ಮಳೆ ಕೊರತೆ ಗಾಯಕ್ಕೆ ಕೀಟ-ರೋಗ ಬಾಧೆ ಬರೆ!


Team Udayavani, Jul 25, 2018, 5:18 PM IST

25-july-21.jpg

ಹುಬ್ಬಳ್ಳಿ: ಮುಂಗಾರು ಪೂರ್ವ ಮಳೆಯಿಂದ ಉತ್ತೇಜಿತಗೊಂಡಿದ್ದ ರೈತ ಸಮುದಾಯ ಉತ್ತಮ ಮುಂಗಾರು ಹಂಗಾಮು ನಿರೀಕ್ಷೆಯೊಂದಿಗೆ ಕೃಷಿ ಕಾಯಕಕ್ಕೆ ಮುಂದಾಗಿದ್ದರು. ಆದರೆ ಜೂನ್‌ ಮತ್ತು ಜುಲೈನಲ್ಲಿ ನಿರೀಕ್ಷೆಗಿಂತ ಕಡಿಮೆ ಮಳೆ ಬಿದ್ದು, ನಿರೀಕ್ಷೆಗೂ ಮೀರಿ ಬಿತ್ತನೆಯಾದ ಬೆಳೆಗಳು ಇದೀಗ ಸಂಕಷ್ಟ ಎದುರಿಸುವಂತಾಗಿದೆ. ಮಳೆ ಕೊರತೆ ಒಂದು ಕಡೆಯಾದರೆ, ಮೋಡ ಕವಿದ ವಾತಾವರಣದಿಂದ ಅಷ್ಟು ಇಷ್ಟು ಬೆಳೆದು ನಿಂತ ಇಲ್ಲವೆ ಬೆಳೆಯುವ ಹಂತದಲ್ಲಿರುವ ಬೆಳೆಗಳಿಗೆ ಕೀಟಬಾಧೆ ಹೆಚ್ಚಿರುವುದು ರೈತರನ್ನು ಚಿಂತೆಗೀಡು ಮಾಡಿದೆ.

ಮೇನಲ್ಲಿ ಹುಬ್ಬಳ್ಳಿ ತಾಲೂಕಿನಲ್ಲಿ 87.8 ಮಿಮೀ ಮಳೆಯಾಗಬೇಕಿತ್ತು. ಆದರೆ 187.4 ಮಿಮೀ ಮಳೆಯಾಗಿತ್ತು. ಹುಬ್ಬಳ್ಳಿ ಹೋಬಳಿಯಲ್ಲಿ 89.7 ಮಿಮೀ ಬದಲು 196.9, ಛಬ್ಬಿ ಹೋಬಳಿಯಲ್ಲಿ 88.4 ಮಿಮೀ ಬದಲಾಗಿ 178.8 ಮಿಮೀ, ಶಿರಗುಪ್ಪಿ ಹೋಬಳಿಯಲ್ಲಿ 87.2 ಮಿಮೀ ಬದಲಾಗಿ 187.1 ಮಿಮೀ ಮಳೆಯಾಗಿತ್ತು.

ಮುಂಗಾರು ಪೂರ್ವ ಮಳೆ ಉತ್ತಮವಾಗಿ ಬಿದ್ದಿದ್ದರಿಂದ ಉತ್ತಮ ಮುಂಗಾರು ಹಂಗಾಮು ನಿರೀಕ್ಷೆಯೊಂದಿಗೆ ರೈತರು ನಿರೀಕ್ಷೆಗಿಂತ ಹೆಚ್ಚಿನ ಪ್ರದೇಶದಲ್ಲಿ ಬಿತ್ತನೆ ಮಾಡಿದ್ದರು. ಆದರೆ, ಮುಂಗಾರು ಆರಂಭದ ನಂತರ ಮಳೆ ಪ್ರಮಾಣ ಕುಗ್ಗಿತು. ಜುಲೈ 24ರ ವರೆಗೆ ವಾಡಿಕೆ ಮಳೆಗೆ ಹೋಲಿಸಿದರೆ ತಾಲೂಕಿನಲ್ಲಿ ಮಳೆ ಪ್ರಮಾಣ ಕೊರತೆಯಾಗಿರುವುದು ಕಂಡುಬಂದಿದೆ. ಹುಬ್ಬಳ್ಳಿ ತಾಲೂಕಿನಲ್ಲಿ ವಾಡಿಕೆಗಿಂತ ಸರಾಸರಿ ಶೇ. 1 ಕಡಿಮೆ ಮಳೆಯಾಗಿದೆ. ಶಿರಗುಪ್ಪಿ ಹೋಬಳಿಯಲ್ಲಿ ಶೇ.16 ಮಳೆ ಕೊರತೆ ಉಂಟಾಗಿದೆ. ಹುಬ್ಬಳ್ಳಿ ಹೋಬಳಿಯಲ್ಲಿ ಶೇ.3 ಹಾಗೂ ಛಬ್ಬಿ ಹೋಬಳಿಯಲ್ಲಿ ಶೇ.19 ಹೆಚ್ಚು ಮಳೆಯಾಗಿದೆ.

