ಸ್ವಾತಂತ್ರ್ಯ ಯೋಧರಿಗೆ ಅವಮಾನ ಆರೋಪ-ಪ್ರತಿಭಟನೆ

ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು, ನಂತರ ಬಿಡುಗಡೆಗೊಳಿಸಿದರು.

Team Udayavani, Jul 27, 2022, 6:12 PM IST

ಸ್ವಾತಂತ್ರ್ಯ ಯೋಧರಿಗೆ ಅವಮಾನ ಆರೋಪ-ಪ್ರತಿಭಟನೆ

ಧಾರವಾಡ: ಸ್ವಾತಂತ್ರ್ಯ ಅಮೃತ ಮಹೋತ್ಸವ ಹೆಸರಿನಲ್ಲಿ ಕೇಂದ್ರ ವಾರ್ತಾ ಇಲಾಖೆ ಆಯೋಜಿಸಿರುವ ಛಾಯಾಚಿತ್ರ ಪ್ರದರ್ಶನದಲ್ಲಿ ಸ್ವಾತಂತ್ರ್ಯ ಯೋಧರಿಗೆ ಹಾಗೂ ಈವರೆಗೂ ದೇಶ ಮುನ್ನಡೆಸಿದ ಮಹನೀಯರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಕೆಸಿಡಿ ಆವರಣದಲ್ಲಿ ಕಾಂಗ್ರೆಸ್‌ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿದರು.

ಹಲವರ ತ್ಯಾಗ ಬಲಿದಾನದಿಂದಾಗಿ ನಮಗೆ ಸ್ವಾತಂತ್ರ್ಯ ಲಭಿಸಿದೆ. ಹಾಗೆಯೇ ನಂತರ ತಮ್ಮ ದೂರದೃಷ್ಟಿತ್ವದ ಮೂಲಕ ಮಹತ್ವದ ಯೋಜನೆಗಳನ್ನು ರೂಪಿಸಿ ಹಲವು ಪ್ರಧಾನಿಗಳು, ರಾಷ್ಟ್ರಪತಿಗಳು ದೇಶವನ್ನು ಮುನ್ನಡೆಸಿದ್ದಾರೆ. ಆದರೆ ಅವರೆಲ್ಲರನ್ನೂ ಬಿಟ್ಟು, ಕೇವಲ ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆ ಹೇಳಲು ಈ ಪ್ರದರ್ಶನ ಆಯೋಜಿಸಲಾಗಿದೆ ಎಂದು ದೂರಿದರು.

ಗಾಂಧೀಜಿ ಅವರ ಕುರಿತು ಸರಿಯಾದ ಮಾಹಿತಿ ಹಾಕಿಲ್ಲ. ಜವಾಹರಲಾಲ್‌ ನೆಹರು ಅವರ ಚಿತ್ರವನ್ನು ಕಾಣದಂತೆ ಮೂಲೆಯಲ್ಲಿ ಹಾಕಲಾಗಿದೆ. ದೇಶಕ್ಕಾಗಿ ಪ್ರಾಣವನ್ನೇ ನೀಡಿದ ಲಾಲ್‌ ಬಹದ್ದೂರ್‌ಶಾಸ್ತ್ರಿ, ಇಂದಿರಾಗಾಂಧಿ, ರಾಜೀವ ಗಾಂಧಿ, ಉದಾರ ಆರ್ಥಿಕ ನೀತಿ ತಂದ ನರಸಿಂಹ ರಾವ್‌, ಡಾ| ಮನಮೋಹನ ಸಿಂಗ್‌ ಅವರ ಚಿತ್ರಗಳು ಇಲ್ಲ. ತಮ್ಮದೇ ಪಕ್ಷದ ಅಟಲ್‌ ಬಿಹಾರಿ ವಾಜಪೇಯಿ ಅವರ ಕುರಿತ ಚಿತ್ರ ಹಾಗೂ ಮಾಹಿತಿ ಇಲ್ಲಿ ಇಲ್ಲ. ಕೇವಲ ಮೋದಿ ಅವರನ್ನು ವಿಜೃಂಭಿಸಲು ಈ ಪ್ರದರ್ಶನ ಬಳಸಲಾಗಿದೆ ಎಂದು ಆರೋಪಿಸಿದರು.

