ಬೆಂಗೇರಿಯ ತಿರಂಗಾಕ್ಕೆ ಹೆಚ್ಚಿದ ಬೇಡಿಕೆ


Team Udayavani, Jan 25, 2020, 11:05 AM IST

Huballi-tdy-4

ಹುಬ್ಬಳ್ಳಿ: ರಾಷ್ಟ್ರಧ್ವಜಕ್ಕೆ ಈ ಬಾರಿ ಬೇಡಿಕೆ ಹೆಚ್ಚಿದೆ. ವಿಶೇಷವಾಗಿ ಕಾರು ಸೇರಿದಂತೆ ವಿವಿಧ ವಾಹನಗಳಿಗೆ ಹಾಕುವ, ಟೇಬಲ್‌ ಮೇಲೆ ಇರಿಸುವ ರಾಷ್ಟ್ರಧ್ವಜಗಳಿಗೆ ಹೆಚ್ಚಿನ ಬೇಡಿಕೆ ಬಂದಿದ್ದು, ರಾಷ್ಟ್ರಧ್ವಜ ನಿರ್ಮಾಣ ಕಾರ್ಯ ಬೆಂಗೇರಿಯ ಖಾದಿ ಮತ್ತು ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಭರದಿಂದ ಸಾಗಿದೆ.

ಬಿಐಎಸ್‌ ಪ್ರಮಾಣೀಕೃತ ರಾಷ್ಟ್ರಧ್ವಜ ತಯಾರು ಮಾಡುವ ಈ ಸಂಸ್ಥೆಯ ತಯಾರಿಸ್ಪಟ್ಟ ರಾಷ್ಟ್ರಧ್ವಜವೇ ದೆಹಲಿಯ ಕೆಂಪುಕೋಟೆ ಮೇಲೆ ಹಾಗೂ ಸಂಸತ್‌ ಭವನ ಮೇಲೆ ಹಾರಾಡುತ್ತಿವೆ. ಇಲ್ಲಿ ತಯಾರಾದ ವಿವಿಧ ಅಳತೆಯ ರಾಷ್ಟ್ರಧ್ವಜಗಳು ದೇಶ-ವಿದೇಶಗಳಿಗೆ ರವಾನೆಯಾಗುತ್ತಿವೆ. ಸ್ವಾತಂತ್ರೊತ್ಸವ, ಗಣರಾಜ್ಯೋತ್ಸವದಂತಹ ರಾಷ್ಟ್ರೀಯ ಹಬ್ಬದ ಸಂದರ್ಭದಲ್ಲಿ ರಾಷ್ಟ್ರಧ್ವಜಗಳಿಗೆ ಎಲ್ಲಿಲ್ಲದ ಬೇಡಿಕೆ ಬರುತ್ತದೆ. ಪ್ಲಾಸ್ಟಿಕ್‌ ರಾಷ್ಟ್ರಧ್ವಜ ಬಳಕೆ ನಿಷೇಧಿಸಿದ ಹಿನ್ನೆಲೆಯಲ್ಲಿ ಸಣ್ಣ ಅಳತೆ ರಾಷ್ಟ್ರಧ್ವಜಗಳಿಗೂ ಬೇಡಿಕೆ ಹೆಚ್ಚಿದೆ. ಕಳೆದ ವರ್ಷ ಬೆಂಗೇರಿ ಖಾದಿ ಮತ್ತು ಗ್ರಾಮೋದ್ಯೋಗ ಸಂಸ್ಥೆಯಿಂದ ಒಟ್ಟಾರೆ 3 ಕೋಟಿ ರೂ. ಮೌಲ್ಯದ ರಾಷ್ಟ್ರಧ್ವಜ ಮಾರಾಟವಾಗಿದ್ದರೆ, ಈ ಬಾರಿ 3.50 ಕೋಟಿ ರೂ. ಮೌಲ್ಯದ ರಾಷ್ಟ್ರಧ್ವಜ ವಹಿವಾಟು ಸಾಧ್ಯತೆ ಇದ್ದು, ಈಗಾಗಲೇ 2.80 ಕೋಟಿ ರೂ. ವಹಿವಾಟು ಆಗಿದೆ.

ರಾಷ್ಟ್ರ ಧ್ವಜವನ್ನು ಎಲ್ಲೆಂದರಲ್ಲಿ ತಯಾರಿಸುವಂತಿಲ್ಲ. ರಾಷ್ಟ್ರ ಧ್ವಜಕ್ಕೆ ತನ್ನದೆಯಾದ ನಿಯಮಗಳಿವೆ. ಹುಬ್ಬಳ್ಳಿ ಬೆಂಗೇರಿಯ ಖಾದಿ ಗ್ರಾಮೋದ್ಯೋಗ ಸಂಸ್ಥೆ ರಾಷ್ಟ್ರಧ್ವಜ ನಿರ್ಮಾಣಕ್ಕೆ ಭಾರತೀಯ ಮಾನಕ ಸಂಸ್ಥೆ (ಬಿಐಎಸ್‌)ಯಿಂದ ಮಾನ್ಯತೆ ಪಡೆದ ದೇಶದ ಏಕೈಕ ಸಂಸ್ಥೆಯಾಗಿದೆ.