ಕೀಟ ಬಾಧೆ: ತಾಲೂಕಿನ ನಗರ ಪ್ರದೇಶದಲ್ಲಿ ಅಲ್ಪ ಮಳೆಯಾಗುತ್ತಿದ್ದು ಗ್ರಾಮೀಣ ಭಾಗದಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ. ಮೋಡ ಕವಿದ ವಾತಾವರಣ ಇರುವುದರಿಂದ ಅಲ್ಲಲ್ಲಿ ಕೀಟಬಾಧೆ ಕಂಡು ಬಂದಿದೆ. ಅತೀ ಹೆಚ್ಚು ಬಿತ್ತನೆಯಾಗಿರುವ ಹೆಸರು ಬೆಳೆಗೆ ಬೂದಿ ರೋಗ ಹರಡುತ್ತಿದ್ದರೆ, ಶೇಂಗಾ ಬೆಳೆಗೆ ರಸ ಹೀರುವ ಕೀಟದ ಬಾಧೆ ಆರಂಭವಾಗಿದೆ.

ಕೀಟ-ರೋಗ ನಿಯಂತ್ರಣಕ್ಕೆ ಬೇಕಾದ ಕ್ರಮಗಳ ಕುರಿತಾಗಿ ಕೃಷಿ ಇಲಾಖೆ ಅಗತ್ಯ ಮಾಹಿತಿ ನೀಡುತ್ತಿದೆ. ತಾಲೂಕಿನ 50580 ಹೆಕ್ಟೇರ್‌ ಸಾಗುವಳಿ ಪ್ರದೇಶದಲ್ಲಿ ಈ ಬಾರಿ ಸುಮಾರು 32,636 ಹೆಕ್ಟೇರ್‌ ಪ್ರದೇಶದಲ್ಲಿ ಮುಂಗಾರು ಹಂಗಾಮು ಬಿತ್ತನೆ ಗುರಿ ಹೊಂದಲಾಗಿತ್ತು. ಆದರೆ ನಿರೀಕ್ಷಿತ ಗುರಿ ಮೀರಿ ಸುಮಾರು 37,247 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ.

ಬಿತ್ತನೆ ಪ್ರಮಾಣ: ಸುಮಾರು 11,166 ಹೆಕ್ಟೇರ್‌ ಪ್ರದೇಶದಲ್ಲಿ ಹೆಸರು ಬಿತ್ತನೆ ಮಾಡಲಾಗಿದ್ದು, 9250 ಹೆಕ್ಟೇರ್‌ ಪ್ರದೇಶದಲ್ಲಿ ಸೋಯಾಬೀನ್‌, 4350 ಹೆಕ್ಟೇರ್‌ ಪ್ರದೇಶದಲ್ಲಿ ಬಿ.ಟಿ. ಹತ್ತಿ, 4134 ಹೆಕ್ಟೇರ್‌ ಪ್ರದೇಶದಲ್ಲಿ ಗೋವಿನ ಜೋಳ, 784 ಹೆಕ್ಟೇರ್‌ನಲ್ಲಿ ಉದ್ದು, 321 ಹೆಕ್ಟೇರ್‌ನಲ್ಲಿ ತೊಗರಿ, 116 ಹೆಕ್ಟೇರ್‌ ಪ್ರದೇಶದಲ್ಲಿ ಕಬ್ಬು, 97 ಹೆಕ್ಟೇರ್‌ನಲ್ಲಿ ಸಿರಿಧಾನ್ಯ, 95 ಹೆಕ್ಟೇರ್‌ನಲ್ಲಿ ಭತ್ತ, 85 ಹೆಕ್ಟೇರ್‌ನಲ್ಲಿ ಜೋಳ, 51 ಹೆಕ್ಟೇರ್‌ ಪ್ರದೇಶದಲ್ಲಿ ಗುರೆಳ್ಳು, 44 ಹೆಕ್ಟೇರ್‌ ಪ್ರದೇಶದಲ್ಲಿ ಎಳ್ಳು ಬಿತ್ತನೆ ಮಾಡಲಾಗಿದೆ.

