ನೆರೆ ಸಂತ್ರಸ್ತ ಗ್ರಾಮಗಳಿಗೆ ಬಸ್‌ ಬಿಡಲು ಸೂಚನೆ

•ತುಪ್ಪರಿ-ಬೆಣ್ಣೆ ಹಳ್ಳ ಸಮಸ್ಯೆ ನಿವಾರಣೆಗೆ ಯೋಜನಾ ವರದಿ ಸಿದ್ಧ: ಶಾಸಕ ಮುನೇನಕೊಪ್ಪ

Team Udayavani, Aug 11, 2019, 10:59 AM IST

huballi-tdy-3

ನವಲಗುಂದ: ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಅಧಿಕಾರಿಗಳ ಸಭೆ ನಡೆಸಿದರು.

ನವಲಗುಂದ: ನೆರೆ ಹಾವಳಿಯಿಂದ ತಾಲೂಕಿನಲ್ಲಿ ಯಾವುದೇ ಜೀವಹಾನಿಯಾಗದಂತೆ ಮುಂಜಾಗ್ರತೆ ವಹಿಸಿ ಕಾರ್ಯನಿರ್ವಹಿಸಿದ ತಾಲೂಕು ಅಧಿಕಾರಿಗಳ ಪ್ರಯತ್ನ, ಶ್ರಮ ಹೆಚ್ಚಿಗೆ ಇದೆ. ಗ್ರಾಮೀಣ ಪ್ರದೇಶಕ್ಕೆ ಸಾರಿಗೆ ವ್ಯವಸ್ಥೆ ಆದಷ್ಟು ಬೇಗ ಪ್ರಾರಂಭಿಸಿ. ವಿದ್ಯಾರ್ಥಿಗಳು ಹಾಗೂ ರೈತರು ತಮ್ಮ ದೈನಂದಿನ ಕೆಲಸಕ್ಕೆ ಹಾಜರಾಗುತ್ತಾರೆಂದು ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.

ತಾಲೂಕಾ ಸಭಾಭವನದಲ್ಲಿ ಶನಿವಾರ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. 2009ಕ್ಕಿಂತ ಈ ಭಾರಿ ಹೆಚ್ಚಿನ ಪ್ರಮಾಣದಲ್ಲಿ ನೀರು ಬಂದಿರುವುದರಿಂದ ರಸ್ತೆ, ಸೇತುವೆ, ಶಾಲೆಗಳಿಗೆ ಬಹಳ ಹಾನಿಯಾಗಿದೆ. ತಾಲೂಕು ಯಥಾಸ್ಥಿತಿಗೆ ಬರಬೇಕೆಂದರೆ ಮೊದಲು ಬಸ್‌ ಸಂಚಾರ ಪ್ರಾರಂಭವಾಗಬೇಕು. ವಾಹನಗಳು ಹೋಗುವಂತ ಸ್ಥಳಗಳಲ್ಲಿ ಬಸ್‌ ಸಂಚಾರವನ್ನು ಕೂಡಲೇ ಪ್ರಾರಂಭಿಸಬೇಕು. ಸೇತುವೆ, ರಸ್ತೆಗಳನ್ನು 10 ದಿನದೊಳಗಾಗಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ಇವುಗಳ ಅಂದಾಜು ಯೋಜನೆ ತಯಾರಿಸಿ ನೀಡಬೇಕು. ನೆರೆಹಾವಳಿ ಕುರಿತು ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸಿದ್ದೇನೆ ಎಂದು ತಿಳಿಸಿದರು.

ತಾಲೂಕಿನಲ್ಲಿ ನೆರೆಹಾವಳಿಗೆ ತುತ್ತಾದ ಮೊರಬ, ಗೊಮ್ಮಗೋಳ, ಶಿರೂರ ಇತರೆ ಗ್ರಾಮದಲ್ಲಿ ಸ್ಥಳಾಂತರಕ್ಕೆ ಸಂತ್ರಸ್ತರ ಒಪ್ಪಿಗೆ ಕುರಿತು ಅಧಿಕಾರಿಗಳು ದೃಢಪಡಿಸಿಕೊಂಡು ನನಗೆ ತಿಳಿಸಿದರೆ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರು. ಇನ್ನೂ ಮಳೆರಾಯ ನಿಂತಿಲ್ಲ.

