ಇನ್ನೂ ನಿಂತಿಲ್ಲ ಒಳ ಹೊಡೆತ ಆಂತರಿಕ ಬೆಂಕಿ ಕೊತ ಕೊತ


Team Udayavani, Jun 30, 2019, 9:16 AM IST

Udayavani Kannada Newspaper

ಹುಬ್ಬಳ್ಳಿ: ಆಂತರಿಕ ಕಚ್ಚಾಟಕ್ಕೆ ಸಿಲುಕಿರುವ ಕಾಂಗ್ರೆಸ್‌ ಲೋಕಸಭೆ ಚುನಾವಣೆ ಹೀನಾಯ ಸೋಲಿನ ನಂತರವೂ ಕಚ್ಚಾಟದಿಂದ ಹೊರಬರದೆ ಇನ್ನಷ್ಟು ಆಳಕ್ಕಿಳಿಯುತ್ತಿದೆ. ಧಾರವಾಡ ಜಿಲ್ಲೆ ಮಹಾನಗರ- ಗ್ರಾಮೀಣ ಕಾಂಗ್ರೆಸ್‌ ಸ್ಥಿತಿ ಇದಕ್ಕೆ ಪುಷ್ಟಿ ನೀಡುವಂತಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಿಗೇ ಸೆಡ್ಡು ಹೊಡೆಯುವ ರೀತಿಯಲ್ಲಿ ಪರ್ಯಾಯ ಸಭೆ ನಡೆದಿದೆ.

ಲೋಕಸಭೆ ಚುನಾವಣೆ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಎಐಸಿಸಿ ರಾಜ್ಯ ಕಾಂಗ್ರೆಸ್‌ನ ಎಲ್ಲ ಘಟಕಗಳನ್ನು ರದ್ದುಗೊಳಿಸಿತ್ತು. ಇಷ್ಟಾದರೂ ಕಾಂಗ್ರೆಸ್‌ನಲ್ಲಿನ ಬೇಗುದಿ ಇನ್ನೂ ಶಮನಗೊಂಡಿಲ್ಲ. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಪಾಲ್ಗೊಂಡ ಪಕ್ಷದ ಸಭೆಗೆ ಅನೇಕ ಜಿಲ್ಲಾ ಮುಖಂಡರು ಪಾಲ್ಗೊಳ್ಳದೆ, ಅದೇ ವೇಳೆ ಪರ್ಯಾಯ ಸಭೆ ನಡೆಸುವ ಮೂಲಕ ಕಾರ್ಯಾಧ್ಯಕ್ಷರಿಗೆ ಸೆಡ್ಡು ಹೊಡೆಯುವ ಯತ್ನ ತೋರಿದ್ದಾರೆ.

ಧಾರವಾಡ ಜಿಲ್ಲಾ ಕಾಂಗ್ರೆಸ್‌ ಬಗ್ಗೆ ಮಾತನಾಡಲು ಮುಂದಾದರೆ ಯಾವ ಗುಂಪಿನ ಕುರಿತಾಗಿ ಮಾತನಾಡುತ್ತಿದ್ದೀರಿ ಎಂದು ಕೇಳುವಂತಹ ಸ್ಥಿತಿ ಇದೆ. ಜಿಲ್ಲೆಗೊಂದು ಸ್ಪಷ್ಟ ನಾಯಕತ್ವವಿಲ್ಲದೆ, ಆಯಾ ಮುಖಂಡರು ತಮ್ಮ ತಮ್ಮ ಗುಂಪುಗಾರಿಕೆಯಲ್ಲಿ ತೊಡಗಿದ್ದಾರೆ. ಪಕ್ಷ ಸಂಘಟನೆ ಬದಲು ಒಂದು ಗುಂಪು, ಇನ್ನೊಂದು ಗುಂಪನ್ನು ಹಣಿಯುವುದು ಹೇಗೆ ಎಂಬುದರಲ್ಲೇ ಹೆಚ್ಚು ಮಗ್ನವಾಗಿರುತ್ತದೆ ಎಂಬುದನ್ನು ಕಾಂಗ್ರೆಸ್‌ ಕಾರ್ಯಕರ್ತರೇ ಒಪ್ಪುತ್ತಾರೆ. ಲೋಕಸಭೆ ಚುನಾವಣೆ ಸೋಲಿನ ನಂತರವಾದರೂ ಪಕ್ಷದಲ್ಲಿ ಒಗ್ಗಟ್ಟು ಬರುತ್ತದೆ, ಮುಂಬರುವ ಮಹಾನಗರ ಪಾಲಿಕೆ ಚುನಾವಣೆಗೆ ಸಂಘಟಿತ ಧ್ವನಿ ಮೊಳಗಲಿದೆ ಎಂಬ ಸಾಮಾನ್ಯ ಕಾರ್ಯಕರ್ತರ ನಿರೀಕ್ಷೆ ಹುಸಿಯಾಗುವ ಬೆಳವಣಿಗೆ ನಡೆಯತೊಡಗಿವೆ. ಇದಕ್ಕೆ ಪೂರಕವಾಗಿ ಒಂದೇ ದಿನ, ಒಂದೇ ಸಮಯಕ್ಕೆ ಕಾಂಗ್ರೆಸ್‌ನ ಎರಡು ಸಭೆಗಳು ನಡೆದಿವೆ. ಒಂದು ಆತ್ಮಾಲೋಕನ ಹೆಸರಲ್ಲಿ ನಡೆದರೆ, ಇನ್ನೊಂದು ಚಿಂತನ-ಮಂಥನ ಹೆಸರಲ್ಲಿ ನಡೆದಿದೆ.

