ಮಳೆಗಾಲಕ್ಕೂ ಮುನ್ನ ಸಾಂಕ್ರಾಮಿಕ ರೋಗ ಭೀತಿ


Team Udayavani, Jun 8, 2019, 9:34 AM IST

hubali-tdy-1..

ಧಾರವಾಡ: ಮಳೆಗಾಲದ ಹೊಸ್ತಿಲಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಳವಾಗಿದೆ. ಬಿಸಿಲಿನ ಹೊಡೆತಕ್ಕೆ ಕಾವೇರಿರುವ ಭೂಮಿ ಆಗಾಗ ಸುರಿಯುತ್ತಿರುವ ಮಳೆಗೆ ತಣ್ಣಗಾಗುತ್ತಿದ್ದರೂ ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಇದೇ ಪ್ರಶಸ್ತ ಸಮಯವಾಗಿದೆ.

ಕುಡಿಯುವ ನೀರಿನ ಪೈಪ್‌ಲೈನ್‌ ಒಡೆದು ಚರಂಡಿ ನೀರು ಸೇರುವಿಕೆ, ಪರಿಸರದಲ್ಲಿ ಸ್ವಚ್ಛತೆ ಕೊರತೆ, ತಾಜ್ಯ ನಿರ್ವಹಣೆ ಕೊರತೆ, ಗ್ರಾಮೀಣ ಪ್ರದೇಶದಲ್ಲಿನ ಬಯಲು ಶೌಚಾಲಯ ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಕಾರಣವಾಗುತ್ತಿದೆ.

ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕಾದ ಜಿಲ್ಲಾಡಳಿತ ಹಾಗೂ ಪಾಲಿಕೆ ಲೋಕಸಭಾ ಚುನಾವಣಾ ಕಾರ್ಯದಲ್ಲಿ ಮಗ್ನಗೊಂಡಿತ್ತು. ಫಾಗಿಂಗ್‌ ಮಾಡುವ ಕಾರ್ಯಕ್ಕೂ ಪಾಲಿಕೆ ಕೊಕ್ಕೆ ಹಾಕಿತ್ತು. ಮಹಾನಗರ ಪಾಲಿಕೆ ನಿರ್ಲಕ್ಷ್ಯವೇ ಸಾಂಕ್ರಾಮಿಕ ರೋಗಗಳ ಹರಡುವಿಕೆಗೆ ಮುಖ್ಯ ಕಾರಣವಾಗಿದ್ದು, ಈವರೆಗೂ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಂಡಿಲ್ಲ. ಸದ್ಯ ಚುನಾವಣೆ ಕಾರ್ಯ ಮುಗಿದಿದ್ದು, ಜನರು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಮೊದಲೇ ಪಾಲಿಕೆ, ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂಬುದು ಜನಾಗ್ರಹವಾಗಿದೆ.

ನಗರದಲ್ಲಿಯೇ ಹೆಚ್ಚು: ಜೂ.7ರಂದು ಆರೋಗ್ಯ ಇಲಾಖೆ ನೀಡಿರುವ ಅಂಕಿ-ಅಂಶಗಳ ಅನ್ವಯ ಜಿಲ್ಲೆಯಲ್ಲಿ 2019ರ ಜನೇವರಿಯಿಂದ ಜೂ. 7ರ ವರೆಗೆ ಮಲೇರಿಯಾ ರೋಗಕ್ಕೆ 4 ಜನ ತುತ್ತಾಗಿದ್ದರೆ ಡೆಂಘೀ 7, ಚಿಕುನ್‌ಗುನ್ಯಾ 8 ಜನರಲ್ಲಿ ಪತ್ತೆ ಆಗಿದೆ. ಸೂಕ್ತ ಚಿಕಿತ್ಸೆ ಲಭಿಸಿದ ಕಾರಣ ಯಾರೂ ಮೃತಪಟ್ಟಿಲ್ಲ. ಗ್ರಾಮೀಣಕ್ಕಿಂತ ನಗರ ಪ್ರದೇಶದಲ್ಲಿಯೇ ಹೆಚ್ಚು ಸಾಂಕ್ರಾಮಿಕ ರೋಗಗಳು ಪ್ರತಿವರ್ಷದಂತೆ ಈ ಸಲವೂ ಕಂಡು ಬಂದಿವೆ