ಆದರೆ ಪ್ರವಾಹ ಕಡಿಮೆಯಾಗಿದ್ದರಿಂದ ಜನರು ನಿಟ್ಟುಸಿರು ಬಿಟ್ಟು ತಮ್ಮ ಮನೆಗಳನ್ನು ಸ್ವಚ್ಛ ಮಾಡುತ್ತಿದ್ದಾರೆ ಎಂದರು.

ಹಾನಿ ವಿವರ ನೀಡಿದ ಅಧಿಕಾರಿಗಳು: ತಾಲೂಕಿನಲ್ಲಿ ಒಟ್ಟು 57 ಕುರಿಗಳು, ಅಣ್ಣಿಗೇರಿ ಭಾಗದ ನಲವಡಿಯಲ್ಲಿ 43 ಕುರಿಗಳು ಹಳ್ಳಕ್ಕೆ ಆಹುತಿಯಾಗಿವೆ. ಅವುಗಳಿಗೆ ಯೋಗ್ಯ ಪರಿಹಾರ ನೀಡಲಾಗುವುದು. ನಾಲ್ಕು ಅಂಗನವಾಡಿ ಕಟ್ಟಡಗಳು ಜಖಂಗೊಂಡಿವೆ. 17 ಶಾಲಾ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿರುವುದನ್ನು ಬಿಟ್ಟು ಉಳಿದವುಗಳನ್ನು ಪ್ರಾರಂಭಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮಾತನಾಡಿ, ಮೊರಬ-ಗುಮ್ಮಗೋಳ 40 ಲಕ್ಷ, ಶಿರಕೋಳ-ಹನಸಿ 100 ಲಕ್ಷ, ಬಳ್ಳೂರ-ಜಾವೂರ 12 ಲಕ್ಷ, ತಿರ್ಲಾಪುರ-ಬ್ಯಾಹಟ್ಟಿ 10 ಲಕ್ಷ, ಅಣ್ಣಿಗೇರಿ-ಶಿಶ್ವಿ‌ನಹಳ್ಳಿ ರಸ್ತೆ ಕಾಮಗಾರಿಗೆ 5 ಲಕ್ಷ ರೂ. ಅಗತ್ಯವಿದೆ ಎಂದು ತಿಳಿಸಿದರು.

ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸ್ಥಳದಲ್ಲಿ ಅಧಿಕಾರಿಗಳು ಪರಿಹಾರದ ಚೆಕ್‌ ನೀಡಿದ್ದಾರೆ. ಎಲ್ಲ ಗ್ರಾಮಗಳಲ್ಲಿ ಗ್ರಾಮಲೆಕ್ಕಾಧಿಕಾರಿ, ಗ್ರಾಮಸಹಾಯಕರು ಬಿದ್ದ ಮನೆಗಳ ವರದಿ ನೀಡಿದ ಮೇಲೆ ಅವರಿಗೆ ಯೋಗ್ಯ ಪರಿಹಾರವನ್ನು ನೀಡಲಾಗುವುದೆಂದು ಹೇಳಿದರು.

ತಹಶೀಲ್ದಾರ್‌ ನವೀನ ಹುಲ್ಲೂರ, ಶೋಭಿತಾ ಆರ್‌., ತಾಪಂ ಇಒ ಪವಿತ್ರಾ ಪಾಟೀಲ, ಸ್ಥಾಯಿ ಸಮಿತಿ ಅಧ್ಯಕ್ಷ ನಾಗನಗೌಡ ಪಾಟೀಲ ಮೊದಲಾದವರಿದ್ದರು.

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.