ಪಕ್ಷಕ್ಕಿದು ಮುಜುಗರ ಸ್ಥಿತಿ: ವಿಧಾನಸಭೆ ಚುನಾವಣೆಯಲ್ಲಿ 2013ಕ್ಕೆ ಹೋಲಿಸಿದರೆ 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ ಇದ್ದ ಸ್ಥಾನಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗದೆ, ಇದ್ದ ನಾಲ್ಕು ಸ್ಥಾನಗಳನ್ನು ಉಳಿಸಿಕೊಳ್ಳಲಾಗದೆ ಕೇವಲ ಎರಡು ಶಾಸಕ ಸ್ಥಾನಕ್ಕೆ ಕುಸಿದಿತ್ತು. 2019ರ ಲೋಕಸಭೆ ಚುನಾವಣೆಯಲ್ಲೂ ನಿರೀಕ್ಷೆಗೂ ಮೀರಿದ ರೀತಿಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್‌ಗೆ ಪಕ್ಷದಲ್ಲಿ ಸಂಘಟನೆ ಬದಲು ವಿಘಟನೆ ಹೆಚ್ಚುತ್ತಿರುವುದು ಮುಜುಗರ ಸ್ಥಿತಿ ಸೃಷ್ಟಿಸತೊಡಗಿದೆ.

ಹತ್ತು ವರ್ಷಗಳಿಂದ ಪಾಲಿಕೆ ಅಧಿಕಾರ ಹಿಡಿಯುವಲ್ಲಿ ವಿಫ‌ಲವಾಗಿರುವ ಕಾಂಗ್ರೆಸ್‌, ಇದೇ ವರ್ಷ ನಡೆಯುವ ಪಾಲಿಕೆ ಚುನಾವಣೆಯಲ್ಲಿ ಆಂತರಿಕ ಕಚ್ಚಾಟಕ್ಕೆ ಸಿಲುಕಿದೆ. ಇದೇ ರೀತಿ ಮುಂದುವರೆದರೆ ಮುಂಬರುವ ಪಾಲಿಕೆ ಚುನಾವಣೆಯಲ್ಲಿ ಇದ್ದ ಸ್ಥಾನಗಳನ್ನು ಗೆಲ್ಲುತ್ತೇವೆಯೇ ಎಂಬ ಆಂತಕದ ಪ್ರಶ್ನೆ ಕಾಂಗ್ರೆಸ್‌ನ ಸಾಮಾನ್ಯ ಕಾರ್ಯಕರ್ತರದ್ದಾಗಿದೆ.

ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಸ್ಥಿತಿ ಎಷ್ಟು ದಯನಿಯವಾಗಿದೆ ಎಂದರೆ, ವಿಪಕ್ಷಗಳು ಕಾಂಗ್ರೆಸ್‌ ಪಕ್ಷ ಹಾಗೂ ನಾಯಕರ ವಿರುದ್ಧ ಆರೋಪಗಳ ಸುರಿಮಳೆಗೈದರೂ, ವಾಗ್ಧಾಳಿ ನಡೆಸಿದರೂ, ಆಡಳಿತದಲ್ಲಿರುವ ಸರ್ಕಾರ ಜನವಿರೋಧಿ ನೀತಿಗಳನ್ನು ಜಾರಿಗೊಳಿಸಿದರೂ ಗಟ್ಟಿ ಧ್ವನಿಯಲ್ಲಿ ಹೋರಾಟ ಮಾಡುವುದಿರಲಿ, ಆರೋಪಗಳಿಗೆ ಎದುರೇಟು, ಹೇಳಿಕೆ ನೀಡುವುದಕ್ಕೂ ಯಾರೂ ಇಲ್ಲವೇನೋ ಎನ್ನುವ ಸ್ಥಿತಿ ನಿರ್ಮಾಣಗೊಂಡಿದೆ.

 

•ಅಮರೇಗೌಡ ಗೋನವಾರ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.