ಇಂದಿನಿಂದ ಭಾರತ-ಲಂಕಾ ಎ ತಂಡಗಳ ಟೆಸ್ಟ್‌

•ರಾಜನಗರ ಕ್ರೀಡಾಂಗಣ ಸನ್ನದ್ಧ; ಜೂ.3ರವರೆಗೆ ಪಂದ್ಯ•1 ಟೆಸ್ಟ್‌, 2 ಏಕದಿನ ಪಂದ್ಯಕ್ಕೆ ಆತಿಥ್ಯ

Team Udayavani, May 31, 2019, 1:23 PM IST

hubali-tdy-3..

ಹುಬ್ಬಳ್ಳಿ: ದ್ವಿತೀಯ ಟೆಸ್ಟ್‌ ಮುನ್ನಾದಿನ ಅಭ್ಯಾಸ ನಡೆಸಿದ ಆಟಗಾರರು.

ಹುಬ್ಬಳ್ಳಿ: ಇಲ್ಲಿನ ರಾಜನಗರದ ಕೆಎಸ್‌ಸಿಎ ಕ್ರೀಡಾಂಗಣ ಮತ್ತೂಮ್ಮೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ಆತಿಥ್ಯ ವಹಿಸಲು ಸನ್ನದ್ಧವಾಗಿದೆ. ಮೇ 31ರಿಂದ ಭಾರತ ‘ಎ’ ಹಾಗೂ ಶ್ರೀಲಂಕಾ ‘ಎ’ ತಂಡಗಳ ನಡುವೆ ಟೆಸ್ಟ್‌ ಸರಣಿಯ 2ನೇ ಹಾಗೂ ಅಂತಿಮ ಪಂದ್ಯ ಆರಂಭಗೊಳ್ಳಲಿದ್ದು, ಜೂ. 3ರ ವರೆಗೆ ನಡೆಯಲಿದೆ.

ಉಭಯ ತಂಡಗಳು 2 ಟೆಸ್ಟ್‌ ಹಾಗೂ 5 ಏಕದಿನ ಪಂದ್ಯಗಳನ್ನು ಆಡಲಿವೆ. ಈಗಾಗಲೇ ಟೆಸ್ಟ್‌ ಸರಣಿ ಆರಂಭಗೊಂಡಿದ್ದು, ಬೆಳಗಾವಿಯಲ್ಲಿ ಮೊದಲ ಟೆಸ್ಟ್‌ ಪೂರ್ಣಗೊಂಡಿದೆ. ಮೊದಲ ಟೆಸ್ಟ್‌ನಲ್ಲಿ ಅಭಿಮನ್ಯು ಈಶ್ವರನ್‌ ದ್ವಿಶತಕ ಹಾಗೂ ಅನ್ಮೋಲ್ ಪ್ರೀತ್‌ ಸಿಂಗ್‌ ಭರ್ಜರಿ ಶತಕದ ನೆರವಿನಿಂದ ಇನಿಂಗ್ಸ್‌ ಹಾಗೂ 205 ರನ್‌ಗಳ ಅಂತರದಿಂದ ಟೀಮ್‌ ಇಂಡಿಯಾ ಜಯ ಸಾಧಿಸಿದೆ. ಎರಡೂ ಇನಿಂಗ್ಸ್‌ಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತ ತಂಡ ದ್ವಿತೀಯ ಟೆಸ್ಟ್‌ನಲ್ಲಿ ಗೆಲುವಿನ ಲಯ ಮುಂದುವರಿಸುವ ನಿರೀಕ್ಷೆಯಲ್ಲಿದೆ. ಟೆಸ್ಟ್‌ ಸರಣಿಯ 2ನೇ ಹಾಗೂ ಕೊನೆಯ ಟೆಸ್ಟ್‌ ಅನ್ನು ಗೆಲ್ಲುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಲು ಶ್ರೀಲಂಕಾ ಪುಟಿದೇಳುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ.

