ಇನ್ನೆರಡು ದಿನದಲ್ಲಿ ಕೊಲ್ಲಾಪುರಕ್ಕೆ ತನಿಖಾ ತಂಡ


Team Udayavani, Nov 18, 2019, 10:44 AM IST

huballi-tdy-4

ಹುಬ್ಬಳ್ಳಿ: ನಗರದ ರೈಲ್ವೆ ನಿಲ್ದಾಣದಲ್ಲಿ ಅ.21ರಂದು ಅನುಮಾನಾಸ್ಪದ ವಸ್ತುವೊಂದು ಸ್ಫೋಟಗೊಂಡು ಆತಂಕ ಸೃಷ್ಟಿಸಿದ್ದ ಘಟನೆಗೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರೈಲ್ವೆ ಪೊಲೀಸ್‌ ಹಿರಿಯ ಅಧಿಕಾರಿಗಳ ತಂಡ ಇನ್ನೆರಡು ದಿನಗಳಲ್ಲಿ ಕೊಲ್ಲಾಪುರಕ್ಕೆ ತೆರಳಿ ಶಾಸಕರನ್ನು ಭೇಟಿ ಮಾಡಿ, ಅವರಿಂದ ಇನ್ನಷ್ಟು ಮಾಹಿತಿ ಕಲೆ ಹಾಕಲು ಮುಂದಾಗಿದೆ.

ಅ.21ರಂದು ವಿಜಯವಾಡ- ಹುಬ್ಬಳ್ಳಿ ಅಮರಾವತಿ ಎಕ್ಸಪ್ರಸ್‌ (17225) ರೈಲಿನ ಸಾಮಾನ್ಯ ಬೋಗಿಯ ಸೀಟಿನ ಕೆಳಗಡೆ ಸಂಶಯಾಸ್ಪದ ಬಕೆಟ್‌ ನಲ್ಲಿಡಲಾಗಿದ್ದ ಊಟದ ಡಬ್ಬಿಗಳಲ್ಲಿನ ವಸ್ತು ಸ್ಫೋಟಗೊಂಡು ಓರ್ವ ವೆಂಡರ್‌ನ ಕೈಗೆ ಬಲವಾದ ಗಾಯವಾಗಿತ್ತು. ಅಲ್ಲದೆ ಸ್ಟೇಶನ್‌ ಮಾಸ್ಟರ್‌ ಅವರ ಕಚೇರಿಯ ಗಾಜು ಪುಡಿ ಪುಡಿಯಾಗಿತ್ತು. ಈ ಸ್ಫೋಟಕ ವಸ್ತುಗಳ ಬಕೆಟ್‌ನ ಮೇಲೆ “ಪ್ರಕಾಶ ಅಭಿತಕರ, ಬುಧರಘಡ ತಾಲೂಕು, ಎಂಎಲ್‌ಎ ಗರಗೋಟಿ, ಕೊಲ್ಹಾಪುರ ಜಿಲ್ಲೆ ಎಂಎಸ್‌ ಸ್ಟೇಟ್‌ ಎಂದು ಹಾಗೂ ನೋ ಬಿಜೆಪಿ, ನೋ ಆರ್‌ಎಸ್‌ ಎಸ್‌, ಓನ್ಲಿ ಶಿವಸೇನಾ’ ಎಂದು ಇಂಗ್ಲಿಷ್‌ ಹಾಗೂ ತಮಿಳು ಭಾಷೆಯಲ್ಲಿ ಪ್ರತ್ಯೇಕವಾಗಿ ಬರೆದ ಲೇಬಲ್‌ ಅಂಟಿಸಲಾಗಿತ್ತು. ಈ ಸಂದರ್ಭದಲ್ಲಿ ಮಹಾರಾಷ್ಟ್ರದಲ್ಲಿ ಚುನಾವಣೆ ನಡೆಯುತ್ತಿತ್ತು. ಹೀಗಾಗಿ ಈ ಸ್ಫೋಟಕವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಅ. 28ರಂದು ಬೆಂಗಳೂರಿನಿಂದ ಆಗಮಿಸಿದ್ದ ಬಾಂಬ್‌ ಪತ್ತೆ ಮತ್ತು ನಿಷ್ಕ್ರಿಯ ತಂಡ(ಬಿಡಿಡಿಎಸ್‌) ವು ಸ್ಫೋಟಕ ವಸ್ತುಗಳನ್ನು ಇಲ್ಲಿನ ಗೋಕುಲ ರಸ್ತೆಯ ಹೊಸ ಸಿಎಆರ್‌ ಮೈದಾನದಲ್ಲಿ ನಿಷ್ಕ್ರಿಯಯಗೊಳಿಸಿತ್ತು.

ಇನ್ನೂ ಸಿಗದ ಸುಳಿವು: ಸ್ಫೋಟಕ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರೈಲ್ವೆ ಇಲಾಖೆ ಘಟನೆಗೆ ಸಂಬಂಧಿಸಿ ತನಿಖೆ ನಡೆಸಲು ರೈಲ್ವೆ ಪೊಲೀಸ್‌ ಠಾಣೆ ಡಿವೈಎಸ್‌ಪಿ ಬಸನಗೌಡ ಬಿ. ಪಾಟೀಲ ನೇತೃತ್ವದಲ್ಲಿ ಮೂರು ವಿಶೇಷ ತಂಡ ರಚಿಸಿದೆ. ಈ ತಂಡಗಳು ಈಗಾಗಲೇ ವಿಜಯವಾಡ, ಕೊಲ್ಲಾಪುರಕ್ಕೆ ಎರಡು ಬಾರಿ ತೆರಳಿ ಘಟನೆಯ ಕುರಿತು ಒಂದಿಷ್ಟು ಮಾಹಿತಿ ಕಲೆ ಹಾಕಿವೆ. ಅಲ್ಲದೆ ಹುಬ್ಬಳ್ಳಿಯಿಂದ ವಿಜಯವಾಡ ಹಾಗೂ ಕೊಲ್ಲಾಪುರವರೆಗಿನ ರೈಲ್ವೆ ನಿಲ್ದಾಣಗಳಲ್ಲಿ ಸಿಸಿಟಿವಿ ಫೂಟೇಜ್‌ಗಳನ್ನು ಸಂಗ್ರಹಿಸಿವೆ.

