ಭಾರತೀಯ ಸಂಸ್ಕೃತಿ ಮಹೋತ್ಸವ ಸಂಪನ್ನ


Team Udayavani, Jan 19, 2018, 12:50 PM IST

h5-bharati.jpg

ಹುಬ್ಬಳ್ಳಿ: ಪ್ರೇಕ್ಷಕರ ಕೊರತೆ ನಡುವೆಯೂ ಭಾರತೀಯ ಸಂಸ್ಕೃತಿಯ ಹಿರಿಮೆ, ಜನಪದ ಸಾಂಸ್ಕೃತಿಕ ಸೊಗಡು ವಿಜೃಂಭಿಸಿತು. ದೇಶದ ವಿವಿಧ ರಾಜ್ಯದ  ಬುಡಕಟ್ಟು ಹಾಗೂ ಜಾನಪದ ನೃತ್ಯ ನೆರೆದಿದ್ದ ಪ್ರೇಕ್ಷಕರ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು. 

ಭಾರತೀಯ ಸಂಸ್ಕೃತಿ ಮಹೋತ್ಸವ ಅಂಗವಾಗಿ  ಇಲ್ಲಿನ ನೆಹರು ಮೈದಾನದಲ್ಲಿ ಎರಡು ದಿನ ಕಾಲ ಆಯೋಜಿಸಿದ್ದ ಕಾರ್ಯಕ್ರಮ ಗುರುವಾರ ಸಂಪನ್ನಗೊಂಡಿತು. ಗುರುವಾರ ನಡೆದ ಕಾರ್ಯಕ್ರಮದಲ್ಲಿ  ಕರ್ನಾಟಕದ ಕೋಲಾಟ, ವೀರಗಾಸೆ ನೃತ್ಯ ಗಮನ ಸೆಳೆಯಿತು. 

ಮಿಜೋರಾಂನ ಚಿರೋ ನೃತ್ಯ-ಅಲ್ಲಿನ ಬುಡಕಟ್ಟು ಸಂಪ್ರದಾದಲ್ಲಿ ಮದುವೆ ವೇಳೆ  ಕೈಗೊಳ್ಳುವ ನೃತ್ಯ ಪ್ರದರ್ಶಿಸಲಾಯಿತು. ಪಂಜಾಬ್‌ನ ಬಾಂಗ್ರಾ ನೃತ್ಯ ಆಕರ್ಷಣೀಯವಾಗಿತ್ತು. ತೆಲಂಗಾಣದ ಕಲಾವಿದರು ಮಥುರಾದಿಂದ ತೆಲಂಗಾಣದ ಅದಿಲಾಬಾದ್‌ ಜಿಲ್ಲೆಯವರೆಗೆ

ರಾಮ ಕೃಷ್ಣ ಲೀಲಾ ಸಾರುವ ಮಾಥುರಿ ನೃತ್ಯ ಹಾಗೂ ಉತ್ತರಾಖಂಡದಲ್ಲಿ ಬುಡಕಟ್ಟು ಜನಾಂಗ ಧಾರ್ಮಿಕ ಕಾರ್ಯ, ಮಗುವಿನ ಜನನ ಹಾಗೂ ಮದುವೆ ಸಂದರ್ಭದಲ್ಲಿ ಕೈಗೊಳ್ಳುವ ಜೋಡಾ ಚಪೇಲಿ ನೃತ್ಯ ಗಮನ ಸೆಳೆಯಿತು. 

ಅಸ್ಸಾಂನ  ಬಾಗೂಂಬಾ, ಗುಜರಾತ್‌ನ ಸಿದ್ದಿ ದಮಾಲ, ಹಿಮಾಚಲ ಪ್ರದೇಶದ ಗದ್ದಾ ಡ್ಯಾನ್ಸ್‌, ತಮಿಳುನಾಡಿನ ಕರಗಂ ಕವಣಿ ಅಲ್ಲದೆ ಮಹಾರಾಷ್ಟ್ರ ಇನ್ನಿತರ  ರಾಜ್ಯಗಳ ಕಲಾವಿದರು ಜಾನಪದ ನೃತ್ಯ ಪ್ರದರ್ಶಿಸಿದರು. ದೇಶದ ವಿವಿಧ ರಾಜ್ಯಗಳಿಂದ ಕಲಾ ತಂಡಗಳು ಆಗಮಿಸಿದ್ದವು. ವಿಶೇಷವಾಗಿ ಆಯಾ  ರಾಜ್ಯಗಳ ಬುಡಕಟ್ಟು ಹಾಗೂ ಜಾನಪದ ಸಂಸ್ಕೃತಿ, ಸಾಂಸ್ಕೃತಿಕ ಸೊಬಗು ಬಿಂಬಿಸುವ ನೃತ್ಯದ ಪರಿಚಯ ಮಾಡಿದ್ದರು. 

ಹೆಚ್ಚಿನ ಹಣ ನೀಡಿ ಸಿನಿಮಾ  ನೋಡಲು ಹೋಗುವ ಜನರು ಉಚಿತವಾಗಿ ಜೀವಂತಿಕೆಯುಳ್ಳ ಕಲೆ ಬಿಂಬಿಸುವ ಕಾರ್ಯಕ್ರಮಕ್ಕೆ ನಿರಾಸಕ್ತಿ ತೋರಿದರೋ ಅಥವಾ ಆಯೋಜಕರು  ಸಮರ್ಪಕ ಪ್ರಚಾರ ಕೈಗೊಳ್ಳಲಿಲ್ಲವೋ ಗೊತ್ತಿಲ್ಲ. ಒಟ್ಟಿನಲ್ಲಿ ಉತ್ತಮ ಸಾಂಸ್ಕೃತಿಕ ಕಾರ್ಯಕ್ರಮವೊಂದಕ್ಕೆ ಪ್ರೇಕ್ಷಕರ ಸಾಥ್‌ ಇಲ್ಲವಾಗಿತ್ತು.   

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.