ಟೆಸ್ಟ್‌ ಸರಣಿ ಬಳಿಕ ನಡೆಯುವ ಏಕದಿನ ಸರಣಿಯಲ್ಲಿ ಮೊದಲ ಮೂರು ಪಂದ್ಯಗಳು ಬೆಳಗಾವಿಯಲ್ಲಿ ನಡೆಯಲಿದ್ದು, ಕೊನೆಯ 2 ಪಂದ್ಯಗಳು ಜೂ. 13 ಹಾಗೂ 15ರಂದು ಹುಬ್ಬಳ್ಳಿಯಲ್ಲಿ ಜರುಗಲಿವೆ.

ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಭಾರತ ‘ಎ’ ತಂಡದಲ್ಲಿ ಲೆಗ್‌ ಸ್ಪಿನ್ನರ್‌ ಶ್ರೇಯಸ್‌ ಗೋಪಾಲ್ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಏಕೈಕ ಕ್ರಿಕೆಟಿಗ. ಐಪಿಎಲ್ನಲ್ಲಿ ಆಡಿರುವ ಶ್ರೇಯಸ್‌ 56 ಪ್ರಥಮ ದರ್ಜೆ ಪಂದ್ಯಗಳನ್ನಾಡಿದ ಅನುಭವ ಹೊಂದಿದ್ದಾರೆ.

5 ವರ್ಷಗಳ ಹಿಂದೆ 2013ರಲ್ಲಿ ಭಾರತ ‘ಎ’ ಹಾಗೂ ವೆಸ್ಟ್‌ ಇಂಡೀಸ್‌ ‘ಎ’ ತಂಡಗಳ ಮಧ್ಯೆ ಇದೇ ಕ್ರೀಡಾಂಗಣದಲ್ಲಿ ಪಂದ್ಯ ನಡೆದಿತ್ತು. ಅಲ್ಲದೇ ಭಾರತ ಹಾಗೂ ಬಾಂಗ್ಲಾದೇಶ ಮಹಿಳಾ ತಂಡದ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆದಿತ್ತು. ಈಗ ಮತ್ತೂಂದು ಸರಣಿಗೆ ಕೆಎಸ್‌ಸಿಎ ಕ್ರೀಡಾಂಗಣ ಸಾಕ್ಷಿಯಾಗುತ್ತಿದೆ.

ಕ್ರೀಡಾಂಗಣದಲ್ಲಿ ಪೆವಿಲಿಯನ್‌ ನಿರ್ಮಾಣ ಕಾರ್ಯ ಶೇ.70 ಪೂರ್ಣಗೊಂಡಿದೆ. ರಾಜ್ಯದಲ್ಲಿಯೇ ಅತಿದೊಡ್ಡದೆನಿಸಿದ 4000 ಚದುರಡಿಯ ಡ್ರೆಸಿಂಗ್‌ ರೂಮ್‌ ಇಲ್ಲಿ ನಿರ್ಮಾಣ ಮಾಡಲಾಗಿದೆ. ಅಲ್ಲದೇ ಮ್ಯಾಚ್ ರೆಫ್ರಿ, ಅಂಪೈರ್‌ಗಳು, ಅಧಿಕಾರಿಗಳ ಕೊಠಡಿಗಳ ನಿರ್ಮಾಣ ಪೂರ್ಣಗೊಂಡಿದೆ.

ಪಂದ್ಯದ ಮುನ್ನಾದಿನ ಗುರುವಾರ ಉಭಯ ತಂಡಗಳ ಆಟಗಾರರು ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಿದರು. ಬೆಳಗಿನ ಅವಧಿಯಲ್ಲಿ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಭಾರತ ತಂಡದ ಆಟಗಾರರು; ಮಧ್ಯಾಹ್ನ 2 ಗಂಟೆಯಿಂದ 5 ಗಂಟೆವರೆಗೆ ಶ್ರೀಲಂಕಾ ತಂಡದ ಆಟಗಾರರು ಅಭ್ಯಾಸ ನಡೆಸಿದರು.

•ವಿಶ್ವನಾಥ ಕೋಟಿ

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.