ಮಲೇರಿಯಾ-ಡೆಂಘೀ ಆತಂಕ:
2010ರಲ್ಲಿ 309 ಜನರಲ್ಲಿ ಕಾಣಿಸಿಕೊಂಡಿದ್ದ ಮಲೇರಿಯಾ 2018ರಲ್ಲಿ 25 ಜನರಲ್ಲಿ ಕಾಣಿಸಿಕೊಂಡಿತ್ತು. ಈ ವರ್ಷದ ಐದು ತಿಂಗಳಲ್ಲಿ ಹುಬ್ಬಳ್ಳಿ ನಗರದಲ್ಲಿ 1 ಹಾಗೂ ನವಲಗುಂದದಲ್ಲಿ 3 ಜನರಲ್ಲಿ ಕಾಣಸಿಕೊಂಡಿದೆ. 2017ರಲ್ಲಿ 172 ಜನರಲ್ಲಿ ಕಾಣಸಿಕೊಂಡು ಆತಂಕಕ್ಕೆ ಕಾರಣವಾಗಿದ್ದ ಡೆಂಘೀ ಆಗ 3 ಜನರನ್ನು ಬಲಿ ಪಡೆದಿತ್ತು. ಈ ಪೈಕಿ ಧಾರವಾಡ ನಗರದಲ್ಲಿ ಇಬ್ಬರು ಹಾಗೂ ಕುಂದಗೋಳದಲ್ಲಿ ಒಬ್ಬ ವ್ಯಕ್ತಿ ಡೆಂಘೀಗೆ ಮೃತಪಟ್ಟಿದ್ದರು. 2018ರಲ್ಲಿ 112 ಜನರಲ್ಲಿ ಕಾಣಸಿಕೊಂಡಿದ್ದ ಡೆಂಘೀ ಹುಬ್ಬಳ್ಳಿ ನಗರದಲ್ಲಿ 55 ಹಾಗೂ ಧಾರವಾಡ ನಗರದಲ್ಲಿ 21 ಜನರಲ್ಲಿ ಕಾಣಿಸಿಕೊಂಡಿತ್ತು. ಈ ವರ್ಷದ ಐದು ತಿಂಗಳಲ್ಲಿ ಹುಬ್ಬಳ್ಳಿ ನಗರದಲ್ಲಿಯೇ ಆರು ಜನರು ಡೆಂಘೀಗೆ ತುತ್ತಾಗಿದ್ದರೆ ಧಾರವಾಡ ನಗರದಲ್ಲಿ ಒಬ್ಬರಲ್ಲಿ ಕಾಣಿಸಿಕೊಂಡಿದೆ.
ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳ ತಡೆಗೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಾ ಇದ್ದು, ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಇನ್ನೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನಮ್ಮ ವ್ಯಾಪ್ತಿಗೆ ಬರದು. ಆದರೆ ಪಾಲಿಕೆಯೊಂದಿಗೆ ಸಮನ್ವತೆ ಇದ್ದು, ಅವಳಿ ನಗರದಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್‌ ಕಾರ್ಯ ಕೈಗೊಳ್ಳುವಂತೆ ಪಾಲಿಕೆಗೆ ಪತ್ರ ಬರೆಯಲಾಗುವುದು.•ಆರ್‌.ಎನ್‌. ದೊಡ್ಡಮನಿ, ಜಿಲ್ಲಾ ಆರೋಗ್ಯಾಧಿಕಾರಿ
