ಮಾತೃಭಾಷೆಯತ್ತ ಅಸಡ್ಡೆ-ಕನ್ನಡಕ್ಕೆ ಅನಾಥಪ್ರಜ್ಞೆ; ಎಸ್‌.ಎಚ್‌. ಮಿಟ್ಟಲಕೋಡ

ಕರ್ನಾಟಕದಲ್ಲಿ ಕನ್ನಡ ರಕ್ಷಣೆಗೆ ಪ್ರಾಧಿಕಾರ ಏಕೆ ಬಂತು?

Team Udayavani, Dec 3, 2022, 5:59 PM IST

ಮಾತೃಭಾಷೆಯತ್ತ ಅಸಡ್ಡೆ-ಕನ್ನಡಕ್ಕೆ ಅನಾಥಪ್ರಜ್ಞೆ; ಎಸ್‌.ಎಚ್‌. ಮಿಟ್ಟಲಕೋಡ

ಧಾರವಾಡ: ಕಾನೂನು ಕ್ಷೇತ್ರದಲ್ಲಿ ಕಕ್ಷಿದಾರರಿಗೆ ಸರಳವಾಗಿ ಅರ್ಥವಾಗುವಂತೆ ಕನ್ನಡ ನೆಲೆಯಿಂದಲೂ ಕಾರ್ಯ ಮಾಡಲು ಸಾಧ್ಯ ಎಂಬುದನ್ನು ನ್ಯಾಯವಾದಿ ವೆಂಕಟೇಶ ಕುಲಕರಣಿ ಮಾಡಿ ತೋರಿಸಿದ್ದಾರೆ. ಆದರೆ, ರಾಜ್ಯದಲ್ಲಿ ಕನ್ನಡ ಭಾಷೆ ಅನಾಥಪ್ರಜ್ಞೆ ಯಾಕೆ ತಾಳಿತು ಎಂಬುದನ್ನು ಗಂಭೀರವಾಗಿ ಚಿಂತಿಸಬೇಕಾಗಿದೆ ಎಂದು ನಿವೃತ್ತ ಜಿಲ್ಲಾ ನ್ಯಾಯಾಧಿಧೀಶ ಎಸ್‌.ಎಚ್‌. ಮಿಟ್ಟಲಕೋಡ ಹೇಳಿದರು.

ಕರ್ನಾಟಕ ವಿದ್ಯಾವರ್ಧಕ ಸಂಘದ ಕಾನೂನು ಮಂಟಪವು ಸಂಘದ ಶತಮಾನೋತ್ತರ ಬೆಳ್ಳಿಹಬ್ಬದ ಸವಿನೆನಪಿನಲ್ಲಿ ಮತ್ತು 67ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನಾಡಹಬ್ಬದ ತಿಂಗಳ ಕಾರ್ಯಕ್ರಮದ ನಿಮಿತ್ತ ಆಯೋಜಿಸಿದ್ದ ನ್ಯಾಯವಾದಿ ದಿ| ವೆಂಕಟೇಶ ಕುಲಕರಣಿ ಅವರ ನೆನಪಿನಲ್ಲಿ ಕಾನೂನು-ಕನ್ನಡಕ್ಕೆ ವೆಂಕುರವರ ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಯಪ್ರಜ್ಞೆ, ನಿಸ್ವಾರ್ಥ ಭಾವನೆಯಿಂದ, ನ್ಯಾಯನಿಷ್ಠುರಿಯಾಗಿ, ಪ್ರಾಮಾಣಿಕವಾಗಿ ಕನ್ನಡಕ್ಕಾಗಿ ಒಂಟಿ ಸಲಗದಂತೆ ಕಾರ್ಯ ಮಾಡಿದವರು ವೆಂಕು. ತಮಿಳು, ತೆಲುಗು, ಮಲೆಯಾಳಂ, ಮರಾಠಿ ಮುಂತಾದ ಅನ್ಯಭಾಷೆಗಳ ಜನರು ತಮ್ಮತನ ಬಿಟ್ಟುಕೊಡದೇ ತಮ್ಮ ಪ್ರಾದೇಶಿಕ ಭಾಷೆಗೆ ಒತ್ತು ಕೊಡುತ್ತಾ ರಕ್ಷಿಸುತ್ತಾರೆ.

