ನಡುಗಡ್ಡೆಯಂತಾದ ಬರದ್ವಾಡದಲ್ಲಿ ಸಾಂಕ್ರಮಿಕ ರೋಗ ಭೀತಿ
Team Udayavani, Aug 13, 2019, 9:34 AM IST
ಹುಬ್ಬಳ್ಳಿ: ಸಾಂಕ್ರಾಮಿಕ ರೋಗಗಳ ಭೀತಿ ಹುಟ್ಟಿಸಿದ ತಿಪ್ಪೆಗುಂಡಿಯಲ್ಲಿ ನಿಂತಿರುವ ಮಳೆ ನೀರು.
ಹುಬ್ಬಳ್ಳಿ: ಪ್ರವಾಹದಿಂದ ನಡುಗಡ್ಡೆಯಂತಾಗಿದ್ದ ಬರದ್ವಾಡ ಗ್ರಾಮದಲ್ಲಿ ಸಾಂಕ್ರಾಮಿಕ ರೋಗದ ಭೀತಿ ಆವರಿಸಿದ್ದು, ತುರ್ತು ಸಂದರ್ಭದಲ್ಲಿ ಗ್ರಾಮದಿಂದ ಹೊರಗಡೆ ಹೋಗಲು ಸಂಪರ್ಕ ರಸ್ತೆಯೂ ಇಲ್ಲದಂತಾಗಿದೆ. ಎಲ್ಲ ಸೌಲಭ್ಯಗಳಿದ್ದರೂ ಮಳೆರಾಯನ ಅರ್ಭಟಕ್ಕೆ ಎಲ್ಲವೂ ನೀರು ಪಾಲಾಗಿವೆ.
ಪ್ರತ್ಯೇಕ ಗ್ರಾಪಂಗೆ ಒತ್ತಾಯಿಸಿ ಹೋರಾಟ ಕೈಗೊಂಡು ಗ್ರಾಪಂ ಅನುದಾನವನ್ನೇ ಧಿಕ್ಕರಿಸಿರುವ ಕುಂದಗೊಳ ತಾಲೂಕಿನ ಗ್ರಾಮದಲ್ಲಿ ಪ್ರಮುಖವಾಗಿ ನೈರ್ಮಲ್ಯದ ಕೊರತೆ ಎದ್ದು ಕಾಣುತ್ತಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಪಂ ಮೂಲಕ ಬರುವ ಯೋಜನೆ ಸೇರಿದಂತೆ ಇತರೆ ಯಾವುದೇ ಅನುದಾನ ಬಳಕೆಗೆ ಅಸಹಕಾರ ತೋರಿದ್ದಾರೆ. ಇದೀಗ ನಿರಂತರವಾಗಿ ಸುರಿಯುತ್ತಿರುವ ಮಳೆ ಪರಿಣಾಮ ಪ್ರಮುಖ ರಸ್ತೆಯಿಂದ ಹಿಡಿದು, ಓಣಿಯ ರಸ್ತೆಗಳು ಕೆಸರುಗದ್ದೆಯಂತಾಗಿದೆ. ಕಣ್ಣು ಹಾಯಿಸಿದಲ್ಲೆಲ್ಲ ನೀರು ನಿಂತಿದೆ. ಪರಿಣಾಮ ಸಾಂಕ್ರಾಮಿಕ ರೋಗಗಳ ಭೀತಿ ಗ್ರಾಮಸ್ಥರನ್ನು ಆವರಿಸಿದ್ದು, ಬಡವನ ಸಿಟ್ಟು ದವಡೆಗೆ ಮೂಲ ಎಂಬಂತಾಗಿದೆ ಇಲ್ಲಿನ ಜನರ ಪರಿಸ್ಥಿತಿ.
ಇದ್ದೂ ಇಲ್ಲದ ಪರಿಸ್ಥಿತಿ: ಕುಡಿಯುವ ನೀರಿನ ಪೈಪ್ಗ್ಳು ದೊಡ್ಡಹಳ್ಳದ ಪಾಲಾಗಿವೆ. ಇದರಿಂದ ಗ್ರಾಮದ ಜನರು ಕುಡಿಯುವ ನೀರಿಗೂ ಸಮಸ್ಯೆ ಅನುಭವಿಸುವಂತಾಗಿದೆ. 2 ಕಿಮೀ ದೂರದಿಂದ ಕುಡಿಯುವ ನೀರು ಹೊತ್ತು ತರುವಂತಾಗಿದೆ. ಸಂಪರ್ಕ ರಸ್ತೆ ಇಲ್ಲದ ಪರಿಣಾಮ ಆಸ್ಪತ್ರೆಗೆ ಹೋಗುವುದು ಕಷ್ಟವಾಗಿದೆ. ಶಾಲೆ ಶಿಕ್ಷಕರು, ಬ್ಯಾಂಕ್ ಸಿಬ್ಬಂದಿ, ಆಸ್ಪತ್ರೆ ಸಿಬ್ಬಂದಿ ಈ ಗ್ರಾಮಕ್ಕೆ ಬರುವುದಾದರೂ ಹೇಗೆ ಎನ್ನುವಂತಾಗಿದೆ. ನೆರೆ ಸಂದರ್ಭದಲ್ಲಿ ಸಿಬ್ಬಂದಿಯನ್ನು ಗ್ರಾಮಸ್ಥರೇ ಹಳ್ಳ ದಾಟಿಸಿದ್ದಾರೆ. ಇಲ್ಲಿನ ಪರಿಸ್ಥಿತಿ ಕಂಡು ಗ್ರಾಮಕ್ಕೆ ಯಾರೂ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎನ್ನುತ್ತಾರೆ ಗ್ರಾಮದ ನಿವಾಸಿ ರವಿಕುಮಾರ.
ಎಂಟು ತಿಂಗಳ ಹಿಂದೆ ಸೇತುವೆ ನಿರ್ಮಾಣಕ್ಕೆ ಪೂಜೆ ಮಾಡಲಾಗಿದೆ. ಶೇ.10 ಕಾಮಗಾರಿ ಮುಗಿದಿಲ್ಲ. ನಿರ್ಮಾಣ ಕಾರ್ಯ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಗ್ರಾಮದ ಜನರು ಸಮಸ್ಯೆ ಅನುಭವಿಸುವಂತಾಗಿದೆ. ಎರಡೂ ಭಾಗದಲ್ಲೂ ಸಂಪರ್ಕ ರಸ್ತೆ ಇಲ್ಲದೆ ಜನರು ಬದುಕುವಂತಾಗಿದೆ. ಕನಿಷ್ಠಪಕ್ಷ ತಾತ್ಕಾಲಿಕ ರಸ್ತೆ ನಿರ್ಮಾಣಕ್ಕೆ ಜಿಲ್ಲಾಡಳಿತ ಮುಂದಾಗಿಲ್ಲ.•ಫಕೀರಪ್ಪ ಮಾಡಳ್ಳಿ, ಗ್ರಾಮಸ್ಥ
•ಹೇಮರಡ್ಡಿ ಸೈದಾಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