ಉಕ ಸಮಗ್ರ ನೀರಾವರಿ; ಕೇಂದ್ರ ಸಚಿವರಿಗೆ ಮನವರಿಕೆ


Team Udayavani, Jul 5, 2019, 5:17 AM IST

Ban05071915Medn

ಹುಬ್ಬಳ್ಳಿ: ಉತ್ತರ ಕರ್ನಾಟಕ ಸಮಗ್ರ ನೀರಾವರಿ ಸೌಲಭ್ಯ ಕುರಿತ ಯೋಜನೆ, ಕೈಗೊಳ್ಳಬೇಕಾದ ಕ್ರಮಗಳ ಕುರಿತಾಗಿ ಎಂಆರ್‌ಎನ್‌(ನಿರಾಣಿ)ಫೌಂಡೇಶನ್‌ನ ಸಂಗಮೇಶ ನಿರಾಣಿ ನೇತೃತ್ವದ ವಿವಿಧ ಮಠಾಧೀಶರು ಹಾಗೂ ಜನಪ್ರನಿಧಿಗಳನ್ನೊಳಗೊಂಡ ರಾಜ್ಯದ ನಿಯೋಗ, ಗುರುವಾರ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಹಾಗೂ ಕೃಷಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.


ಕೇಂದ್ರ ಜಲಶಕ್ತಿ ಇಲಾಖೆ ಸಚಿವ ಗಜೇಂದ್ರಸಿಂಗ್‌ ಶೇಖಾವತ್‌, ಕೇಂದ್ರ ಕೃಷಿ ಸಚಿವ ಪುರುಷೋತ್ತಮ ರೂಪಾಲಾ ಅವರನ್ನು ಭೇಟಿ ಮಾಡಿದ ನಿಯೋಗ, ಉತ್ತರ ಕರ್ನಾಟಕದಲ್ಲಿ ನೀರಿನ ಬವಣೆ ನೀಗಿಸುವ ನಿಟ್ಟಿನಲ್ಲಿ ರೂಪಿಸಲಾದ ಕಾಳಿ ನದಿಯಿಂದ ಮಲಪ್ರಭಾ-ಘಟಪ್ರಭಾ ನದಿಗಳಿಗೆ ನೀರು ತರುವ ಅಮೃತಧಾರೆ ಯೋಜನೆ ಹಾಗೂ ಕೃಷ್ಣಾ ನದಿ ನೀರನ್ನು ಹಿಡಕಲ್ಲ ಹಾಗೂ ನವಿಲುತೀರ್ಥ ಜಲಾಶಗಳಿಗೆ ಸೇರಿಸುವ ಬಸವಧಾರೆ ಯೋಜನೆ ಕುರಿತು ಸಮಗ್ರ ಮಾಹಿತಿ ನೀಡಿತು.

ಉತ್ತರ ಕರ್ನಾಟಕ ಸಮಗ್ರ ನೀರಾವರಿ ಚಿಂತನೆ ರುವಾರಿ ಸಂಗಮೇಶ ನಿರಾಣಿ ಹಾಗೂ ನೀರಾವರಿ ತಜ್ಞ ರಂಗನಾಥ ಅವರು ಉತ್ತರ ಕರ್ನಾಟಕದಲ್ಲಿ ನೀರನ ಕೊರತೆ, ಪಶ್ಚಿಮಾಭಿಮುಖವಾಗಿ ಹರಿಯುತ್ತಿರುವ ನದಿಗಳ ನೀರಿನ ಬಳಕೆ, ಲಭ್ಯವಿರುವ ನೀರಿನ ಪ್ರಮಾಣ ಇನ್ನಿತರ ವಿಷಯಗಳನ್ನು ಸವಿಸ್ತಾರವಾಗಿ ಸಚಿವರಿಗೆ ವಿವರಿಸಿದರು.

