನಾಲ್ವರು ಸಿಬ್ಬಂದಿಗೆ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು. ಪೊಲೀಸರು ಕುಟುಂಬದವರಿಗಿಂತ ಹೆಚ್ಚಾಗಿ ಜನರೊಂದಿಗೆ ಬೆರೆತು ಕೆಲಸ ಮಾಡುವುದೇ ಹೆಚ್ಚು. ಪ್ರಾಮಾಣಿಕವಾಗಿ ಸಲ್ಲಿಸುವ ಸೇವೆಯು ಇಲಾಖೆಯ ಗೌರವ ಹೆಚ್ಚಿಸುತ್ತದೆ ಎಂದರು.
ಪಿಎಸ್ಐ ಅನಿಲಕುಮಾರ ಮಾತನಾಡಿ, ಪೊಲೀಸರು ಒಂದೇ ಕುಟುಂಬದವರಂತೆ ಇದ್ದಾಗ ಮಾತ್ರ ಕಾರ್ಯ ಸುಗಮವಾಗಿ ಸಾಗಲು ಸಾಧ್ಯವಿದೆ. ಬಿಡುವಿಲ್ಲದ ಸೇವೆ ಪೊಲೀಸರದ್ದಾಗಿರುತ್ತದೆ. ಅವರ ಕೆಲಸದಲ್ಲಿ ಕುಟುಂಬದ ಸದಸ್ಯರ ಪಾತ್ರವೂ ಬಹುಮುಖ್ಯವಾಗಿರುತ್ತದೆ ಎಂದು ಹೇಳಿದರು.
ಸತ್ತಾರ ಬಾತಖಂಡೆ, ಲಿಂಗರಾಜ ಮೂಲಿಮನಿ, ತಮೀಮ ತೇರಗಾಂವ ಮಾತನಾಡಿದರು. ರಮೇಶ ಕುನ್ನೂರಕರ, ಶಫೀಕ್ ಖತೀಬ ಮತ್ತು ಸಿಬ್ಬಂದಿ ಹಾಜರಿದ್ದರು.
ಪದೋನ್ನತಿ ಹೊಂದಿದ ಸಚಿನ ಪಾಟೀಲ, ರವಿ ಕಮದೊಡ ಹಾಗೂ ಬೇರೆ ಠಾಣೆಗೆ ವರ್ಗಾವಣೆಗೊಂಡ ಎಂ.ಆರ್. ಮಂಟೂರ, ಬಿ.ಎನ್. ಅಷ್ಟಗಿ, ಎಂ.ಎನ್. ಜೋಡಗೇರಿ, ಸೋಮನ್ನ ಹುಚ್ಚನ್ನವರ ಅವರನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