ದೇಶದ ಎಲ್ಲ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೂ ಅಧಿಕೃತವಾಗಿ ರಾಷ್ಟ್ರಧ್ವಜ ಸರಬರಾಜು ಮಾಡುತ್ತಿದೆ. ಕೇಂದ್ರದಲ್ಲಿ 9 ಅಳತೆಯ ರಾಷ್ಟ್ರಧ್ವಜಗಳನ್ನು ನಿರ್ಮಾಣ ಮಾಡಲಾಗುತ್ತದೆ. ಧ್ವಜ ಸಂಹಿತೆಗೆ ಧಕ್ಕೆ ಬಾರದಂತೆ ಘನತೆ ಕಾಪಾಡಿಕೊಂಡು ರಾಷ್ಟ್ರಧ್ವಜ ತಯಾರು ಮಾಡಲಾಗುತ್ತಿದೆ. ಹತ್ತಿ ಖರೀದಿಯಿಂದ ಆರಂಭಿಸಿ ನೂಲು ನೇಯ್ದು ಬಟ್ಟೆಯಾಗಿ ಹೋಲಿಗೆ ಹಾಕಿ, ಅಶೋಕ ಚಕ್ರ ಲಾಂಛನ ಅಳವಡಿಸಿ ರಾಷ್ಟ್ರ ಧ್ವಜ ಸಿದ್ಧವಾಗುವಷ್ಟರಲ್ಲಿ 15-18 ಬಾರಿ ಪರಿಶೀಲನೆಗೆ ಒಳಪಡುತ್ತದೆ.

1×1, 1/2, 2×3, 3×4 1/2, 4×6, 6×9, 8×12, 14×21 ಅಡಿ ಅಳತೆಯ ರಾಷ್ಟ್ರಧ್ವಜಗಳನ್ನು ಇಲ್ಲಿ ತಯಾರಿಸಲಾಗುತ್ತದೆ. ಧ್ವಜಾರೋಹಣಕ್ಕೆ ಹೆಚ್ಚು ಬೇಡಿಕೆ ಬರುವುದು 2x 3 ಅಡಿ ಅಳತೆ ರಾಷ್ಟ್ರಧ್ವಜಕ್ಕೆ. ಎಲ್ಲ ಕಚೇರಿಗಳ ಮೇಲೆ, ಸರಕಾರಿ ಹಾಗೂ ಸಂಘ-ಸಂಸ್ಥೆಗಳ ಮೇಲೆ ಹಾರಾಡುವ ರಾಷ್ಟ್ರಧ್ವಜ ಈ ಅಳತೆಯದ್ದಾಗಿದೆ. 3 ರೂ.ಗಳ ಪಾಕೇಟ್‌ ಧ್ವಜದಿಂದ ಹಿಡಿದು 14×21 ಅಡಿ ಅಳತೆಯ 24 ಸಾವಿರ ರೂ.ವರೆಗಿನ ಧ್ವಜ ಇಲ್ಲಿ ತಯಾರಾಗುತ್ತದೆ.

ಸಂಘದ ಉತ್ಪಾದನೆ ಪ್ರತಿವರ್ಷ ನಿರೀಕ್ಷೆಗೂ ಮೀರಿ ಏರಿಕೆಯಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್‌, ಟೆರ್ರಿಕಾಟ್‌, ಬಟ್ಟೆಯಿಂದ ತಯಾರಿಸಲಾದ ಧ್ವಜಗಳು ಸಂಘದ ರಾಷ್ಟ್ರಧ್ವಜಕ್ಕೆ ಪೈಪೋಟಿ ನೀಡುತ್ತಿವೆ. ರಾಜ್ಯ-ಕೇಂದ್ರ ಸರ್ಕಾರ ಕಳಪೆ ಹಾಗೂ ನಕಲಿ ಧ್ವಜಗಳಿಗೆ ಕಡಿವಾಣ ಹಾಕಿದರೆ ನಮ್ಮ ರಾಷ್ಟ್ರಧ್ವಜ ನಿರ್ಮಿಸುವ ಕೇಂದ್ರ ಮತ್ತಷ್ಟು ಲಾಭ ಗಳಿಸಲಿದೆ. ಶಿವಾನಂದ ಮಠಪತಿ, ಗ್ರಾಮೋದ್ಯೋಗ ಸಂಸ್ಥೆ ಕಾರ್ಯದರ್ಶಿ

 

-ಬಸವರಾಜ ಹೂಗಾರ

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.