ಆರ್ಭಟಿಸಿ ತಣ್ಣಗಾದ ಚಿಕೂನ್‌ಗುನ್ಯಾ:
2009ರಲ್ಲಿ 308 ಜನರಲ್ಲಿ ಕಾಣಿಸಿಕೊಂಡು ಆರ್ಭಟಿಸಿದ್ದ ಚಿಕೂನಗುನ್ಯಾ 2017ರಲ್ಲಿ 11ಜನರಲ್ಲಿ ಕಾಣಿಸಿಕೊಂಡು ತಣ್ಣಗಾಗಿತ್ತು. ಆದರೆ 2018ರಲ್ಲಿ ವಿಧಾನಸಭಾ ಚುನಾವಣೆಯ ಗುಂಗಿನಲ್ಲಿ ಜಿಲ್ಲಾಡಳಿತ ಮಗ್ನರಾಗಿದ್ದರಿಂದ 85 ಜನರಲ್ಲಿ ಕಾಣಿಸಿಕೊಂಡಿತ್ತು. ಈ ಪೈಕಿ ಹುಬ್ಬಳ್ಳಿ ನಗರದಲ್ಲಿ 30, ಧಾರವಾಡ ನಗರದಲ್ಲಿಯೇ 21 ಜನರು ತುತ್ತಾಗಿದ್ದರು. ಈಗ ಐದು ತಿಂಗಳಲ್ಲಿ 8 ಜನರಲ್ಲಿ ಚಿಕೂನ್‌ಗುನ್ಯಾ ಕಂಡುಬಂದಿದೆ. ಧಾರವಾಡ, ಹುಬ್ಬಳ್ಳಿ, ಕಲಘಟಗಿಯಲ್ಲಿ ತಲಾ 2, ನವಲಗುಂದ ಹಾಗೂ ಹುಬ್ಬಳ್ಳಿ ನಗರದಲ್ಲಿ ತಲಾ ಒಬ್ಬರಲ್ಲಿ ಕಾಣಿಸಿಕೊಂಡಿದೆ. ಇನ್ನೂ ಮೆದುಳು ಜ್ವರಕ್ಕೆ 2018ರಲ್ಲಿ ಒಬ್ಬ ಬಲಿಯಾಗಿದ್ದು, ಈ ವರ್ಷದಲ್ಲಿ ಈ ರೋಗದ ಲಕ್ಷಣಗಳು ಕಂಡುಬಂದಿಲ್ಲ.
ಹೆಚ್ಚಾಗುತ್ತಾ ಇದೆ ಕಜ್ಜಿಯ ಕಿರಿಕಿರಿ:
ಜಿಲ್ಲಾಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಫೋಗಲ್, ಕಜ್ಜಿಯಂತಹ ಚರ್ಮ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಈ ಪೈಕಿ ಕಜ್ಜಿ ರೋಗಕ್ಕೆ ತುತ್ತಾದ ಜನರೇ ಹೆಚ್ಚು. ತುರಿಕೆ ಶಮನಕ್ಕಾಗಿ ಆಸ್ಪತ್ರೆಗಳ ಬಾಗಿಲು ತಟ್ಟುವಂತಾಗಿದೆ. ಇದಕ್ಕೆ ಈಗ ನೀಡುತ್ತಿರುವ ಔಷಧಿಯೂ ಕೆಲ ರೋಗಿಗಳಿಗೆ ನಾಟುತ್ತಿಲ್ಲ. ಔಷಧಿಗಳ ನಿಯಂತ್ರಣಕ್ಕೂ ಬಾರದ ಕಜ್ಜಿ ವೈರಾಣು ತನ್ನ ಹರಡುವಿಕೆ ಸಾಮರ್ಥಯ ಹೆಚ್ಚಿಸಿಕೊಂಡಿರುವ ಕಾರಣ ರೋಗಿಗಳು ಪರದಾಡುವಂತಾಗಿದೆ.
•ಶಶಿಧರ ಬುದ್ನಿ

ಟಾಪ್ ನ್ಯೂಸ್

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.