ನಿಯೋಗದ ಮಾಹಿತಿಯಿಂದ ಪ್ರೇರಿತರಾದ ಜಲಶಕ್ತಿ ಸಚಿವರು ಕೇಂದ್ರ ಜಲಮಂಡಳಿ ಕಾರ್ಯದರ್ಶಿ ಹಾಗೂ ಅಧೀನ ಕಾರ್ಯದರ್ಶಿ ಹಾಗೂ ಹಿರಿಯ ಅಧಿಕಾರಿಗಳನ್ನು ಕಚೇರಿಗೆ ಕರೆಸಿಕೊಂಡು ಚರ್ಚಿಸಿದರಲ್ಲದೆ, ಯೋಜನೆ ಕುರಿತು ಸಂಪೂರ್ಣ ಅಧ್ಯಯನ ನಡೆಸಿ ವರದಿ ನೀಡುವಂತೆ ಸೂಚಿಸಿದ್ದಾರೆ.

ಯೋಜನೆ ಮಾರ್ಗದರ್ಶಕ ಹಾಗೂ ಶಾಸಕ ಮುರುಗೇಶ ನಿರಾಣಿ ಮಾತನಾಡಿ, ಉತ್ತರ ಕರ್ನಾಟಕದ ಸಮಗ್ರ ನೀರಾವರಿ ಸ್ಥಿತಿ ಕುರಿತು ಕೇಂದ್ರ ಸಚಿವರಿಗೆ ಮನವರಿಕೆ ಮಾಡಲಾಗಿದೆ. ಸಮಗ್ರ ನೀರಾವರಿ ಯೋಜನೆಗೆ ಅಗತ್ಯ ಸೌಲಭ್ಯ-ಸಹಕಾರ ನೀಡುವ ಕುರಿತು ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಭರವಸೆ ದೊರೆತಿದೆ ಎಂದು ತಿಳಿಸಿದ್ದಾರೆ.

ನಿಯೋಗ ಕೇಂದ್ರ ಸಚಿವರಾದ ಸುರೇಶ ಅಂಗಡಿ ಹಾಗೂ ಪ್ರಹ್ಲಾದ ಜೋಶಿ, ಪ್ರಧಾನಿ ಕಚೇರಿಗೂ ಭೇಟಿ ನೀಡಿ ಚರ್ಚಿಸಿತು. ಕೇಂದ್ರ ಜಲಶಕ್ತಿ ಹಾಗೂ ಕೃಷಿ ಸಚಿವರ ಭೇಟಿ ನಿಯೋಗದಲ್ಲಿ ಸಂಸದರಾದ ರಮೇಶ ಜಿಗಜಿಣಗಿ, ಪಿ.ಸಿ.ಗದ್ದಿಗೌಡರ, ಶಿವಕುಮಾರ ಉದಾಸಿ, ಜಿ.ಎಂ.ಸಿದ್ದೇಶ್ವರ, ಶೋಭಾ ಕರಂದ್ಲಾಜೆ, ಬಿ.ವೈ.ರಾಘವೇಂದ್ರ, ಮುಖಂಡರಾದ ಸಂದೀಪ ನಾಡಿಗೇರ, ಶಿವನಗೌಡ ಪಾಟೀಲ, ವೆಂಕಣ್ಣ ಗಿಡ್ಡಪ್ಪನವರ, ವರ್ಧಮಾನ ಯಲಗುದ್ರಿ, ಈಶ್ವರ ಕತ್ತಿ, ಡಾ|ರವಿ ಜಮಖಂಡಿ, ವೆಂಕಟೇಶ ದಾಸನ್ನವರ, ಲಕ್ಷ್ಮಪ್ಪ ದೊಡ್ಡಮನಿ, ಭರಮಪ್ಪ ಉಳ್ಳಾಗಡ್ಡಿ, ಗಿರೀಶ ಎಚ್., ವೆಂಕಟೇಶ ಜಂಬಗಿ ಇದ್ದರು.

ಔತಣಕೂಟ: ಉತ್ತರ ಕರ್ನಾಟಕದ ಸಮಗ್ರ ನೀರಾವರಿಯ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಆಗಮಿಸಿದ್ದ ನಿಯೋಗಕ್ಕೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ನಿವಾಸದಲ್ಲಿ ಗುರುವಾರ ಚರ್ಚೆ ಹಾಗೂ ಔತಣಕೂಟ ಏರ್ಪಡಿಸಲಾಗಿತ್ತು. ನಾಡಿನ ವಿವಿಧ ಮಠಾಧೀಶರು, ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಹಾಗೂ ರಾಜ್ಯದ ಸಂಸದರು, ನಿಯೋಗದ ವಿವಿಧ ಮುಖಂಡರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.