ಕಾಂಗ್ರೆಸ್ ನಾಯಕರಿಂದ ಬೇಜವಾಬ್ದಾರಿ ವರ್ತನೆ: ಜಗದೀಶ ಶೆಟ್ಟರ್
Team Udayavani, Sep 24, 2022, 11:52 PM IST
ಹುಬ್ಬಳ್ಳಿ: ಕಾಂಗ್ರೆಸ್ ನಾಯಕರು ಯಾವುದೇ ದಾಖಲೆಗಳಿಲ್ಲದೆ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ. ವಿಪಕ್ಷವಾಗಿ ಕೆಲಸ ಮಾಡಲು ಅವರು ನಾಲಾಯಕ್ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತವನ್ನು ಬಲಗೊಳಿಸಲಾಗಿದೆ. ಸರಕಾರ ಭ್ರಷ್ಟಾಚಾರ ನಡೆಸಿದ ಬಗ್ಗೆ ದಾಖಲೆಗಳು ಇದ್ದರೆ ಸಲ್ಲಿಸಿ ತನಿಖೆಗೆ ಒತ್ತಾಯಿಸಲಿ. ವಿನಾಕಾರಣ ಆಧಾರರಹಿತ ಆರೋಪ ಸರಿಯಲ್ಲ. ಗುತ್ತಿಗೆದಾರರು ಪ್ರಧಾನಿಯವರಿಗೆ ಸಲ್ಲಿಸಿರುವ ಪತ್ರ ಇಟ್ಟುಕೊಂಡು ಓಡಾಡುತ್ತಿದ್ದಾರೆ. ಇಂತಹ ಕಾರ್ಯಗಳಿಂದಾಗಿಯೇ ಕಾಂಗ್ರೆಸ್ ಅಸಮರ್ಥ ವಿಪಕ್ಷವಾಗಿದೆ ಎಂದರು.
ಯುಪಿಎ ಸರಕಾರದ ಅವಧಿಯಲ್ಲಿ ಸಾಕಷ್ಟು ಹಗರಣಗಳು ನಡೆದಿವೆ. ಅರ್ಕಾವತಿ ಸಹಿತ ಹಲವು ಅವ್ಯವಹಾರಗಳು ನಡೆದಿವೆ. ಡಿ.ಕೆ.ಶಿವಕುಮಾರ್ ಮೇಲೆ ಸಾಕಷ್ಟು ದೂರುಗಳಿದ್ದು, ಅವರು ಜೈಲಿಗೂ ಹೋಗಿ ಬಂದಿದ್ದಾರೆ. ಇವರು ಯಾವ ನೈತಿಕತೆ ಇಟ್ಟುಕೊಂಡು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಪ್ರಶ್ನಿಸಿದ ಅವರು, ಮುಖ್ಯಮಂತ್ರಿಗಳ ಬಗ್ಗೆ ಅಪಪ್ರಚಾರವೇ ಕಾಂಗ್ರೆಸ್ಗೆ ಮುಳುವಾಗಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