ಆದರೆ ಕರ್ನಾಟಕದಲ್ಲಿ ಕನ್ನಡ ರಕ್ಷಣೆಗೆ ಪ್ರಾಧಿಕಾರ ಏಕೆ ಬಂತು?. ಕನ್ನಡಿಗರು ಮಾತೃಭಾಷೆ ಬಗ್ಗೆ ಅಸಡ್ಡೆ, ನಿರ್ಲಕ್ಷ್ಯ ಭಾವನೆ ತೋರುತ್ತಿರುವುದರಿಂದ ತನ್ನ ರಾಜ್ಯದಲ್ಲೇ ಕನ್ನಡ ಅನಾಥಪ್ರಜ್ಞೆಗೆ ಒಳಗಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ರಾಜ್ಯ ಬಾರ್‌ ಕೌನ್ಸಿಲ್‌ ಸದಸ್ಯ ವಿ.ಡಿ. ಕಾಮರಡ್ಡಿ, ಪ್ರೊ| ಸಿ.ಎಸ್‌. ಪಾಟೀಲ, ನ್ಯಾಯವಾದಿಗಳಾದ ಎ.ಸಿ. ಚಾಕಲಬ್ಬಿ, ಪ್ರೊ| ಸಿ.ಎಸ್‌. ಪೊಲೀಸ್‌ಪಾಟೀಲ, ಎಸ್‌.ಎನ್‌. ಬಣಕಾರ, ಪ್ರಫುಲ್ಲಾ ನಾಯಕ ಹಾಗೂ ಮನೋಜ ಪಾಟೀಲ ಮಾತನಾಡಿ, ವೆಂಕಟೇಶ ಕುಲಕರಣಿ ಅವರು ನೇರ, ದಿಟ್ಟ ಸ್ಪಷ್ಟವಾದಿಗಳಾಗಿದ್ದರು.

ಅಲ್ಲದೇ ಸಮಯದ ಮೌಲ್ಯ, ಸಮಯ ಪ್ರಜ್ಞೆಯನ್ನು ಸದಾ ಜನರ ಮನಸ್ಸಿನಲ್ಲಿ ಮೂಡಿಸಿದ ನ್ಯಾಯವಾದಿ. ಹೊಗಳಿಕೆ ತೆಗಳಿಕೆಗೆ ಕಿವಿಗೊಡದೆ, ಅಂಜಿಕೆ-ಅಳಕು ಇಟ್ಟುಕೊಳ್ಳದೆ ಮನಸ್ಸಿದ್ದಲ್ಲಿ ಮಾರ್ಗ ಎಂಬ ಮಾತಿನಂತೆ ಕೆಲಸ ಮಾಡಿದವರು ಎಂದರು.

ಧಾರವಾಡ ಲಾ ಅಕಾಡೆಮಿ ಅಧ್ಯಕ್ಷ ಕೆ.ಬಿ. ನಾವಲಗಿಮಠ ಅಧ್ಯಕ್ಷತೆ ವಹಿಸಿದ್ದರು. ವಿರೂಪಾಕ್ಷ ದೀಕ್ಷಿತ ಸಂಗಡಿಗರು, ದತ್ತಂಭಟ್ಟ ಜೋಶಿ ಸಂಗಡಿಗರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು. ವಿಜೇತಾ ವೆರ್ಣೇಕರ ನೇತೃತ್ವದ ಮಹಿಳಾ ತಂಡದಿಂದ ನೃತ್ಯ ಪ್ರದರ್ಶನ ನಡೆಯಿತು. ಕಾನೂನು ಮಂಟಪದ ಸಂಚಾಲಕ ಗುರು ಹಿರೇಮಠ ಸ್ವಾಗತಿಸಿದರು. ಬಸವಪ್ರಭು ಹೊಸಕೇರಿ ಪ್ರಾಸ್ತಾವಿಕ ಮಾತನಾಡಿದರು. ಚಂದ್ರಶೇಖರ ಮಹಾಜನಶೆಟ್ಟಿ ನಿರೂಪಿಸಿದರು. ಶಿವಾನಂದ ಭಾವಿಕಟ್ಟಿ ವಂದಿಸಿದರು. ಪ್ರೊ| ಮಾಲತಿ ಪಟ್ಟಣಶೆಟ್ಟಿ, ಕಾನೂನು ಮಂಟಪದ ಸಲಹಾ ಸಮಿತಿ ಸದಸ್ಯರಾದ ಮಹಾನಂದಾ ಮುದೇನಗುಡಿ, ಸಿ.ಎಸ್‌. ನಾಗಶೆಟ್ಟಿ, ಕೆ.ಎಂ. ಕೊಪ್ಪದ, ಚಂದ್ರಶೇಖರ ತಿಗಡಿ, ಅಶೋಕ ಕೋರಿ, ಸುರೇಶ ನಾಯಕ, ಪುರೋಹಿತ್‌ ಇನ್ನಿತರರಿದ್ದರು.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.