ಮುಖಂಡರಾದ ರಾಬರ್ಟ್‌ ದದ್ದಾಪುರಿ, ದೀಪಕ ಚಿಂಚೋರೆ ಮಾತನಾಡಿ, ಕಾಲೇಜು ಆವರಣದಲ್ಲಿ ಆಯೋಜಿಸಿರುವ ಈ ಪ್ರದರ್ಶನದಲ್ಲಿ ಸುಳ್ಳು ಮಾಹಿತಿಗಳನ್ನು ಹಾಕಲಾಗಿದೆ. ಇತಿಹಾಸ ತಿರುಚುವ ಕೆಲಸ ಮಾಡಲಾಗುತ್ತಿದೆ. ಇದನ್ನು ಸ್ವಾತಂತ್ರ್ಯ ಅಮೃತ ಮಹೋತ್ಸವ ಎನ್ನುವ ಬದಲು ಮೋದಿ ಸರ್ಕಾರದ ಸಾಧನೆ ಎಂದು ಆಯೋಜಿಸಲಿ ಎಂದರು.

ಇದು ಈ ದೇಶಕ್ಕೆ ಮಾಡಿರುವ ಅಪಮಾನ. ಹಾಗೆಯೇ ದೇಶದ ಪ್ರಧಾನಿ ಹುದ್ದೆಗೆ ಏರಿದ ಏಕೈಕ ಕನ್ನಡಿಗ ಎಚ್‌.ಡಿ.ದೇವೇಗೌಡರ ಚಿತ್ರ ಹಾಕದೇ ಇಡೀ ಕರ್ನಾಟಕಕ್ಕೆ ಅವಮಾನ ಮಾಡಲಾಗಿದೆ. ಸ್ವಾತಂತ್ರ್ಯೋತ್ಸವದ ಹೆಸರಿನಲ್ಲಿ ಆಯೋಜಿಸಿರುವ ಕೇಂದ್ರದ ಸಾಧನೆ ಪ್ರದರ್ಶನ ಕೂಡಲೇ ಸ್ಥಗಿತಗೊಳಿಸಬೇಕು. ಇಲ್ಲವಾದಲ್ಲಿ ಬುಧವಾರವೂ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.

ಸ್ಥಳಕ್ಕೆ ಬಂದ ಉಪನಗರ ಠಾಣೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು, ನಂತರ ಬಿಡುಗಡೆಗೊಳಿಸಿದರು. ಪಾಲಿಕೆ ಸದಸ್ಯರಾದ ಕವಿತಾ ಕಬ್ಬೇರ, ಸುರವ್ವ ಪಾಟೀಲ, ದೀಪಾ ನೀರಲಕಟ್ಟಿ, ಮಂಜುನಾಥ ಬಡಕುರಿ, ಶಂಭು ಸಾಲಿಮನಿ, ಗಣೇಶ ಮುಧೋಳ, ದೊರೆರಾಜ ಮಣಿಕುಂಟ್ಲ, ಪಕ್ಷದ ಬ್ಲಾಕ್‌ ಅಧ್ಯಕ್ಷ ಬಸವರಾಜ ಕಿತ್ತೂರ, ಆನಂದ ಜಾಧವ, ಜೇಮ್ಸ… ಯಾಮಾ, ಸುಧಾ ಮಣಿಕುಂಟ್ಲ, ಸದಾನಂದ ಡಂಗನವರ, ಸತೀಶ ತುರಮರಿ, ಗೌರಮ್ಮ ನಾಡಗೌಡ, ಸತೀಶ
ಗಿರಿಯನ್ನವರ, ಸಲೀಂ ಸಂಗನಮುಲ್ಲ, ಶಿವು ಚಿನ್ನಗೌಡ ಇನ್ನಿತರರಿದ್ದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.