ಭಾರತದ ಅರ್ಥ ವ್ಯವಸ್ಥೆ ಜಾಗತಿಕ ಮಟ್ಟದಲ್ಲಿ ಬಲಿಷ್ಠ

ಸಂಶೋಧಕರು ವಿಭಿನ್ನ ವಿಧಾನಗಳ ಮೂಲಕ ಸಂಶೋಧನೆ ನಡೆಸಬೇಕಿದೆ: ಡಾ| ಸಿಂಗ್‌

Team Udayavani, Jun 24, 2022, 10:27 AM IST

5

ಧಾರವಾಡ: ಸಂಶೋಧಕರು ಪ್ರಸ್ತುತ ವಿಷಯ, ಆರ್ಥಿಕತೆ ಮತ್ತು ನಿರ್ವಹಣೆ, ಒಳಹರಿವು ಕುರಿತು ಹೆಚ್ಚು ಅಧ್ಯಯನ-ವಿಶ್ಲೇಷಣೆಗೆ ಒತ್ತು ನೀಡಬೇಕಿದೆ ಎಂದು ತಮಿಳುನಾಡಿನ ತಿರುಚಿರಾಪಳ್ಳಿ ಭಾರತೀಯ ನಿರ್ವಹಣಾ ಸಂಸ್ಥೆ ನಿರ್ದೇಶಕ ಡಾ| ಪವನ್‌ಕುಮಾರ ಸಿಂಗ್‌ ಹೇಳಿದರು.

ಕರ್ನಾಟಕ ವಿಶ್ವವಿದ್ಯಾಲಯದ ಕೌಸಾಳಿ ನಿರ್ವಹಣಾ ಅಧ್ಯಯನ ವಿಭಾಗದ ವತಿಯಿಂದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಆರ್ಥಿಕತೆ, ವ್ಯವಹಾರ ಮತ್ತು ನಿರ್ವಹಣೆಯಲ್ಲಿ ಇತ್ತೀಚಿನ ಪ್ರವೃತ್ತಿಗಳು ವಿಷಯ ಕುರಿತು ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಅರ್ಥಶಾಸ್ತ್ರ ವಾಣಿಜ್ಯ ಮತ್ತು ನಿರ್ವಹಣೆ ವ್ಯಾಪಾರ ಅಧ್ಯಯನ ವಿಷಯಗಳಿಗೆ ಮೂಲ ವಿಷಯವಾಗಿದೆ. ಪ್ರಸ್ತುತ ನಿರ್ವಹಣೆಗೆ ಸಂಬಂಧಿಸಿದ ವಿಷಯಗಳಾದ ಹಣಕಾಸು, ವಾಣಿಜ್ಯ, ಅರ್ಥಶಾಸ್ತ್ರ ಸಂಬಂಧಿಸಿದ ವಿಷಯಗಳು ಹೇಗೆ ನಿರ್ವಹಣಾ ಅಧ್ಯಯನ ವಿಷಯಗಳಿಗೆ ಸಂಬಂ ಧಿಸಿವೆ ಎಂಬುದರ ಕುರಿತು ಸಂಶೋಧನೆಗಳು ನಡೆಯಬೇಕು. ಪ್ರಸ್ತುತ ಭಾರತದ ಅರ್ಥ ವ್ಯವಸ್ಥೆ ಜಾಗತಿಕ ಮಟ್ಟದಲ್ಲಿ ಅತಿ ಬಲಿಷ್ಠವಾಗಿದ್ದು, ಭಾರತೀಯ ಅನೇಕ ಕಂಪನಿಗಳು ಜಾಗತಿಕ ಮಟ್ಟದಲ್ಲಿ ಬೆಳೆದು ನಿಂತಿವೆ. ಸಂಶೋಧಕರು ವಿಭಿನ್ನವಾದ ವಿಧಾನಗಳ ಮೂಲಕ ಸಂಶೋಧನೆ ನಡೆಸಬೇಕಾಗಿದೆ ಎಂದರು.

