ಭಾಷಾನುವಾದ ಕ್ಷೇತ್ರಕ್ಕೆ ಹೆಚ್ಚಿದೆ ಬೇಡಿಕೆ: ಪ್ರೊ| ಕಟ್ಟಿಮನಿ

ಸಾಮಾಜಿಕ ವಲಯಕ್ಕೆ ಸಾಹಿತ್ಯದ ಕೊಡುಗೆ ಬಹಳ ಇದೆ

Team Udayavani, Mar 25, 2023, 5:10 PM IST

ಭಾಷಾನುವಾದ ಕ್ಷೇತ್ರಕ್ಕೆ ಹೆಚ್ಚಿದೆ ಬೇಡಿಕೆ: ಪ್ರೊ| ಕಟ್ಟಿಮನಿ

ಧಾರವಾಡ: ಭಾಷಾ ಸಾಹಿತ್ಯವನ್ನು ಮಾತ್ರ ವಿದ್ಯಾರ್ಥಿಗಳಿಗೆ ನೀಡುತ್ತಿದ್ದೇವೆ ಹೊರತು ಭಾಷಾ ಅಧ್ಯಯನದಲ್ಲಿ ವೈವಿಧ್ಯತೆ ಇಲ್ಲವಾಗಿದೆ ಎಂದು ಆಂಧ್ರ ಪ್ರದೇಶದ ಬುಡಕಟ್ಟು ವಿವಿ ಕುಲಪತಿ ಪ್ರೊ| ಟಿ.ವಿ. ಕಟ್ಟಿಮನಿ ಹೇಳಿದರು.

ಕವಿವಿ ಮಾನಸೋಲ್ಲಾಸ ಸಭಾಂಗಣದಲ್ಲಿ ಕವಿವಿ ಹಿಂದಿ ಅಧ್ಯಯನ ವಿಭಾಗ ಮತ್ತು ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಸಹಯೋಗದಲ್ಲಿ ಅಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ “ಸ್ವಾತಂತ್ರ್ಯ ಸಂಗ್ರಾಮಕ್ಕೆ ಭಾರತೀಯ ಸಾಹಿತ್ಯದ ಕೊಡುಗೆ’ ಎಂಬ ವಿಷಯದ ಕುರಿತು ಹಮ್ಮಿಕೊಂಡಿರುವ ಎರಡು ದಿನಗಳ ನಾಲ್ಕನೇ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಭಾಷಾ ಅನುವಾದ ಕ್ಷೇತ್ರಕ್ಕೆ ಹೆಚ್ಚಿನ ಬೇಡಿಕೆ ಇದೆ. ಆದರೆ ಭಾರತೀಯ ಭಾಷೆಯನ್ನು ಅಧ್ಯಯನ ಮಾಡಿದವರಿಗೆ ಉದ್ಯೋಗ ದೊರೆಯುತ್ತಿಲ್ಲ. ಭಾಷಾ ಶಿಕ್ಷಕರ ಸ್ಥಿತಿ ಅಷ್ಟೊಂದು ಉತ್ತಮವಾಗಿಲ್ಲ. ಆದ್ದರಿಂದ ಭಾಷಾ ಅಧ್ಯಯನದಲ್ಲಿ ವೈವಿಧ್ಯತೆ ಅಳವಡಿಸಿಕೊಳ್ಳಬೇಕಾಗಿದೆ ಎಂದರು.

ರಾಷ್ಟ್ರೀಯ ಹೊಸ ಶಿಕ್ಷಣ ನೀತಿಗೆ ಅನುಗುಣವಾಗಿ ಬಹುಶಿಸ್ತೀಯ ಕೌಶಲ್ಯ ಆಧಾರಿತ ಪಠ್ಯಕ್ರಮ ಹೊಂದಬೇಕಾಗಿದೆ. ಇಂದು ಕೃತಕ ಬುದ್ಧಿಮತ್ತೆಯಿಂದ ಅನುವಾದ ಮಾಡಲಾಗುತ್ತದೆ. ತಂತ್ರಜ್ಞಾನ ಆಧಾರಿತ ಶಿಕ್ಷಣ ಹೆಚ್ಚಿನ ಮಹತ್ವ ಪಡೆದಿದೆ. ಪ್ರಸ್ತುತ ಸ್ಟಾರ್ಟ್‌ಅಪ್‌ ಉದ್ಯಮಕ್ಕೆ ತಕ್ಕಂತೆ ವಿದ್ಯಾರ್ಥಿಗಳನ್ನು ರೂಪಿಸಬೇಕಾಗಿದೆ.