ಇಲಾಖೆಯಿಂದ ಬೀಜ ವಿತರಣೆ: ಕೃಷಿ ಇಲಾಖೆಯಿಂದ ಈಗಾಗಲೇ ಬಿತ್ತನೆ ಬೀಜ ವಿತರಣೆ ಮಾಡಲಾಗಿದ್ದು, 5340 ಕ್ವಿಂಟಲ್‌ ಸೋಯಾಬೀನ್‌, 713 ಕ್ವಿಂಟಲ್‌ ಶೇಂಗಾ, 328 ಕ್ವಿಂಟಲ್‌ ಹೆಸರು, 228 ಕ್ವಿಂಟಲ್‌ ಮುಸುಕಿನ ಜೋಳ, 101 ಕ್ವಿಂಟಲ್‌ ಉದ್ದು, 14 ಕ್ವಿಂಟಲ್‌ ತೊಗರಿ ಬೀಜಗಳನ್ನು ವಿತರಣೆ ಮಾಡಲಾಗಿದೆ.

ನಿರೀಕ್ಷಿತ ಮಳೆ ಇಲ್ಲದೆ ಬಿತ್ತನೆ ಮಾಡಿದ ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಪರದಾಡುತ್ತಿದ್ದಾರೆ. ಕಳೆದ ಮೂರು ವರ್ಷಗಳಿಂದ ಸತತ ಬರದಿಂದ ಕಂಗೆಟ್ಟಿರುವ ಕೃಷಿಕರು ಈ ಬಾರಿಯ ಮುಂಗಾರಿನಲ್ಲಿ ಉತ್ತಮ ಫ‌ಸಲಿನ ನಿರೀಕ್ಷೆ ಹೊಂದಿದ್ದರು. ಆದರೆ ಎರಡು ತಿಂಗಳ ಮಳೆ ಕೊರತೆ ಮತ್ತೂಮ್ಮೆ ಬರದ ಛಾಯೆಯ ಆತಂಕ ಸೃಷ್ಟಿಸಿದೆ. ವಾರದೊಳಗೆ ಮಳೆ ಬೀಳದಿದ್ದರೆ ಬೆಳೆ ಹಾನಿಗೀಡಾಗಲಿದೆ ಎಂಬ ಅಳಲು ರೈತರದ್ದಾಗಿದೆ.

ಮೋಡ ಕವಿದ ವಾತಾವರಣವಿದ್ದು, ಇದರಿಂದ ಕೆಲವೊಂದು ಪ್ರದೇಶಗಳಲ್ಲಿ ಬೆಳೆಗೆ ಕೀಟಬಾಧೆ ಕಂಡು ಬರುತ್ತಿದೆ. ಹೆಸರು ಬೆಳೆಗೆ ಬೂದಿ ರೋಗ, ಶೇಂಗಾದಲ್ಲಿ ರಸ ಹೀರುವ ಕೀಟದ ರೋಗ ಕಂಡು ಬರುತ್ತಿದ್ದು ರೈತರು ಅಗತ್ಯ ಕ್ರಮಕ್ಕೆ ಮುಂದಾಗಬೇಕು. ಇದಕ್ಕೆ ಬೇಕಾದ ಕ್ರಿಮಿನಾಶಕ ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತಾನು ಇದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು.
ರಾಜಶೇಖರ ಅನಗೌಡರ,
ಸಹಾಯಕ ಕೃಷಿ ನಿರ್ದೇಶಕ

ಬಸವರಾಜ ಹೂಗಾರ

ಟಾಪ್ ನ್ಯೂಸ್

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.