ಮೊಬೈಲ್‌ ಕರೆಗಳನ್ನು ಪರಿಶೀಲಿಸಿವೆ. ಆದರೆ ಇದುವರೆಗೂ ಈ ಸ್ಫೋಟಕ ವಸ್ತುಗಳು ಎಲ್ಲಿಂದ ಬಂದಿದ್ದವು. ಅವನ್ನು ರೈಲಿನಲ್ಲಿ ಯಾರು ತಂದು ಇಟ್ಟಿದ್ದರು. ಇವನ್ನು ಎಲ್ಲಿಗೆ ಒಯ್ಯಲಾಗುತ್ತಿತ್ತು ಎಂಬ ಕುರಿತು ಸುಳಿವು ದೊರೆತಿಲ್ಲ. ಅಲ್ಲದೆ ಈ ತನಿಖಾ ತಂಡಗಳಿಗೆ ಕೆಲವು ರೈಲ್ವೆ ನಿಲ್ದಾಣಗಳಲ್ಲಿ ಸಿಸಿಟಿವಿ ಫೂಟೇಜ್‌ಗಳು ಸಿಕ್ಕಿಲ್ಲ. ಹೀಗಾಗಿ ಪ್ರಕರಣದ ತನಿಖೆ ನಡೆಸುತ್ತಿರುವ ಡಿವೈಎಸ್‌ಪಿ ಬಿ.ಬಿ. ಪಾಟೀಲ ಅವರು ಇನ್ನೆರಡು ದಿನಗಳಲ್ಲಿ ಕೊಲ್ಲಾಪುರಕ್ಕೆ ತೆರಳಿ, ಶಾಸಕರನ್ನು ಭೇಟಿ ಮಾಡಿ ಅವರಿಂದ ಒಂದಿಷ್ಟು ಮಾಹಿತಿ ಕಲೆ ಹಾಕಲು ಮುಂದಾಗಿದ್ದಾರೆಂದು ತಿಳಿದು ಬಂದಿದೆ.

ಬಕೆಟ್‌ ಲೇಬಲ್‌ ಮೇಲೆ ಶಾಸಕರ ಹೆಸರೇಕೆ?: ಮಹಾರಾಷ್ಟ್ರದಲ್ಲಿ ಚುನಾವಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಸ್ಫೋಟಕ ವಸ್ತುಗಳನ್ನು ಹೊಂದಿದ್ದ ಬಕೆಟ್‌ನ ಲೇಬಲ್‌ ಮೇಲೆ ಬುಧರಘಡ ತಾಲೂಕ ಗರಗೋಟಿ ಶಾಸಕ ಪ್ರಕಾಶ ಅಭಿತಕರ ಹೆಸರನ್ನು ನಮೂದಿಸಲಾಗಿತ್ತು. ಶಾಸಕರ ಮೇಲೆ ವೈಯಕ್ತಿಕ ದ್ವೇಷ ಹೊಂದಿದವರೆ ಹೀಗೆ ಮಾಡಿದ್ದಾರೆಯೇಹೇಗೆ? ಬಕೆಟ್‌ ಮೇಲೆ ಶಾಸಕರ ಹೆಸರು ಹೇಗೆ ಬಂತು ಸೇರಿದಂತೆ ಇನ್ನಿತರೆ ಮಾಹಿತಿ ಕಲೆ ಹಾಕುವ ಸಲುವಾಗಿ ತನಿಖಾ ತಂಡವು ಶಾಸಕ ಪ್ರಕಾಶ ಅಭಿತಕರ ಅವರನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಆದರೆ ಮಹಾರಾಷ್ಟ್ರದಲ್ಲಿ ಶಿವಸೇನೆಯವರು ಸರಕಾರ ರಚನೆಯಲ್ಲಿ ಆಗಿರುವ ಸಮಸ್ಯೆಯಿಂದ ತಮ್ಮ ಶಾಸಕರನ್ನೆಲ್ಲ ಹೊಟೇಲ್‌ವೊಂದರಲ್ಲಿ ಕೂಡಿ ಹಾಕಿದ್ದರಿಂದ ತನಿಖಾ ತಂಡಕ್ಕೆ ಶಾಸಕರನ್ನು ಭೇಟಿ ಆಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಇನ್ನೆರಡು ದಿನಗಳಲ್ಲಿ ಅಲ್ಲಿ ಸರಕಾರ ರಚನೆ ಸುಸೂತ್ರವಾಗುವ ಲಕ್ಷಣಗಳು ಇರುವ ಕಾರಣ ತಂಡವು ಶಾಸಕ ಪ್ರಕಾಶ ಅಭಿತಕರ ಅವರನ್ನು ಭೇಟಿ ಮಾಡಿ, ಅವರಿಂದಲೇ ಒಂದಿಷ್ಟು ಮಾಹಿತಿ ಕಲೆ ಹಾಕಲು ಯೋಚಿಸಿದೆ ಎಂದು ತಿಳಿದು ಬಂದಿದೆ.

 

-ಶಿವಶಂಕರ ಕಂಠಿ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.