ವಿದ್ಯಾರ್ಥಿಗಳು-ಶಿಕ್ಷಕರು ವಿಷಯ ಆಧಾರಿತ ಜ್ಞಾನವನ್ನು ವೃದ್ಧಿಗೊಳಿಸಬೇಕಾಗಿದೆ. ವಿಶೇಷವಾದ ಸೃಜನಶೀಲ ಚಿಂತನೆಯನ್ನು ಶೈಕ್ಷಣಿಕ ಕ್ಷೇತ್ರದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು. ಕೊಲ್ಹಾಪುರದ ವಿಮರ್ಶಕ ಪ್ರೊ| ಅರ್ಜುನ ಚವ್ಹಾಣ ಮಾತನಾಡಿ, ಸಾಹಿತ್ಯ ಬೋಧನೆ ಅಧ್ಯಯನ ಮಾಡುವ ಅವಶ್ಯಕತೆ ಇದೆ. ಸಾಹಿತ್ಯದಿಂದ ದೇಶದ ಇತಿಹಾಸ ಅರಿಯಲು ಸಾಧ್ಯ ಎಂದರು.

ಬಿಹಾರದ ರಾಂಚಿಯ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕುಮಾರ ಮನಿಷ್‌ ಅರವಿಂದ ಮಾತನಾಡಿ, ಸಾಹಿತ್ಯ ವಿವಿಧ ಕ್ಷೇತ್ರದಲ್ಲಿ ಸಕ್ರಿಯವಾಗಿದೆ. ಸಾಹಿತ್ಯ ಒಂದು ಪ್ರಬಲ ಮಾಧ್ಯಮವಾಗಿದೆ. ಸಾಮಾಜಿಕ ವಲಯಕ್ಕೆ ಸಾಹಿತ್ಯದ ಕೊಡುಗೆ ಬಹಳ ಇದೆ. ಸಾಹಿತ್ಯವಲಯ ರಾಷ್ಟ್ರದ ಏಕತೆ ಸೌಹಾರ್ದತೆಯನ್ನು ಸೂಚಿಸುತ್ತದೆ ಎಂದು ಹೇಳಿದರು.

ಜಪಾನ್‌ ಮಾಧ್ಯಮ ತಜ್ಞ ಡಾ| ಅಶ್ವಿ‌ನಿ ಕುಮಾರ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ನೀಡುವಲ್ಲಿ ಬರಹಗಾರ, ಸಂಗೀತಗಾರ ಮತ್ತು ಹೋರಾಟಗಾರರನ್ನು ನೆನೆಯುವುದು ಅವಶ್ಯಕವಾಗಿದೆ. ಭಾಷೆಗಳ ಮೂಲಕ ದೇಶವನ್ನು ಜೋಡಿಸಬಹುದಾಗಿದೆ ಎಂದರು.

ಸಮ್ಮೇಳನದ ಸ್ಮರಣ ಸಂಚಿಕೆ ಮತ್ತು ಹಿಂದಿ ಭಾಷೆಯ ಶಿಕ್ಷಕರು ರಚಿಸಿದ ಗ್ರಂಥವನ್ನು ಬಿಡುಗಡೆ ಮಾಡಲಾಯಿತು. ಕವಿವಿ ಪ್ರಭಾರಿ ಕುಲಪತಿ ಪ್ರೊ| ಬಿ.ಬಸವನಗೌಡ ಅಧ್ಯಕ್ಷತೆ ವಹಿಸಿದ್ದರು. ಹಿಂದಿ ವಿಭಾಗದ ಮುಖ್ಯಸ್ಥರಾದ ಪ್ರೊ| ಎಸ್‌.ಕೆ. ಪವಾರ, ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಕಾರ್ಯದರ್ಶಿ ಪ್ರೊ| ಎಸ್‌.ಬಿ.ಹಿಂಚಿಗೇರಿ, ವಿಶ್ರಾಂತ ಸಾಲಿಸಿಟರ್‌ ಜನರಲ್‌ ಅರುಣ ಜೋಶಿ, ಕವಿವಿ ಕುಲಸಚಿವ ಯಶಪಾಲ್‌ ಕ್ಷೀರಸಾಗರ, ಮೌಲ್ಯಮಾಪನ ಕುಲಸಚಿವ ಪ್ರೊ| ಸಿ.ಕೃಷ್ಣಮೂರ್ತಿ, ಡಾ| ಜಾಕೀರ ಗುಳಗುಂಡಿ ಇನ್ನಿತರರಿದ್ದರು.