ಬೆಳಗಾವಿ ಉದ್ಯಮಿ ರಾಜೇಂದ್ರ ಬೆಳಗಾಂವಕರ ಮಾತನಾಡಿ, ಉದ್ಯಮಗಳ ಬೇಡಿಕೆಗಳ ಅನುಗುಣವಾಗಿ ವಿದ್ಯಾರ್ಥಿಗಳು ಸಿದ್ಧವಾಗಬೇಕಾಗಿದೆ. ಪ್ರಸ್ತುತ ವಿಶೇಷವಾಗಿ ಮ್ಯಾನೇಜ್‌ಮೆಂಟ್‌, ಬಿಜಿನೆಸ್‌ ಶೈಕ್ಷಣಿಕ ಸಂಸ್ಥೆಗಳ ಶಿಕ್ಷಕರು ಭಿನ್ನವಾದ ಬೋಧನಾ ವಿಧಾನ ಅಳವಡಿಸಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು.

ಬಳ್ಳಾರಿ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಪ್ರೊ| ಎಂ.ಎಸ್‌.ಸುಭಾಷ ಮಾತನಾಡಿ, ಮ್ಯಾನೇಜ್‌ಮೆಂಟ್‌, ಕಾನೂನು, ಮೆಡಿಸಿನ್‌, ಇಂಜನಿಯರಿಂಗ್‌ ಕ್ಷೇತ್ರದಲ್ಲಿ ತಕ್ಕಮಟ್ಟಿಗೆ ಮಾತ್ರ ಸಂಶೋಧನೆಗೆ ನಡೆಯುತ್ತಿರುವುದು ದುರದೃಷ್ಟಕರ ಎಂದರು.

ಅಧ್ಯಕ್ಷತೆ ವಹಿಸಿದ್ದ ಕವಿವಿ ಕುಲಪತಿ ಪ್ರೊ|ಕೆ.ಬಿ. ಗುಡಸಿ ಮಾತನಾಡಿ, 2 ಕೋಟಿ ರೂ.ಗಳನ್ನು ವಿದ್ಯಾರ್ಥಿ ಮತ್ತು ಶಿಕ್ಷಕರ ವಿನಿಮಯಕ್ಕಾಗಿ ಬಜೆಟ್‌ನಲ್ಲಿ ಮೀಸಲಿಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ವಿಷಯಗಳಲ್ಲಿ ಸಂಶೋಧನೆಗೆ ಹೆಚ್ಚು ಒತ್ತು ನೀಡಲಾಗುವುದು ಎಂಉ ತಿಳಿಸಿದರು.

ಕವಿವಿ ಕುಲಸಚಿವ ಯಶಪಾಲ್‌ ಕ್ಷೀರಸಾಗರ, ಕೌಸಾಳಿ ನಿರ್ವಹಣಾ ಅಧ್ಯಯನ ವಿಭಾಗದ ಡೀನ್‌ ಪ್ರೊ|ರಮೇಶ ಕುಲಕರ್ಣಿ, ಕಿಮ್ಸ್‌ ನಿರ್ದೇಶಕ ಡಾ|ಎ.ಎಮ್‌.ಕಡಕೋಳ, ಡಾ| ಶಿವಪ್ಪ, ಡಾ|ಉತ್ತಮ ಕಿನ್ನಂಗೆ, ಡಾ|ಎನ್‌.ರಾಮಾಂಜನೇಯಲು, ಡಾ|ಪುಷ್ಪಾ ಹೊಂಗಲ್‌ ಸೇರಿದಂತೆ ಕರ್ನಾಟಕ, ಗೋವಾ, ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಹುಬ್ಬಳ್ಳಿ ಧಾರವಾಡ ಬಿಬಿಎ, ಎಂಬಿಎ ಕಾಲೇಜುಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಉದ್ಯಮಿದಾರರು, ವೃತ್ತಿಪರರು, ಸಂಶೋಧಕರು ಮತ್ತು ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.