ಹುಬ್ಬಳ್ಳಿಯಲ್ಲಿ ಶತಕೋಟಿ ಕ್ರೀಡಾ ಸಮುಚ್ಛಯ


Team Udayavani, Jan 6, 2020, 11:35 AM IST

HUBALLI-TDY-2

ಹುಬ್ಬಳ್ಳಿ: ನಗರದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಕ್ರೀಡಾ ಸಮುಚ್ಛಯ ನಿರ್ಮಿಸಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಹು-ಧಾ ಸ್ಮಾರ್ಟ್‌ಸಿಟಿ ಅನುದಾನದಲ್ಲಿ ಮುಕ್ತಾಯಗೊಂಡ ಈಜುಗೊಳ, ಸ್ಮಾರ್ಟ್‌ ಹೆಲ್ತ್‌, ಸ್ಮಾರ್ಟ್‌ ಕ್ಲಾಸ್‌ ಯೋಜನೆಗಳ ಉದ್ಘಾಟನೆ ಹಾಗೂ ಬೆಂಗೇರಿ ಮಾರುಕಟ್ಟೆ ನಿರ್ಮಾಣ, ಉಣಕಲ್‌ ಮಾರುಕಟ್ಟೆ ನಿರ್ಮಾಣ, ಬಹುವಾಹನ ನಿಲುಗಡೆ ಯೋಜನೆ, ಸ್ಮಾರ್ಟ್‌ಸಿಟಿ ಕಾಮಗಾರಿ ಪ್ಯಾಕೇಜ್‌, ಪುಟಾಣಿ ರೈಲು ಯೋಜನೆಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈಗಾಗಲೇ ನಗರದ ಹೊರವಲಯದಲ್ಲಿ ಖೇಲೋ ಇಂಡಿಯಾ ಯೋಜನೆಯಡಿ 11 ಕೋಟಿ ವೆಚ್ಚದಲ್ಲಿ ಕ್ರೀಡಾ ಸಮುತ್ಛಯ ನಿರ್ಮಾಣಗೊಳ್ಳಬೇಕಿದ್ದು, ಅದಕ್ಕೆ ಇನ್ನೂ 90 ಕೋಟಿ ರೂ. ಅನುದಾನ ನೀಡಿ ವಿವಿಧ ಕ್ರೀಡಾ ಸೌಲಭ್ಯಗಳನ್ನು ಹೊಂದಿದ ಮಾದರಿ ಕ್ರೀಡಾ ಸಮುಚ್ಛಯ ನಿರ್ಮಿಸಲಾಗುವುದು. ಇದೇ ತಿಂಗಳಲ್ಲಿ ವಿಸ್ತೃತ ಯೋಜನಾ ವರದಿ ಸಲ್ಲಿಕೆಯಾಗಲಿದ್ದು, 3-4 ತಿಂಗಳುಗಳಲ್ಲಿ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸಲಾಗುವುದು ಎಂದರು.

ಧಾರವಾಡದಲ್ಲಿ 15 ಕೋಟಿ ವೆಚ್ಚದಲ್ಲಿ ಈಜುಗೊಳ ನವೀಕರಣ ಹಾಗೂ ಕ್ರೀಡಾ ಸಮುತ್ಛಯ ನಿರ್ಮಾಣ ನಡೆಯುತ್ತಿದೆ. ಆದರೆ ಇನ್ನೂ 15 ಕೋಟಿ ರೂ. ನೀಡಿ ಒಟ್ಟು 30 ಕೋಟಿ ರೂ. ವೆಚ್ಚದಲ್ಲಿ ಉತ್ತಮ ಕ್ರೀಡಾ ಸಮುಚ್ಛಯ ನಿರ್ಮಿಸಲಾಗುವುದು. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಸುಸಜ್ಜಿತ ಕ್ರೀಡಾಂಗಣಗಳನ್ನು ನಿರ್ಮಿಸಲಾಗುವುದು. ಕಾರ್ಪೊರೇಟ್‌ ಸಾಮಾಜಿಕ ಜವಾಬ್ದಾರಿ ಅನುದಾನದಡಿ ನೆರವು ನೀಡಲು ಹಲವು ಕಂಪನಿಗಳು ಮುಂದೆ ಬಂದಿದ್ದು, ಸುಸಜ್ಜಿತ ಕ್ರೀಡಾಂಗಣಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಮಾತನಾಡಿ, ಹಿಂದಿನ ಸರಕಾರದಲ್ಲಿ ನನೆಗುದಿಗೆ ಬಿದ್ದಿದ್ದ ಯೋಜನೆಗಳಿಗೆ ಈಗ ಚಾಲನೆ ನೀಡಲಾಗಿದೆ. ಕೇಂದ್ರ ಸರಕಾರ ಅಗತ್ಯ ಅನುದಾನ ನೀಡುತ್ತಿರುವುದರಿಂದ ಮೂಲಸೌಕರ್ಯಗಳ ಕಾಮಗಾರಿಗಳಿಗೆ ಒತ್ತು ನೀಡಲಾಗಿದೆ. ಹಲವು ದಿನಗಳ ನಂತರ ಈಜುಗೊಳ ನವೀಕರಣಗೊಂಡಿದ್ದು, ಇದನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿ ಸಾರ್ವಜನಿಕರಿಗೆ ಅನುಕೂಲತೆ ಕಲ್ಪಿಸಿಕೊಡಬೇಕು ಎಂದು ಸೂಚನೆ ನೀಡಿದರು. ಶಾಸಕ ಅರವಿಂದ ಬೆಲ್ಲದ, ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ, ಪಾಲಿಕೆ ಮಾಜಿ ಸದಸ್ಯರಾದ ವೀರಣ್ಣ ಸವಡಿ, ಸುಧೀರ ಸರಾಫ, ರಾಜಣ್ಣ ಕೊರವಿ, ಡಿ.ಕೆ. ಚವ್ಹಾಣ, ಮಹೇಶ ಬುರ್ಲಿ, ಶಿವು ಮೆಣಸಿನಕಾಯಿ, ಶಿವಾನಂದ ಮುತ್ತಣ್ಣವರ, ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ ಇದ್ದರು.

3.03 ಕೋಟಿ ರೂ. ವೆಚ್ಚದಲ್ಲಿ ಪಾಲಿಕೆಯ ಈಜುಗೊಳ ನವೀಕರಿಸಲಾಗಿದೆ. ಚಿಟಗುಪ್ಪಿ ಆಸ್ಪತ್ರೆಯಲ್ಲಿ 3.06 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‌ ಹೆಲ್ತ್‌ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಲ್ಯಾಮಿಂಗ್ಟನ್‌ ಶಾಲೆಯಲ್ಲಿ 1.17 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‌ಸ್ಕೂಲ್‌ ಯೋಜನೆ ಅನುಷ್ಠಾನ ಮಾಡಲಾಗಿದೆ. ಬೆಂಗೇರಿ ಮಾರುಕಟ್ಟೆಯನ್ನು 6.08 ಕೋಟಿ ಹಾಗೂ ಉಣಕಲ್‌ ಮಾರುಕಟ್ಟೆಯನ್ನು 2.09 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು.  –ಶಕೀಲ್‌ ಅಹ್ಮದ್‌, ಸ್ಮಾರ್ಟ್‌ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

8-

Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.