ಜಿಲ್ಲಾವಾರು ಮೌಲ್ಯಮಾಪನಕ್ಕೆ ಒತ್ತಾಯ
Team Udayavani, May 26, 2020, 8:51 AM IST
ಹುಬ್ಬಳ್ಳಿ: ಪಿಯುಸಿ ದ್ವಿತೀಯ ವರ್ಷದ ಮೌಲ್ಯಮಾಪನ ಕೇಂದ್ರೀಕರಣ ಗೊಳಿಸುತ್ತಿರುವುದು ಅವೈಜ್ಞಾನಿಕವಾಗಿದ್ದು, ಜಿಲ್ಲಾವಾರು ಮೌಲ್ಯಮಾಪನ ವ್ಯವಸ್ಥೆ ಮಾಡಬೇಕೆಂದು ಕೆಪಿಸಿಸಿ ಶಿಕ್ಷಕರು ಹಾಗೂ ಪದವೀಧರ ಘಟಕದ ರಾಜ್ಯಾಧ್ಯಕ್ಷ ಡಾ| ಆರ್. ಎಂ.ಕುಬೇರಪ್ಪ ಒತ್ತಾಯಿಸಿದ್ದಾರೆ.
ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಶಿಕ್ಷಕರು ಆಯ್ದ ಕೆಲ ಜಿಲ್ಲೆಗಳಿಗೆ ತೆರಳಿ ಮೌಲ್ಯಮಾಪನ ಮಾಡುವುದು ಕಷ್ಟದ ಕೆಲಸ. ಪರೀಕ್ಷಾ ಮಂಡಳಿ ಈ ಕುರಿತು ಕೂಡಲೇ ಎಚ್ಚೆತ್ತಕೊಳ್ಳಬೇಕಿದೆ. ಬೆಂಗಳೂರು, ಬೆಳಗಾವಿ, ಮಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿವೆ. ಇಂತಹ ಸ್ಥಳಗಳಿಗೆ ತೆರಳುವ ಶಿಕ್ಷಕರಿಗೆ ವಸತಿ, ಊಟದ ಸಮಸ್ಯೆ ಎದುರಾಗಲಿದೆ. ಶಿಕ್ಷಕರ ಸಮಸ್ಯೆಗಳ ಬಗ್ಗೆ ಯೋಚನೆ ಮಾಡದೆ ಮೌಲ್ಯಮಾಪನ ಕೇಂದ್ರೀಕರಣ ಗೊಳಿಸುವುದಕ್ಕೆ ಮುಂದಾಗಿರುವುದು ದುರ್ದೈವ ಸಂಗತಿ.
ಕೋವಿಡ್ ಪ್ರಕರಣ ಆರಂಭವಾದಾಗಿನಿಂದ ಶಿಕ್ಷಕರನ್ನು ಸರಕಾರ ಅತ್ಯಂತ ಹೀನಾಯವಾಗಿ ನಡೆಸಿಕೊಳ್ಳುತ್ತಿದ್ದು, ಅವರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದೆ. ಸರಕಾರ ಪರೀಕ್ಷಾ ಮೌಲ್ಯಮಾಪನ ಕಾರ್ಯವನ್ನು ಜಿಲ್ಲಾವಾರು ವ್ಯವಸ್ಥೆ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