ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ
ಪರೀಕ್ಷೆ ಭಯ ಬೇಡ; ವಿದ್ಯಾರ್ಥಿಗಳಿಗೆ ಕೇಂದ್ರ ಸಚಿವ ಜೋಶಿ ಕರೆ
Team Udayavani, Jan 22, 2023, 2:11 PM IST
ಹುಬ್ಬಳ್ಳಿ: ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕ ಗಳಿಕೆ ಕುರಿತಾಗಿ ಪಾಲಕರು ಮಕ್ಕಳ ಮೇಲೆ ಒತ್ತಡ ಹಾಕಬಾರದು. ಅದೇ ರೀತಿ ವಿದ್ಯಾರ್ಥಿಗಳು ಪರೀಕ್ಷೆ ಭಯ ಇರಿಸಿಕೊಳ್ಳದೆ ಸಮರ್ಪಕವಾಗಿ ಪರೀಕ್ಷೆ ಎದುರಿಸಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
“ಸಂಸದ ಸಾಂಸ್ಕೃತಿಕ ಮಹೋತ್ಸವ’ ಅಂಗವಾಗಿ ಆಯೋಜಿರುವ ಎರಡು ದಿನಗಳ ಅಂತಾರಾಷ್ಟ್ರೀಯ ಗಾಳಿಪಟ ಹಾಗೂ ಸಾಂಸ್ಕೃತಿಕ ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಪುಸ್ತಕ ಒಳ್ಳೆಯ ಸಂಗಾತಿ. ಪರೀಕ್ಷೆ ಭಯ ಬೇಡ, ಅದಕ್ಕಾಗಿಯೇ ಪ್ರಧಾನಿ ನರೇಂದ್ರ ಮೋದಿಯವರು ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದು, ಪರೀಕ್ಷಾ ಯೋಧರು ಎಂಬ ಕೃತಿ ಬರೆದಿದ್ದು, ಅದನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಓದಬೇಕು ಎಂದರು.
ಪರೀಕ್ಷೆ ಕೇವಲ ನಿಮ್ಮ ಓದಿನ ಪರೀಕ್ಷೆಯೇ ವಿನಃ ಜೀವನ ಪರೀಕ್ಷೆ ಅಲ್ಲ. ಜ.27ರಂದು ಪ್ರಧಾನಿ ನರೇಂದ್ರ ಮೋದಿಯವರು ಪರೀಕ್ಷೆ ಕುರಿತಾಗಿ ಮಾತನಾಡಲಿದ್ದು, ಎಲ್ಲ ಶಾಲೆಗಳಲ್ಲಿಯೂ ಸ್ಕ್ರೀನ್ ಮೂಲಕ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಬೇಕು. ಡಿಜಿಟಲ್ ಬೋರ್ಡ್ ವ್ಯವಸ್ಥೆ ಇದ್ದ ಕಡೆ ಅದನ್ನು ಬಳಸಿಕೊಳ್ಳಬೇಕು ಎಂದು ಡಿಡಿಪಿಐ ಹಾಗೂ ಬಿಇಒ ಅವರಿಗೆ ಸೂಚಿಸಿದರು.
ಪ್ರಧಾನಿಯವರ ಪರೀಕ್ಷಾ ಯೋಧರು ಕೃತಿ ಕನ್ನಡದಲ್ಲಿ ಬಂದಿದ್ದು, ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಶಾಲೆಗಳಿಗೆ ನಾಲ್ಕೈದು ಪುಸ್ತಕಗಳನ್ನು ನೀಡಲಾಗುವುದು ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಮಾತನಾಡಿ, ಗಾಳಿಪಟ ಉತ್ಸವ ಹಮ್ಮಿಕೊಂಡಿರುವುದು ಉತ್ತಮ ಕಾರ್ಯ. ನಮ್ಮ ಸಂಸ್ಕೃತಿ, ಪರಂಪರೆ, ಗ್ರಾಮೀಣ ಸೊಗಡು ಮರೆಯಾಗುತ್ತಿರುವ, ಗಾಳಿಪಟ ಹಾರಿಸುವುದು ಕಡಿಮೆ ಆಗುತ್ತಿರುವ ಇಂದಿನ ಸ್ಥಿತಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು.
ಡಿಡಿಪಿಐ ಎಸ್.ಎಸ್. ಕೆಳದಿಮಠ, ಬಿಇಒ ಚನ್ನಪ್ಪಗೌಡ, ಉದ್ಯಮಿ ಡಾ| ವಿಎಸ್ವಿ ಪ್ರಸಾದ ಇನ್ನಿತರರಿದ್ದರು. ವಿದ್ಯಾರ್ಥಿಗಳಿಗೆ ಚಿತ್ರಕಲೆ ಸ್ಪರ್ಧೆ ಹಾಗೂ ಪರೀಕ್ಷಾ ಪೇ ಚರ್ಚೆ ಸ್ಪರ್ಧೆ ನಡೆಯಿತು. 120ಕ್ಕೂ ಹೆಚ್ಚು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