ಟಾಪ್ ನ್ಯೂಸ್

amithab RAJANIKANTH

32 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ ಬಿಗ್‌ ಬಿ – ತಲೈವಾ

1rewe

Vijayapura: ಕರಿ ಓಟದ ಹೋರಿ ಇರಿತ; 8 ಜನರಿಗೆ ಗಾಯ

1-sadsadsad

WTC title ; ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್

arrest-25

Mumbai; 1 ಕೋಟಿ ರೂ.ಮೌಲ್ಯದ ಮಾದಕ ವಸ್ತು ಸಹಿತ ವಿದೇಶಿ ವ್ಯಕ್ತಿ ಸೆರೆ

1-wewerrwe

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

1-sadadsad

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತ ಮಾಡಿದ ಚಿತ್ರತಂಡ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತಮಾಡಿದ ಚಿತ್ರತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ: ಆಧಾರ್‌ ಕೇಂದ್ರಗಳಿಗೆ ಮುಗಿಬಿದ್ದ ಜನತೆ

ಹುಬ್ಬಳ್ಳಿ: ಆಧಾರ್‌ ಕೇಂದ್ರಗಳಿಗೆ ಮುಗಿಬಿದ್ದ ಜನತೆ

ಹುಬ್ಬಳ್ಳಿ: ಕಸ ಎಸೆಯುವವರ ವಿರುದ್ಧ ದಂಡಾಸ್ತ್ರಕ್ಕೆ ವಿಕ್ರಂ ತಂಡ

ಹುಬ್ಬಳ್ಳಿ: ಕಸ ಎಸೆಯುವವರ ವಿರುದ್ಧ ದಂಡಾಸ್ತ್ರಕ್ಕೆ ವಿಕ್ರಂ ತಂಡ

ಕುಂದಗೋಳದಲ್ಲಿ ನಾಡಿದ್ದು ಕರಿಭಂಡಿ ಉತ್ಸವ ವೈಭವ; ಉತ್ಸವ ನೋಡೋದೇ ಭಾಗ್ಯ

ಜೂ.5ರಂದು ಕುಂದಗೋಳದಲ್ಲಿ ಕರಿಭಂಡಿ ಉತ್ಸವ ವೈಭವ; ಉತ್ಸವ ನೋಡೋದೇ ಭಾಗ್ಯ

Vijayapur: ಮಲೀನವಾಗುತ್ತಿರುವ ಕೃಷ್ಣೆ ಕಾಪಾಡಿ; ತ್ಯಾಜ್ಯ ವಸ್ತು ಎಸೆಯಬೇಡಿ

Vijayapur: ಮಲೀನವಾಗುತ್ತಿರುವ ಕೃಷ್ಣೆ ಕಾಪಾಡಿ; ತ್ಯಾಜ್ಯ ವಸ್ತು ಎಸೆಯಬೇಡಿ

ಜಗದೀಶ್ ಶೆಟ್ಟರ್ ಅವರ ಆಗಮನ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಕ್ತಿ ತಂದಿದೆ: ಡಿ.ಕೆ.ಶಿವಕುಮಾರ್

ಜಗದೀಶ್ ಶೆಟ್ಟರ್ ಅವರ ಆಗಮನ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಕ್ತಿ ತಂದಿದೆ: ಡಿ.ಕೆ.ಶಿವಕುಮಾರ್

MUST WATCH

udayavani youtube

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

ಹೊಸ ಸೇರ್ಪಡೆ

amithab RAJANIKANTH

32 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ ಬಿಗ್‌ ಬಿ – ತಲೈವಾ

1rewe

Vijayapura: ಕರಿ ಓಟದ ಹೋರಿ ಇರಿತ; 8 ಜನರಿಗೆ ಗಾಯ

1-adsd

Guarantee Scheme ಟೀಕಿಸಿ ಸ್ಟೇಟಸ್; ಶಿಕ್ಷಕ- ಶಿಕ್ಷಕಿಗೆ ನೋಟಿಸ್

1-sadsadsad

WTC title ; ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್

arrest-25

Mumbai; 1 ಕೋಟಿ ರೂ.ಮೌಲ್ಯದ ಮಾದಕ ವಸ್ತು ಸಹಿತ ವಿದೇಶಿ ವ್ಯಕ್ತಿ ಸೆರೆ